2024- ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ

ಲೋಕಸಭೆಯ ಚುನಾವಣೆ ಒಟ್ಟು ಹಂತಗಳಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ 20ನೇ ಮಾರ್ಚ್ ಅಧಿಸೂಚನೆ ಹೊರಡಲಿದೆ. 19ರ ಏಪ್ರಿಲ್ ಮೊದಲ ಹಂತದ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದಿಲ್ಲಿಯ ವಿಜ್ಞಾನ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಚುನಾವಣೆ ವೇಳಾಪಟ್ಟಿಯನ್ನ ಪ್ರಕಟ ಮಾಡಿದ್ದಾರೆ.

ಎರಡನೇ ಹಂತದ ಚುನಾವಣೆಯು ಏಪ್ರಿಲ್ 26ರಂದು ನಡೆಯಲಿದೆ.

ಮೂರನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದೆ.

ನಾಲ್ಕನೇ ಹಂತದ ಚುನಾವಣೆ ಮೇ 13ರಂದು ನಡೆಯಲಿದೆ.

ಐದನೇ ಹಂತದ ಚುನಾವಣೆ ಮೇ 20ರಂದು ನಡೆಯಲಿದೆ.

ಆರನೇ ಹಂತದ ಚುನಾವಣೆ ಮೇ 25ರಂದು ನಡೆಯಲಿದೆ.

ಏಳನೇ ಹಂತದ ಚುನಾವಣೆ ಜೂನ್ 1ರಂದು ನಡೆಯಲಿದೆ.

ದೇಶದಲ್ಲಿ ಒಟ್ಟು 96.8 ಕೋಟಿ ಮತದಾರರಿದ್ದಾರೆ.‌82 ಲಕ್ಷ ಮಂದಿ 85 ವರ್ಷ ದಾಟಿದ ಮತದಾರರು, 48 ಸಾವಿರ ತೃತೀಯ ಲಿಂಗಿಗಳು, 19.74 ಯುವ ಮತದಾರರು, 2.18 ಲಕ್ಷ ಶತಾಯುಷಿ ಮತದಾರರು ಇದ್ದಾರೆ. 1.82 ಕೋಟಿ ಹೊಸದಾಗಿ ನೋಂದಣಿಯಾದ ಮೊದಲ ಬಾರಿಯ ಮತದಾರರಿದ್ದಾರೆ. 18-19 ವರ್ಷದ 85.3 ಲಕ್ಷ ಮಹಿಳಾ ಮತದಾರರಿದ್ದಾರೆ. 1000 ಪುರುಷ ಮತದಾರರಿಗೆ 948 ಮಹಿಳಾ ಮತದಾರರಿದ್ದಾರೆ.

97 ಕೋಟಿ ನೋಂದಾಯಿತ ಮತದಾರರಿದ್ದಾರೆ. 10.5 ಕೋಟಿ ಮತಗಟ್ಟೆಗಳಿವೆ. 55 ಲಕ್ಷಕ್ಕೂ ಅಧಿಕ ಇವಿಎಂಗಳನ್ನು ಬಳಸಲಾಗುತ್ತಿದೆ. 1.5 ಕೋಟಿಗೂ ಅಧಿಕ ಸಿಬ್ಬಂದಿ ಚುನಾವಣೆ ಪ್ರಕ್ರಿಯೆ ನಡೆಸಲಿದ್ದಾರೆ ಎಂದು ಮಾಹಿತಿ‌ ನೀಡದರು

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

13 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

19 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

23 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago