2024-ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕಟ

ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಲಾಗಿರುತ್ತದೆ. ಈ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ಕುರಿತು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳ ವಿಲೇವಾರಿಯನ್ನು ಡಿ.26 (ಮಂಗಳವಾರ)ಕ್ಕೆ ನಿಗದಿಪಡಿಸಲಾಗಿತ್ತು,  ಪರಿಷ್ಕರಿಸಿದ ಅವಧಿಯು ಡಿ 12(ಶುಕ್ರವಾರ) ರವರೆಗೆ ವಿಸ್ತರಿಸಲಾಗಿದೆ. ಆರೋಗ್ಯಕರ ನಿಯತಾಂಕಗಳನ್ನು ಪರಿಶೀಲಿಸುವುದು ಮತ್ತು ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿಯನ್ನು ಪಡೆಯುವುದು ಹಾಗೂ ಡಾಟಾ ಬೇಸ್ ನ್ನು ನವೀಕರಿಸುವುದು ಮತ್ತು ಪೂರಕಗಳ ಮುದ್ರಣವನ್ನು ಜ.01 (ಸೋಮವಾರ)ಕ್ಕೆ ನಿಗದಿ ಪಡಿಸಲಾಗಿತ್ತು. ಇದನ್ನು ಪರಿಷ್ಕರಿಸಿ ಜ. 17 (ಬುಧವಾರ)ಕ್ಕೆ ವಿಸ್ತರಿಸಲಾಗಿದೆ.

ಅಂತಿಮ ಮತದಾರರ ಪಟ್ಟಿ ಯನ್ನು ಪ್ರಕಟಿಸಲು ಜ. 05(ಶುಕ್ರವಾರ)ಕ್ಕೆ ನಿಗದಿಪಡಿಸಲಾಗಿತ್ತು. ಈಗ ಪರಿಷ್ಕರಿಸಿ ಜ. 22(ಸೋಮವಾರ) ಕ್ಕೆ ನಿಗದಿಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿರುವ ಪರಿಷ್ಕೃತ ವೇಳಾಪಟ್ಟಿಯಂತೆ ಸಾರ್ವಜನಿಕರು ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವ ಸುವರ್ಣ ಅವಕಾಶವನ್ನು ಉಪಯೋಗಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಶಿವಶಂಕರ.ಎನ್ ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

2 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

5 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

18 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

22 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago