2025 ಹಣಕಾಸು ವರ್ಷದ ಮೊದಲಾರ್ಧದ ಹಣಕಾಸು ಫಲಿತಾಂಶ ಪ್ರಕಟಿಸಿದ ಅವಿವಾ ಇಂಡಿಯಾ

• *2025 ಹಣಕಾಸು ವರ್ಷದ ಮೊದಲಾರ್ಧದಲ್ಲಿ ₹ 63 ಕೋಟಿ ಲಾಭ. ಹಿಂದಿನ ಕಳೆದ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ*
• *ನಿರ್ವಹಣೆಯಲ್ಲಿರುವ ಸ್ವತ್ತುಗಳು (ಎಯುಎಂ) ಶೇ 13ರಷ್ಟು ಏರಿಕೆಯಾಗಿದ್ದು, ₹ 14,636 ಕೋಟಿಗೆ ತಲುಪಿದೆ*
• *ದೀರ್ಘಾವಧಿಯಲ್ಲಿನ ಹೊಣೆಗಾರಿಕೆಗಳನ್ನು ನಿಭಾಯಿಸುವ ಸಾಮರ್ಥ್ಯವು ಶೇ 189ರಿಂದ ಶೇ 194ಕ್ಕೆ ಏರಿಕೆಯಾಗಿದೆ*
• *ಅವಿವಾದ ವಿಶಿಷ್ಟ ಉತ್ಪನ್ನಗಳು ಲಾಭ ತಂದುಕೊಟ್ಟಿದ್ದು, ಗ್ರಾಹಕರು, ಮಾರಾಟಗಾರರು ಮತ್ತು ಷೇರುದಾರರಲ್ಲಿ ವಿಶ್ವಾಸ ಹೆಚ್ಚಿಸಿವೆ*

* 2, ಡಿಸೆಂಬರ್‌ 2024:* ಅವಿವಾ ಇಂಡಿಯಾ, ಹಣಕಾಸು ವರ್ಷ 2025ರ ಮೊದಲಾರ್ಧದ ತನ್ನ ಹಣಕಾಸು ಫಲಿತಾಂಶಗಳನ್ನು ಪ್ರಕಟಿಸಿದ್ದು ಪ್ರಮುಖ ಮಾನದಂಡಗಳಲ್ಲಿ ಸ್ಥಿರ ಪ್ರಗತಿ ಪ್ರದರ್ಶಿಸಿದೆ. ಈ ಅವಧಿಯಲ್ಲಿ ₹ 63 ಕೋಟಿ ಲಾಭ ಗಳಿಸಿದ್ದು, ಇದು ಹಿಂದಿನ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ ಸಾಧಿಸಿದೆ.

ನಿರ್ವಹಣೆಯಲ್ಲಿರುವ ಸ್ವತ್ತು (ಎಯುಎಂ) ಶೇ 13ರಷ್ಟು ಬೆಳವಣಿಗೆ ಕಂಡಿದ್ದು, ₹ 14,636 ಕೋಟಿಗೆ ತಲುಪಿದೆ.

ಇದು ಉತ್ತಮ ನಿಧಿ ನಿರ್ವಹಣೆ ಮತ್ತು ಹೂಡಿಕೆದಾರರ ವಿಶ್ವಾಸ ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ. ಮಾರಾಟ ಗುಣಮಟ್ಟವೂ ಭಾರಿ ಸುಧಾರಣೆ ಕಂಡಿದ್ದು, “ಪ್ರತಿ 10 ಸಾವಿರ ಪಾಲಿಸಿಗಳಿಗೆ ದೂರುಗಳು” ಹಿಂದಿನ ವರ್ಷದ ಇದೇ ಅವಧಿಯಲ್ಲಿನ 10.3 ರಿಂದ ಈಗ 8.8 ಆಗಿದೆ. ಗ್ರಾಹಕರ ಅನುಭವ ಸುಧಾರಿಸುವ ನಿಟ್ಟಿನಲ್ಲಿ ಅವಿವಾ ಇಂಡಿಯಾದ ಬದ್ಧತೆಗೆ ಇದು ನಿದರ್ಶನವಾಗಿದೆ.

ವಿಮೆ ಪಾಲಿಸಿಗಳಿಗೆ ಗ್ರಾಹಕರಿಂದ ಸಂಗ್ರಹಿಸಲಾದ ಒಟ್ಟಾರೆ ಮೊತ್ತವು (ಜಿಡಬ್ಲ್ಯುಪಿ) ₹ 548 ಕೋಟಿಗಳಷ್ಟಾಗಿದ್ದು, ಹಿಂದಿನ ವರ್ಷದ ಇದೇ ಅವಧಿಯಲ್ಲಿನ ₹ 546 ಕೋಟಿಗೆ ಹೋಲಿಸಿದರೆ ಸಮಾನ ರೀತಿಯ ಬೆಳವಣಿಗೆ ಸೂಚಿಸುತ್ತದೆ. ಜಿಡಬ್ಲ್ಯುಪಿಗೆ ಕಾರ್ಯಾಚರಣೆ ವೆಚ್ಚ ಅನುಪಾತವು (ಒಪಿಇಎಕ್ಸ್‌) ಕಳೆದ ವರ್ಷದ ಶೇ 30 ರಿಂದ ಶೇ 27 ಕ್ಕೆ ಕುಸಿದಿದೆ. ಇದು ವೆಚ್ಚ ಕಡಿತ ಮತ್ತು ಸಂಪನ್ಮೂಲ ನಿರ್ವಹಣೆಯ ಸರಳೀಕರಣದ ಮೇಲೆ ಕಂಪನಿಯು ಹೆಚ್ಚಿನ ಒತ್ತು ನೀಡಿರುವುದನ್ನು ಸೂಚಿಸುತ್ತದೆ.

