ಹೊಸ ವರ್ಷಾಚರಣೆ-2025ರ ಸಂಬಂಧ ಮುಂಜಾಗೃತ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ, ಮಾಕಳಿದುರ್ಗ ಬೆಟ್ಟ, ಅವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ 2024ರ ಡಿ.30 ರಿಂದ 2025ರ ಜ.01ರವರೆಗೆ ಒಟ್ಟು 03 ದಿನಗಳ ಕಾಲ ಸಾರ್ವಜನಿಕರು ಹೆಚ್ಚಾಗಿ ತೆರಳಿ ಮೋಜು ಮಸ್ತಿ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಗಳಿರುತ್ತದೆ.
ಈ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲು ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿ ಅವರಿಗೆ ಪತ್ರ ಮೂಲಕ ಕೋರಿರುತ್ತಾರೆ.
ಉಲ್ಲೇಖಿತ ಪತ್ರದ ಕೋರಿಕೆಯನ್ನು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ದರಬೆಟ್ಟ, ಮಾಕಳಿದುರ್ಗ ಬೆಟ್ಟ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸುವುದು ಸೂಕ್ತವೆಂದು ಮನಗಂಡು ಮುಂಜಾಗೃತ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 2024ರ ಡಿ.30 ಸಂಜೆ 6.00 ಗಂಟೆಯಿಂದ 2025ರ ಜ.01 ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ, ಮಾಕಳಿದುರ್ಗ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…