2024- ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ

ಲೋಕಸಭೆಯ ಚುನಾವಣೆ ಒಟ್ಟು ಹಂತಗಳಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ 20ನೇ ಮಾರ್ಚ್ ಅಧಿಸೂಚನೆ ಹೊರಡಲಿದೆ. 19ರ ಏಪ್ರಿಲ್ ಮೊದಲ ಹಂತದ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದಿಲ್ಲಿಯ ವಿಜ್ಞಾನ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಚುನಾವಣೆ ವೇಳಾಪಟ್ಟಿಯನ್ನ ಪ್ರಕಟ ಮಾಡಿದ್ದಾರೆ.

ಎರಡನೇ ಹಂತದ ಚುನಾವಣೆಯು ಏಪ್ರಿಲ್ 26ರಂದು ನಡೆಯಲಿದೆ.

ಮೂರನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದೆ.

ನಾಲ್ಕನೇ ಹಂತದ ಚುನಾವಣೆ ಮೇ 13ರಂದು ನಡೆಯಲಿದೆ.

ಐದನೇ ಹಂತದ ಚುನಾವಣೆ ಮೇ 20ರಂದು ನಡೆಯಲಿದೆ.

ಆರನೇ ಹಂತದ ಚುನಾವಣೆ ಮೇ 25ರಂದು ನಡೆಯಲಿದೆ.

ಏಳನೇ ಹಂತದ ಚುನಾವಣೆ ಜೂನ್ 1ರಂದು ನಡೆಯಲಿದೆ.

ದೇಶದಲ್ಲಿ ಒಟ್ಟು 96.8 ಕೋಟಿ ಮತದಾರರಿದ್ದಾರೆ.‌82 ಲಕ್ಷ ಮಂದಿ 85 ವರ್ಷ ದಾಟಿದ ಮತದಾರರು, 48 ಸಾವಿರ ತೃತೀಯ ಲಿಂಗಿಗಳು, 19.74 ಯುವ ಮತದಾರರು, 2.18 ಲಕ್ಷ ಶತಾಯುಷಿ ಮತದಾರರು ಇದ್ದಾರೆ. 1.82 ಕೋಟಿ ಹೊಸದಾಗಿ ನೋಂದಣಿಯಾದ ಮೊದಲ ಬಾರಿಯ ಮತದಾರರಿದ್ದಾರೆ. 18-19 ವರ್ಷದ 85.3 ಲಕ್ಷ ಮಹಿಳಾ ಮತದಾರರಿದ್ದಾರೆ. 1000 ಪುರುಷ ಮತದಾರರಿಗೆ 948 ಮಹಿಳಾ ಮತದಾರರಿದ್ದಾರೆ.

97 ಕೋಟಿ ನೋಂದಾಯಿತ ಮತದಾರರಿದ್ದಾರೆ. 10.5 ಕೋಟಿ ಮತಗಟ್ಟೆಗಳಿವೆ. 55 ಲಕ್ಷಕ್ಕೂ ಅಧಿಕ ಇವಿಎಂಗಳನ್ನು ಬಳಸಲಾಗುತ್ತಿದೆ. 1.5 ಕೋಟಿಗೂ ಅಧಿಕ ಸಿಬ್ಬಂದಿ ಚುನಾವಣೆ ಪ್ರಕ್ರಿಯೆ ನಡೆಸಲಿದ್ದಾರೆ ಎಂದು ಮಾಹಿತಿ‌ ನೀಡದರು

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

26 minutes ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

15 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago