ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಲಾಗಿರುತ್ತದೆ. ಈ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ಕುರಿತು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳ ವಿಲೇವಾರಿಯನ್ನು ಡಿ.26 (ಮಂಗಳವಾರ)ಕ್ಕೆ ನಿಗದಿಪಡಿಸಲಾಗಿತ್ತು, ಪರಿಷ್ಕರಿಸಿದ ಅವಧಿಯು ಡಿ 12(ಶುಕ್ರವಾರ) ರವರೆಗೆ ವಿಸ್ತರಿಸಲಾಗಿದೆ. ಆರೋಗ್ಯಕರ ನಿಯತಾಂಕಗಳನ್ನು ಪರಿಶೀಲಿಸುವುದು ಮತ್ತು ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿಯನ್ನು ಪಡೆಯುವುದು ಹಾಗೂ ಡಾಟಾ ಬೇಸ್ ನ್ನು ನವೀಕರಿಸುವುದು ಮತ್ತು ಪೂರಕಗಳ ಮುದ್ರಣವನ್ನು ಜ.01 (ಸೋಮವಾರ)ಕ್ಕೆ ನಿಗದಿ ಪಡಿಸಲಾಗಿತ್ತು. ಇದನ್ನು ಪರಿಷ್ಕರಿಸಿ ಜ. 17 (ಬುಧವಾರ)ಕ್ಕೆ ವಿಸ್ತರಿಸಲಾಗಿದೆ.
ಅಂತಿಮ ಮತದಾರರ ಪಟ್ಟಿ ಯನ್ನು ಪ್ರಕಟಿಸಲು ಜ. 05(ಶುಕ್ರವಾರ)ಕ್ಕೆ ನಿಗದಿಪಡಿಸಲಾಗಿತ್ತು. ಈಗ ಪರಿಷ್ಕರಿಸಿ ಜ. 22(ಸೋಮವಾರ) ಕ್ಕೆ ನಿಗದಿಪಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿರುವ ಪರಿಷ್ಕೃತ ವೇಳಾಪಟ್ಟಿಯಂತೆ ಸಾರ್ವಜನಿಕರು ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವ ಸುವರ್ಣ ಅವಕಾಶವನ್ನು ಉಪಯೋಗಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಶಿವಶಂಕರ.ಎನ್ ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…