2025ರ ಮಹಿಳಾ ವಿಶ್ವಕಪ್ ಫೈನಲ್‌: ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತೀಯ ಮಹಿಳಾ ತಂಡ: ಚಾಂಪಿಯನ್ ತಂಡಕ್ಕೆ ಸಿಕ್ಕಿದ ಬಹುಮಾನದ ಮೊತ್ತ ಎಷ್ಟು ಗೊತ್ತಾ….?

ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

2025ರ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ಬರೆದಿದೆ.
ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಜಯ ದಾಖಲಿಸಿತು.

ಭಾರತ ನೀಡಿದ್ದ 299 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ನಲ್ಲಿ 246 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು ಕೊಂಡು 52 ರನ್ ಗಳ ಅಂತರದಲ್ಲಿ ಭಾರತದ ಎದುರು ಮಂಡಿಯೂರಿತು.

ಈ ಐತಿಹಾಸಿಕ ಗೆಲುವಿನೊಂದಿಗೆ ತಂಡವು ದಾಖಲೆಯ ಮೊತ್ತದ ಬಹುಮಾನವನ್ನು ತನ್ನದಾಗಿಸಿಕೊಂಡಿದೆ.

ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಘೋಷಿಸಿದಂತೆ, ಚಾಂಪಿಯನ್ ಭಾರತ ತಂಡವು ಬರೋಬ್ಬರಿ 39.78 ಕೋಟಿ ರೂಪಾಯಿ (4.48 ಮಿಲಿಯನ್ ಡಾಲರ್‌) ಬಹುಮಾನವನ್ನು ಪಡೆಯಲಿದೆ. ಇದು ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿಯೇ ನೀಡಲಾದ ಅತಿ ದೊಡ್ಡ ಬಹುಮಾನದ ಮೊತ್ತವಾಗಿದೆ. 2022ರಲ್ಲಿ ಆಸ್ಟ್ರೇಲಿಯಾ ಗೆದ್ದಿದ್ದ 1.32 ಮಿಲಿಯನ್ ಡಾಲರ್‌ಗೆ ಹೋಲಿಸಿದರೆ, ಈ ಬಾರಿಯ ಬಹುಮಾನದ ಮೊತ್ತದಲ್ಲಿ ಶೇ. 239ರಷ್ಟು ಹೆಚ್ಚಳವಾಗಿದೆ. ರನ್ನರ್ – ಅಪ್ ಆದ ದಕ್ಷಿಣ ಆಫ್ರಿಕಾ ತಂಡವು 19.88 ಕೋಟಿ ರೂಪಾಯಿ (2.24 ಮಿಲಿಯನ್ ಡಾಲರ್‌) ಪಡೆಯಲಿದೆ.

ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯ ಒಟ್ಟು ಬಹುಮಾನದ ಮೊತ್ತವನ್ನು ಐಸಿಸಿ 123 ಕೋಟಿ ರೂಪಾಯಿಗೆ (13.88 ಮಿಲಿಯನ್ ಡಾಲರ್‌) ಹೆಚ್ಚಿಸಿತ್ತು. ಇದು 2022ರ ನ್ಯೂಜಿಲೆಂಡ್ ಆವೃತ್ತಿಯ 3.5 ಮಿಲಿಯನ್ ಡಾಲರ್‌ಗೆ ಹೋಲಿಸಿದರೆ ಶೇ. 297ರಷ್ಟು ಹೆಚ್ಚಾಗಿದೆ.

ಸೆಮಿಫೈನಲ್‌ನಲ್ಲಿ ಸೋತ ಪ್ರತಿ ತಂಡಕ್ಕೂ 9.94 ಕೋಟಿ ರೂ. (1.12 ಮಿಲಿಯನ್ ಡಾಲರ್‌) ನೀಡಲಾಗಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎಲ್ಲಾ ಎಂಟು ತಂಡಗಳಿಗೆ ತಲಾ 250,000 ಡಾಲರ್ ಹಾಗೂ ಲೀಗ್ ಹಂತದ ಪ್ರತಿ ಗೆಲುವಿಗೆ 34,314 ಡಾಲರ್ ಹೆಚ್ಚುವರಿ ಮೊತ್ತವನ್ನು ನೀಡಲಾಗಿದೆ.

ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೂಡ ಮಹಿಳಾ ತಂಡಕ್ಕೆ ಬಂಪರ್ ಬಹುಮಾನ ನೀಡಲು ಪರಿಗಣಿಸುತ್ತಿದೆ. 2024ರ ಟಿ20 ವಿಶ್ವಕಪ್ ಗೆದ್ದ ಪುರುಷರ ತಂಡಕ್ಕೆ ನೀಡಲಾಗಿದ್ದ 125 ಕೋಟಿ ರೂಪಾಯಿ ಬಹುಮಾನವನ್ನು ಮಹಿಳಾ ತಂಡಕ್ಕೂ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

“ಬಿಸಿಸಿಐ ಪುರುಷರು ಮತ್ತು ಮಹಿಳೆಯರಿಗೆ ಸಮಾನ ವೇತನವನ್ನು ಬೆಂಬಲಿಸುತ್ತದೆ. ನಮ್ಮ ಹುಡುಗಿಯರು ವಿಶ್ವಕಪ್ ಗೆದ್ದರೆ, ಪುರುಷರ ಜಾಗತಿಕ ಗೆಲುವಿಗೆ ಹೋಲಿಸಿದರೆ ಪ್ರತಿಫಲ ಕಡಿಮೆಯಿರಬಾರದು ಎಂಬ ಚರ್ಚೆಗಳು ನಡೆದಿವೆ,” ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಗೆಲುವು ಮತ್ತು ದಾಖಲೆಯ ಬಹುಮಾನವು ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ಹೊಸ ದಿಕ್ಕನ್ನು ನೀಡಲಿದೆ.

Ramesh Babu

Journalist

Recent Posts

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

2 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

4 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

5 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

11 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

12 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

23 hours ago