2024- ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ

ಲೋಕಸಭೆಯ ಚುನಾವಣೆ ಒಟ್ಟು ಹಂತಗಳಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ 20ನೇ ಮಾರ್ಚ್ ಅಧಿಸೂಚನೆ ಹೊರಡಲಿದೆ. 19ರ ಏಪ್ರಿಲ್ ಮೊದಲ ಹಂತದ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದಿಲ್ಲಿಯ ವಿಜ್ಞಾನ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಚುನಾವಣೆ ವೇಳಾಪಟ್ಟಿಯನ್ನ ಪ್ರಕಟ ಮಾಡಿದ್ದಾರೆ.

ಎರಡನೇ ಹಂತದ ಚುನಾವಣೆಯು ಏಪ್ರಿಲ್ 26ರಂದು ನಡೆಯಲಿದೆ.

ಮೂರನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದೆ.

ನಾಲ್ಕನೇ ಹಂತದ ಚುನಾವಣೆ ಮೇ 13ರಂದು ನಡೆಯಲಿದೆ.

ಐದನೇ ಹಂತದ ಚುನಾವಣೆ ಮೇ 20ರಂದು ನಡೆಯಲಿದೆ.

ಆರನೇ ಹಂತದ ಚುನಾವಣೆ ಮೇ 25ರಂದು ನಡೆಯಲಿದೆ.

ಏಳನೇ ಹಂತದ ಚುನಾವಣೆ ಜೂನ್ 1ರಂದು ನಡೆಯಲಿದೆ.

ದೇಶದಲ್ಲಿ ಒಟ್ಟು 96.8 ಕೋಟಿ ಮತದಾರರಿದ್ದಾರೆ.‌82 ಲಕ್ಷ ಮಂದಿ 85 ವರ್ಷ ದಾಟಿದ ಮತದಾರರು, 48 ಸಾವಿರ ತೃತೀಯ ಲಿಂಗಿಗಳು, 19.74 ಯುವ ಮತದಾರರು, 2.18 ಲಕ್ಷ ಶತಾಯುಷಿ ಮತದಾರರು ಇದ್ದಾರೆ. 1.82 ಕೋಟಿ ಹೊಸದಾಗಿ ನೋಂದಣಿಯಾದ ಮೊದಲ ಬಾರಿಯ ಮತದಾರರಿದ್ದಾರೆ. 18-19 ವರ್ಷದ 85.3 ಲಕ್ಷ ಮಹಿಳಾ ಮತದಾರರಿದ್ದಾರೆ. 1000 ಪುರುಷ ಮತದಾರರಿಗೆ 948 ಮಹಿಳಾ ಮತದಾರರಿದ್ದಾರೆ.

97 ಕೋಟಿ ನೋಂದಾಯಿತ ಮತದಾರರಿದ್ದಾರೆ. 10.5 ಕೋಟಿ ಮತಗಟ್ಟೆಗಳಿವೆ. 55 ಲಕ್ಷಕ್ಕೂ ಅಧಿಕ ಇವಿಎಂಗಳನ್ನು ಬಳಸಲಾಗುತ್ತಿದೆ. 1.5 ಕೋಟಿಗೂ ಅಧಿಕ ಸಿಬ್ಬಂದಿ ಚುನಾವಣೆ ಪ್ರಕ್ರಿಯೆ ನಡೆಸಲಿದ್ದಾರೆ ಎಂದು ಮಾಹಿತಿ‌ ನೀಡದರು

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

6 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

11 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

20 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago