2025 ಹಣಕಾಸು ವರ್ಷದ ಮೊದಲಾರ್ಧದ ಹಣಕಾಸು ಫಲಿತಾಂಶ ಪ್ರಕಟಿಸಿದ ಅವಿವಾ ಇಂಡಿಯಾ

• *2025 ಹಣಕಾಸು ವರ್ಷದ ಮೊದಲಾರ್ಧದಲ್ಲಿ ₹ 63 ಕೋಟಿ ಲಾಭ. ಹಿಂದಿನ ಕಳೆದ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ*
• *ನಿರ್ವಹಣೆಯಲ್ಲಿರುವ ಸ್ವತ್ತುಗಳು (ಎಯುಎಂ) ಶೇ 13ರಷ್ಟು ಏರಿಕೆಯಾಗಿದ್ದು, ₹ 14,636 ಕೋಟಿಗೆ ತಲುಪಿದೆ*
• *ದೀರ್ಘಾವಧಿಯಲ್ಲಿನ ಹೊಣೆಗಾರಿಕೆಗಳನ್ನು ನಿಭಾಯಿಸುವ ಸಾಮರ್ಥ್ಯವು ಶೇ 189ರಿಂದ ಶೇ 194ಕ್ಕೆ ಏರಿಕೆಯಾಗಿದೆ*
• *ಅವಿವಾದ ವಿಶಿಷ್ಟ ಉತ್ಪನ್ನಗಳು ಲಾಭ ತಂದುಕೊಟ್ಟಿದ್ದು, ಗ್ರಾಹಕರು, ಮಾರಾಟಗಾರರು ಮತ್ತು ಷೇರುದಾರರಲ್ಲಿ ವಿಶ್ವಾಸ ಹೆಚ್ಚಿಸಿವೆ*

* 2, ಡಿಸೆಂಬರ್‌ 2024:* ಅವಿವಾ ಇಂಡಿಯಾ, ಹಣಕಾಸು ವರ್ಷ 2025ರ ಮೊದಲಾರ್ಧದ ತನ್ನ ಹಣಕಾಸು ಫಲಿತಾಂಶಗಳನ್ನು ಪ್ರಕಟಿಸಿದ್ದು ಪ್ರಮುಖ ಮಾನದಂಡಗಳಲ್ಲಿ ಸ್ಥಿರ ಪ್ರಗತಿ ಪ್ರದರ್ಶಿಸಿದೆ. ಈ ಅವಧಿಯಲ್ಲಿ ₹ 63 ಕೋಟಿ ಲಾಭ ಗಳಿಸಿದ್ದು, ಇದು ಹಿಂದಿನ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ ಸಾಧಿಸಿದೆ.

ನಿರ್ವಹಣೆಯಲ್ಲಿರುವ ಸ್ವತ್ತು (ಎಯುಎಂ) ಶೇ 13ರಷ್ಟು ಬೆಳವಣಿಗೆ ಕಂಡಿದ್ದು, ₹ 14,636 ಕೋಟಿಗೆ ತಲುಪಿದೆ.

ಇದು ಉತ್ತಮ ನಿಧಿ ನಿರ್ವಹಣೆ ಮತ್ತು ಹೂಡಿಕೆದಾರರ ವಿಶ್ವಾಸ ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ. ಮಾರಾಟ ಗುಣಮಟ್ಟವೂ ಭಾರಿ ಸುಧಾರಣೆ ಕಂಡಿದ್ದು, “ಪ್ರತಿ 10 ಸಾವಿರ ಪಾಲಿಸಿಗಳಿಗೆ ದೂರುಗಳು” ಹಿಂದಿನ ವರ್ಷದ ಇದೇ ಅವಧಿಯಲ್ಲಿನ 10.3 ರಿಂದ ಈಗ 8.8 ಆಗಿದೆ. ಗ್ರಾಹಕರ ಅನುಭವ ಸುಧಾರಿಸುವ ನಿಟ್ಟಿನಲ್ಲಿ ಅವಿವಾ ಇಂಡಿಯಾದ ಬದ್ಧತೆಗೆ ಇದು ನಿದರ್ಶನವಾಗಿದೆ.

ವಿಮೆ ಪಾಲಿಸಿಗಳಿಗೆ ಗ್ರಾಹಕರಿಂದ ಸಂಗ್ರಹಿಸಲಾದ ಒಟ್ಟಾರೆ ಮೊತ್ತವು (ಜಿಡಬ್ಲ್ಯುಪಿ) ₹ 548 ಕೋಟಿಗಳಷ್ಟಾಗಿದ್ದು, ಹಿಂದಿನ ವರ್ಷದ ಇದೇ ಅವಧಿಯಲ್ಲಿನ ₹ 546 ಕೋಟಿಗೆ ಹೋಲಿಸಿದರೆ ಸಮಾನ ರೀತಿಯ ಬೆಳವಣಿಗೆ ಸೂಚಿಸುತ್ತದೆ. ಜಿಡಬ್ಲ್ಯುಪಿಗೆ ಕಾರ್ಯಾಚರಣೆ ವೆಚ್ಚ ಅನುಪಾತವು (ಒಪಿಇಎಕ್ಸ್‌) ಕಳೆದ ವರ್ಷದ ಶೇ 30 ರಿಂದ ಶೇ 27 ಕ್ಕೆ ಕುಸಿದಿದೆ. ಇದು ವೆಚ್ಚ ಕಡಿತ ಮತ್ತು ಸಂಪನ್ಮೂಲ ನಿರ್ವಹಣೆಯ ಸರಳೀಕರಣದ ಮೇಲೆ ಕಂಪನಿಯು ಹೆಚ್ಚಿನ ಒತ್ತು ನೀಡಿರುವುದನ್ನು ಸೂಚಿಸುತ್ತದೆ.

ಗ್ರಾಹಕರ ವಿಶ್ವಾಸಾರ್ಹತೆಯ ಪ್ರಮುಖ ಮಾನದಂಡವಾಗಿರುವ ವಿಮೆ ಪರಿಹಾರ ಇತ್ಯರ್ಥ ಅನುಪಾತವು ಶೇ 98.8ರಷ್ಟಿದ್ದು, ಪಾಲಿಸಿದಾರರ ವಿಶ್ವಾಸಾರ್ಹತೆ ಮತ್ತು ಬದ್ಧತೆಯ ವಿಷಯದಲ್ಲಿ ಅವಿವಾ ಇಂಡಿಯಾ ಹೊಂದಿರುವ ದೃಢ ನಂಬಿಕೆಯನ್ನು ಇದು ಸೂಚಿಸುತ್ತದೆ.

ಅವಿವಾ ಇಂಡಿಯಾದ ವಿತರಣಾ ಜಾಲದಲ್ಲಿ 5,600 ತರಬೇತಿ ಹೊಂದಿರುವ ವಿಮೆ ವೃತ್ತಿಪರರು ಇದ್ದಾರೆ. ದೇಶದಾದ್ಯಂತ 52 ಕಚೇರಿಗಳನ್ನು ಹೊಂದಿದೆ. ಈ ಮೂಲಕ ತನ್ನ ವೈವಿಧ್ಯಮಯ ಗ್ರಾಹಕ ಸಮೂಹಕ್ಕೆ ದಕ್ಷವಾಗಿ ಕಂಪನಿಯು ಸೇವೆ ಸಲ್ಲಿಸುತ್ತಿದೆ.

ಅವಿವಾ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಸಿತ್ ರಥ್ ಅವರು ಮಾತನಾಡಿ, ʼನಮ್ಮ ಗ್ರಾಹಕ-ಕೇಂದ್ರಿತ ಉತ್ಪನ್ನಗಳು ಮತ್ತು ಕಾರ್ಯಾಚರಣೆಯ ದಕ್ಷತೆಯಿಂದ ಲಾಭ ಹೆಚ್ಚಳವಾಗಿದ್ದು, ಈ ನಿರಂತರ ಬೆಳವಣಿಗೆಯು ಮಾರುಕಟ್ಟೆಯಲ್ಲಿ ವಹಿವಾಟು ಹೆಚ್ಚುತ್ತಿರುವ ನಮ್ಮ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. ನಮ್ಮ ಗ್ರಾಹಕರಿಗೆ ಆರ್ಥಿಕ ಭದ್ರತೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸಲು ನಾವು ಬದ್ಧರಾಗಿದ್ದೇವೆʼ ಎಂದು ಹೇಳಿದ್ದಾರೆ.

*ಭವಿಷ್ಯದ ಕ್ರಮಗಳು:*

ಮುಂಬರುವ ತ್ರೈಮಾಸಿಕಗಳಲ್ಲಿ ಅವಿವಾ ಇಂಡಿಯಾ ಪರಿವರ್ತನೀಯ ಬ್ರ್ಯಾಂಡ್ ಪರಿಚಯಿಸಲು ಸಜ್ಜಾಗಿದೆ. ಈ ಬದಲಾವಣೆಯು ಗ್ರಾಹಕರು ಮತ್ತು ಪಾಲುದಾರರನ್ನು ಆರೋಗ್ಯಕರ ನಿರ್ಧಾರ ಕೈಗೊಳ್ಳಲು ಆದ್ಯತೆ ನೀಡುವುದಕ್ಕೆ ಪ್ರೇರೇಪಿಸುವ ಗುರಿ ಹೊಂದಿದೆ.

ಕಡಿಮೆ ವಿಮೆ ಪರಿಹಾರದ ಹಾಗೂ ಕಡಿಮೆ ಪ್ರೀಮಿಯಂನ ವಿಮೆ ಉತ್ಪನ್ನಗಳನ್ನು ಕಂಪನಿಯು ಭವಿಷ್ಯದಲ್ಲಿ ಪರಿಚಯಿಸಲಿದ್ದು, ಇವು ಜನಸಾಮಾನ್ಯರಿಗೆ ಹೆಚ್ಚು ಉಪಯುಕ್ತವಾಗಿರುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ.

Ramesh Babu

Journalist

Recent Posts

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

50 minutes ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

3 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

14 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

14 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

15 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

17 hours ago