ಹೊಸ ವರ್ಷಾಚರಣೆ-2025ರ ಸಂಬಂಧ ಮುಂಜಾಗೃತ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ, ಮಾಕಳಿದುರ್ಗ ಬೆಟ್ಟ, ಅವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ 2024ರ ಡಿ.30 ರಿಂದ 2025ರ ಜ.01ರವರೆಗೆ ಒಟ್ಟು 03 ದಿನಗಳ ಕಾಲ ಸಾರ್ವಜನಿಕರು ಹೆಚ್ಚಾಗಿ ತೆರಳಿ ಮೋಜು ಮಸ್ತಿ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಗಳಿರುತ್ತದೆ.
ಈ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲು ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿ ಅವರಿಗೆ ಪತ್ರ ಮೂಲಕ ಕೋರಿರುತ್ತಾರೆ.
ಉಲ್ಲೇಖಿತ ಪತ್ರದ ಕೋರಿಕೆಯನ್ನು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ದರಬೆಟ್ಟ, ಮಾಕಳಿದುರ್ಗ ಬೆಟ್ಟ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸುವುದು ಸೂಕ್ತವೆಂದು ಮನಗಂಡು ಮುಂಜಾಗೃತ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 2024ರ ಡಿ.30 ಸಂಜೆ 6.00 ಗಂಟೆಯಿಂದ 2025ರ ಜ.01 ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳಾದ ಶಿವಗಂಗೆ ಬೆಟ್ಟ, ಸಿದ್ಧರಬೆಟ್ಟ, ಮಾಕಳಿದುರ್ಗ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…