2025 ಹಣಕಾಸು ವರ್ಷದ ಮೊದಲಾರ್ಧದ ಹಣಕಾಸು ಫಲಿತಾಂಶ ಪ್ರಕಟಿಸಿದ ಅವಿವಾ ಇಂಡಿಯಾ

• *2025 ಹಣಕಾಸು ವರ್ಷದ ಮೊದಲಾರ್ಧದಲ್ಲಿ ₹ 63 ಕೋಟಿ ಲಾಭ. ಹಿಂದಿನ ಕಳೆದ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ*
• *ನಿರ್ವಹಣೆಯಲ್ಲಿರುವ ಸ್ವತ್ತುಗಳು (ಎಯುಎಂ) ಶೇ 13ರಷ್ಟು ಏರಿಕೆಯಾಗಿದ್ದು, ₹ 14,636 ಕೋಟಿಗೆ ತಲುಪಿದೆ*
• *ದೀರ್ಘಾವಧಿಯಲ್ಲಿನ ಹೊಣೆಗಾರಿಕೆಗಳನ್ನು ನಿಭಾಯಿಸುವ ಸಾಮರ್ಥ್ಯವು ಶೇ 189ರಿಂದ ಶೇ 194ಕ್ಕೆ ಏರಿಕೆಯಾಗಿದೆ*
• *ಅವಿವಾದ ವಿಶಿಷ್ಟ ಉತ್ಪನ್ನಗಳು ಲಾಭ ತಂದುಕೊಟ್ಟಿದ್ದು, ಗ್ರಾಹಕರು, ಮಾರಾಟಗಾರರು ಮತ್ತು ಷೇರುದಾರರಲ್ಲಿ ವಿಶ್ವಾಸ ