2025ರ ಹೊಸ ವರ್ಷಾಚರಣೆ: ಬೆಂ ಗ್ರಾ ಜಿಲ್ಲೆಯ ಈ ಪ್ರಮುಖ ಪ್ರವಾಸಿ ತಾಣಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದ ಬೆ.ಗ್ರಾ ಜಿಲ್ಲಾಧಿಕಾರಿ

ಹೊಸ ವರ್ಷಾಚರಣೆ-2025ರ ಸಂಬಂಧ ಮುಂಜಾಗೃತ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ, ಮಾಕಳಿದುರ್ಗ ಬೆಟ್ಟ, ಅವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ 2024ರ ಡಿ.30 ರಿಂದ 2025ರ ಜ.01ರವರೆಗೆ ಒಟ್ಟು 03 ದಿನಗಳ ಕಾಲ ಸಾರ್ವಜನಿಕರು ಹೆಚ್ಚಾಗಿ ತೆರಳಿ ಮೋಜು ಮಸ್ತಿ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಗಳಿರುತ್ತದೆ.

ಈ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲು ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿ ಅವರಿಗೆ ಪತ್ರ ಮೂಲಕ ಕೋರಿರುತ್ತಾರೆ.

ಉಲ್ಲೇಖಿತ ಪತ್ರದ ಕೋರಿಕೆಯನ್ನು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ದರಬೆಟ್ಟ, ಮಾಕಳಿದುರ್ಗ‌ ಬೆಟ್ಟ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸುವುದು ಸೂಕ್ತವೆಂದು ಮನಗಂಡು ಮುಂಜಾಗೃತ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 2024ರ ಡಿ.30 ಸಂಜೆ 6.00 ಗಂಟೆಯಿಂದ 2025ರ ಜ.01 ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ, ಮಾಕಳಿದುರ್ಗ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 hour ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

22 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago