2024- ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ

ಲೋಕಸಭೆಯ ಚುನಾವಣೆ ಒಟ್ಟು ಹಂತಗಳಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ 20ನೇ ಮಾರ್ಚ್ ಅಧಿಸೂಚನೆ ಹೊರಡಲಿದೆ. 19ರ ಏಪ್ರಿಲ್ ಮೊದಲ ಹಂತದ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದಿಲ್ಲಿಯ ವಿಜ್ಞಾನ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಚುನಾವಣೆ ವೇಳಾಪಟ್ಟಿಯನ್ನ ಪ್ರಕಟ ಮಾಡಿದ್ದಾರೆ.

ಎರಡನೇ ಹಂತದ ಚುನಾವಣೆಯು ಏಪ್ರಿಲ್ 26ರಂದು ನಡೆಯಲಿದೆ.

ಮೂರನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದೆ.

ನಾಲ್ಕನೇ ಹಂತದ ಚುನಾವಣೆ ಮೇ 13ರಂದು ನಡೆಯಲಿದೆ.

ಐದನೇ ಹಂತದ ಚುನಾವಣೆ ಮೇ 20ರಂದು ನಡೆಯಲಿದೆ.

ಆರನೇ ಹಂತದ ಚುನಾವಣೆ ಮೇ 25ರಂದು ನಡೆಯಲಿದೆ.

ಏಳನೇ ಹಂತದ ಚುನಾವಣೆ ಜೂನ್ 1ರಂದು ನಡೆಯಲಿದೆ.

ದೇಶದಲ್ಲಿ ಒಟ್ಟು 96.8 ಕೋಟಿ ಮತದಾರರಿದ್ದಾರೆ.‌82 ಲಕ್ಷ ಮಂದಿ 85 ವರ್ಷ ದಾಟಿದ ಮತದಾರರು, 48 ಸಾವಿರ ತೃತೀಯ ಲಿಂಗಿಗಳು, 19.74 ಯುವ ಮತದಾರರು, 2.18 ಲಕ್ಷ ಶತಾಯುಷಿ ಮತದಾರರು ಇದ್ದಾರೆ. 1.82 ಕೋಟಿ ಹೊಸದಾಗಿ ನೋಂದಣಿಯಾದ ಮೊದಲ ಬಾರಿಯ ಮತದಾರರಿದ್ದಾರೆ. 18-19 ವರ್ಷದ 85.3 ಲಕ್ಷ ಮಹಿಳಾ ಮತದಾರರಿದ್ದಾರೆ. 1000 ಪುರುಷ ಮತದಾರರಿಗೆ 948 ಮಹಿಳಾ ಮತದಾರರಿದ್ದಾರೆ.

97 ಕೋಟಿ ನೋಂದಾಯಿತ ಮತದಾರರಿದ್ದಾರೆ. 10.5 ಕೋಟಿ ಮತಗಟ್ಟೆಗಳಿವೆ. 55 ಲಕ್ಷಕ್ಕೂ ಅಧಿಕ ಇವಿಎಂಗಳನ್ನು ಬಳಸಲಾಗುತ್ತಿದೆ. 1.5 ಕೋಟಿಗೂ ಅಧಿಕ ಸಿಬ್ಬಂದಿ ಚುನಾವಣೆ ಪ್ರಕ್ರಿಯೆ ನಡೆಸಲಿದ್ದಾರೆ ಎಂದು ಮಾಹಿತಿ‌ ನೀಡದರು

Ramesh Babu

Journalist

Recent Posts

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

2 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

5 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

17 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

19 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

19 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

1 day ago