2024ರ ಹೊಸವರ್ಷದ ಸಂಭ್ರಮಾಚರಣೆ: ಮಾದಕ ವಸ್ತು ಹೆಚ್ಚಿನ ಬೆಲೆಗೆ ಮಾರಾಟ ಆರೋಪ:1.54 ಕೆಜಿ ಗಾಂಜಾ ಜಪ್ತಿ

2024ರ ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ಮಾದಕ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದ ಡ್ರಗ್ ಪೆಡ್ಲರ್‌ನ್ನು ಬೆಂಗಳೂರು ನಗರ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯು ಪತ್ತೆ ಹಚ್ಚಿ ಬಂಧಿಸಿದ್ದಾರೆ, 8,40,000 ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ 25g, 30 ಎಕ್ಸ್‌ಟಿಸಿ ಮಾತ್ರೆಗಳು ಹಾಗೂ ಸ್ಥಳೀಯ ಡ್ರಗ್‌ ಡೀಲರ್‌ ಗಳಿಂದ ಪಡೆದುಕೊಂಡಿದ್ದ ಎನ್ನಲಾಗಿದೆ. 1.54 ಕೆಜಿ ಗಾಂಜಾವನ್ನು  ವಶಕ್ಕೆ ಪಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತರಾದ ಬಿ‌.ದಯಾನಂದ್ ಅವರು ತಿಳಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿ ವಂಚಿಸಲು ಯತ್ನಿಸಿರುವ ಆರೋಪದ ಮೇಲೆ ಓರ್ವನನ್ನು ಬೆಂಗಳೂರು ನಗರ ಅಪರಾಧ ನಿಯಂತ್ರಣ ದಳ ತಂಡದ ಪೊಲೀಸರು  ಬಂಧಿಸಿದ್ದಾರೆ. ಆರೋಪಿಯು, ಮೂಲತಃ ಆಂಧ್ರಪ್ರದೇಶದವನಾಗಿದ್ದು, ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಟ್ಟುಕೊಂಡು ದಾಖಲಾಗಿರುವ ಪ್ರಕರಣಗಳನ್ನು ಮುಚ್ಚಲು ಹಣ ನೀಡಬೇಕಾಗುತ್ತದೆ ಎಂದು ಬೇಡಿಕೆ ಇಟ್ಟು ಹಣ ಪಾವತಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದನು.

ಈತನು ಈ ಹಿಂದೆ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದಾದ್ಯಂತ  ಸಹ ಸರ್ಕಾರಿ ನೌಕರರಿಗೆ 35ಕ್ಕೂ ಹೆಚ್ಚು ಇದೇ ರೀತಿ ಕರೆ ಮಾಡಿ, ಬೆದರಿಸಿ ಹಣ ವಸೂಲಿ ಮಾಡಿರುವುದು ತನಿಖೆ ವೇಳೆ ತಿಳಿದು ಬಂದಿರುತ್ತದೆ. ಇದರ ಹಿನ್ನೆಲೆಯಲ್ಲಿ, ಈ ರೀತಿಯ ಹಗರಣಕ್ಕೆ ಬಲಿಯಾಗಿರಬಹುದಾದ ವ್ಯಕ್ತಿಗಳು ಮುಂದೆ ಬಂದು  ದೂರುಗಳೊಂದಿಗೆ ಪ್ರಕರಣವನ್ನು ತಕ್ಷಣವೇ   ದಾಖಲಿಸುವಂತೆ ಬೆಂಗಳೂರು ನಗರ ಪೊಲೀಸರು  ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸಾರ್ವಜನಿಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಅವರಿಂದ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಪ್ರಯತ್ನಿಸುತ್ತಿದ್ದ 06 ಜನರನ್ನು ಹಾಗೂ ಅರೋಪಿಗಳಿಂದ 06 ಮಾರಕಾಸ್ತ್ರಗಳು ಮತ್ತು ಕೃತ್ಯಕ್ಕೆ ಉಪಯೋಗಿಸಿದ 03 ಬೈಕ್‌ಗಳನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿರುತ್ತಾರೆ.

ಆರೋಪಿತರ ಪೈಕಿ ಒಬ್ಬ ಆರೋಪಿಯ ವಿರುದ್ಧ 2018ರಲ್ಲಿ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಡಕಾಯತಿ ಪ್ರಕರಣ ದಾಖಲಾಗಿರುತ್ತದೆ. ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡಲು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

7 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago