2025ರ ಮಹಿಳಾ ವಿಶ್ವಕಪ್ ಫೈನಲ್‌: ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತೀಯ ಮಹಿಳಾ ತಂಡ: ಚಾಂಪಿಯನ್ ತಂಡಕ್ಕೆ ಸಿಕ್ಕಿದ ಬಹುಮಾನದ ಮೊತ್ತ ಎಷ್ಟು ಗೊತ್ತಾ….?

ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

2025ರ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ಬರೆದಿದೆ.
ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಜಯ ದಾಖಲಿಸಿತು.

ಭಾರತ ನೀಡಿದ್ದ 299 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ನಲ್ಲಿ 246 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು ಕೊಂಡು 52 ರನ್ ಗಳ ಅಂತರದಲ್ಲಿ ಭಾರತದ ಎದುರು ಮಂಡಿಯೂರಿತು.

ಈ ಐತಿಹಾಸಿಕ ಗೆಲುವಿನೊಂದಿಗೆ ತಂಡವು ದಾಖಲೆಯ ಮೊತ್ತದ ಬಹುಮಾನವನ್ನು ತನ್ನದಾಗಿಸಿಕೊಂಡಿದೆ.

ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಘೋಷಿಸಿದಂತೆ, ಚಾಂಪಿಯನ್ ಭಾರತ ತಂಡವು ಬರೋಬ್ಬರಿ 39.78 ಕೋಟಿ ರೂಪಾಯಿ (4.48 ಮಿಲಿಯನ್ ಡಾಲರ್‌) ಬಹುಮಾನವನ್ನು ಪಡೆಯಲಿದೆ. ಇದು ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿಯೇ ನೀಡಲಾದ ಅತಿ ದೊಡ್ಡ ಬಹುಮಾನದ ಮೊತ್ತವಾಗಿದೆ. 2022ರಲ್ಲಿ ಆಸ್ಟ್ರೇಲಿಯಾ ಗೆದ್ದಿದ್ದ 1.32 ಮಿಲಿಯನ್ ಡಾಲರ್‌ಗೆ ಹೋಲಿಸಿದರೆ, ಈ ಬಾರಿಯ ಬಹುಮಾನದ ಮೊತ್ತದಲ್ಲಿ ಶೇ. 239ರಷ್ಟು ಹೆಚ್ಚಳವಾಗಿದೆ. ರನ್ನರ್ – ಅಪ್ ಆದ ದಕ್ಷಿಣ ಆಫ್ರಿಕಾ ತಂಡವು 19.88 ಕೋಟಿ ರೂಪಾಯಿ (2.24 ಮಿಲಿಯನ್ ಡಾಲರ್‌) ಪಡೆಯಲಿದೆ.

ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯ ಒಟ್ಟು ಬಹುಮಾನದ ಮೊತ್ತವನ್ನು ಐಸಿಸಿ 123 ಕೋಟಿ ರೂಪಾಯಿಗೆ (13.88 ಮಿಲಿಯನ್ ಡಾಲರ್‌) ಹೆಚ್ಚಿಸಿತ್ತು. ಇದು 2022ರ ನ್ಯೂಜಿಲೆಂಡ್ ಆವೃತ್ತಿಯ 3.5 ಮಿಲಿಯನ್ ಡಾಲರ್‌ಗೆ ಹೋಲಿಸಿದರೆ ಶೇ. 297ರಷ್ಟು ಹೆಚ್ಚಾಗಿದೆ.

ಸೆಮಿಫೈನಲ್‌ನಲ್ಲಿ ಸೋತ ಪ್ರತಿ ತಂಡಕ್ಕೂ 9.94 ಕೋಟಿ ರೂ. (1.12 ಮಿಲಿಯನ್ ಡಾಲರ್‌) ನೀಡಲಾಗಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎಲ್ಲಾ ಎಂಟು ತಂಡಗಳಿಗೆ ತಲಾ 250,000 ಡಾಲರ್ ಹಾಗೂ ಲೀಗ್ ಹಂತದ ಪ್ರತಿ ಗೆಲುವಿಗೆ 34,314 ಡಾಲರ್ ಹೆಚ್ಚುವರಿ ಮೊತ್ತವನ್ನು ನೀಡಲಾಗಿದೆ.

ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೂಡ ಮಹಿಳಾ ತಂಡಕ್ಕೆ ಬಂಪರ್ ಬಹುಮಾನ ನೀಡಲು ಪರಿಗಣಿಸುತ್ತಿದೆ. 2024ರ ಟಿ20 ವಿಶ್ವಕಪ್ ಗೆದ್ದ ಪುರುಷರ ತಂಡಕ್ಕೆ ನೀಡಲಾಗಿದ್ದ 125 ಕೋಟಿ ರೂಪಾಯಿ ಬಹುಮಾನವನ್ನು ಮಹಿಳಾ ತಂಡಕ್ಕೂ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

“ಬಿಸಿಸಿಐ ಪುರುಷರು ಮತ್ತು ಮಹಿಳೆಯರಿಗೆ ಸಮಾನ ವೇತನವನ್ನು ಬೆಂಬಲಿಸುತ್ತದೆ. ನಮ್ಮ ಹುಡುಗಿಯರು ವಿಶ್ವಕಪ್ ಗೆದ್ದರೆ, ಪುರುಷರ ಜಾಗತಿಕ ಗೆಲುವಿಗೆ ಹೋಲಿಸಿದರೆ ಪ್ರತಿಫಲ ಕಡಿಮೆಯಿರಬಾರದು ಎಂಬ ಚರ್ಚೆಗಳು ನಡೆದಿವೆ,” ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಗೆಲುವು ಮತ್ತು ದಾಖಲೆಯ ಬಹುಮಾನವು ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ಹೊಸ ದಿಕ್ಕನ್ನು ನೀಡಲಿದೆ.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 minutes ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

27 minutes ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

8 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago