ಹೊಸ ವರ್ಷಾಚರಣೆ-2025ರ ಸಂಬಂಧ ಮುಂಜಾಗೃತ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ, ಮಾಕಳಿದುರ್ಗ ಬೆಟ್ಟ, ಅವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ 2024ರ ಡಿ.30 ರಿಂದ 2025ರ ಜ.01ರವರೆಗೆ ಒಟ್ಟು 03 ದಿನಗಳ ಕಾಲ ಸಾರ್ವಜನಿಕರು ಹೆಚ್ಚಾಗಿ ತೆರಳಿ ಮೋಜು ಮಸ್ತಿ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಗಳಿರುತ್ತದೆ.
ಈ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲು ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿ ಅವರಿಗೆ ಪತ್ರ ಮೂಲಕ ಕೋರಿರುತ್ತಾರೆ.
ಉಲ್ಲೇಖಿತ ಪತ್ರದ ಕೋರಿಕೆಯನ್ನು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ದರಬೆಟ್ಟ, ಮಾಕಳಿದುರ್ಗ ಬೆಟ್ಟ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸುವುದು ಸೂಕ್ತವೆಂದು ಮನಗಂಡು ಮುಂಜಾಗೃತ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 2024ರ ಡಿ.30 ಸಂಜೆ 6.00 ಗಂಟೆಯಿಂದ 2025ರ ಜ.01 ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ, ಮಾಕಳಿದುರ್ಗ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…