ಗ್ರಾಹಕರ ವಿಶ್ವಾಸಾರ್ಹತೆಯ ಪ್ರಮುಖ ಮಾನದಂಡವಾಗಿರುವ ವಿಮೆ ಪರಿಹಾರ ಇತ್ಯರ್ಥ ಅನುಪಾತವು ಶೇ 98.8ರಷ್ಟಿದ್ದು, ಪಾಲಿಸಿದಾರರ ವಿಶ್ವಾಸಾರ್ಹತೆ ಮತ್ತು ಬದ್ಧತೆಯ ವಿಷಯದಲ್ಲಿ ಅವಿವಾ ಇಂಡಿಯಾ ಹೊಂದಿರುವ ದೃಢ ನಂಬಿಕೆಯನ್ನು ಇದು ಸೂಚಿಸುತ್ತದೆ.

ಅವಿವಾ ಇಂಡಿಯಾದ ವಿತರಣಾ ಜಾಲದಲ್ಲಿ 5,600 ತರಬೇತಿ ಹೊಂದಿರುವ ವಿಮೆ ವೃತ್ತಿಪರರು ಇದ್ದಾರೆ. ದೇಶದಾದ್ಯಂತ 52 ಕಚೇರಿಗಳನ್ನು ಹೊಂದಿದೆ. ಈ ಮೂಲಕ ತನ್ನ ವೈವಿಧ್ಯಮಯ ಗ್ರಾಹಕ ಸಮೂಹಕ್ಕೆ ದಕ್ಷವಾಗಿ ಕಂಪನಿಯು ಸೇವೆ ಸಲ್ಲಿಸುತ್ತಿದೆ.

ಅವಿವಾ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಸಿತ್ ರಥ್ ಅವರು ಮಾತನಾಡಿ, ʼನಮ್ಮ ಗ್ರಾಹಕ-ಕೇಂದ್ರಿತ ಉತ್ಪನ್ನಗಳು ಮತ್ತು ಕಾರ್ಯಾಚರಣೆಯ ದಕ್ಷತೆಯಿಂದ ಲಾಭ ಹೆಚ್ಚಳವಾಗಿದ್ದು, ಈ ನಿರಂತರ ಬೆಳವಣಿಗೆಯು ಮಾರುಕಟ್ಟೆಯಲ್ಲಿ ವಹಿವಾಟು ಹೆಚ್ಚುತ್ತಿರುವ ನಮ್ಮ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. ನಮ್ಮ ಗ್ರಾಹಕರಿಗೆ ಆರ್ಥಿಕ ಭದ್ರತೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸಲು ನಾವು ಬದ್ಧರಾಗಿದ್ದೇವೆʼ ಎಂದು ಹೇಳಿದ್ದಾರೆ.

*ಭವಿಷ್ಯದ ಕ್ರಮಗಳು:*

ಮುಂಬರುವ ತ್ರೈಮಾಸಿಕಗಳಲ್ಲಿ ಅವಿವಾ ಇಂಡಿಯಾ ಪರಿವರ್ತನೀಯ ಬ್ರ್ಯಾಂಡ್ ಪರಿಚಯಿಸಲು ಸಜ್ಜಾಗಿದೆ. ಈ ಬದಲಾವಣೆಯು ಗ್ರಾಹಕರು ಮತ್ತು ಪಾಲುದಾರರನ್ನು ಆರೋಗ್ಯಕರ ನಿರ್ಧಾರ ಕೈಗೊಳ್ಳಲು ಆದ್ಯತೆ ನೀಡುವುದಕ್ಕೆ ಪ್ರೇರೇಪಿಸುವ ಗುರಿ ಹೊಂದಿದೆ.

ಕಡಿಮೆ ವಿಮೆ ಪರಿಹಾರದ ಹಾಗೂ ಕಡಿಮೆ ಪ್ರೀಮಿಯಂನ ವಿಮೆ ಉತ್ಪನ್ನಗಳನ್ನು ಕಂಪನಿಯು ಭವಿಷ್ಯದಲ್ಲಿ ಪರಿಚಯಿಸಲಿದ್ದು, ಇವು ಜನಸಾಮಾನ್ಯರಿಗೆ ಹೆಚ್ಚು ಉಪಯುಕ್ತವಾಗಿರುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ.

Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

7 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

7 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

8 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

12 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

13 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

18 hours ago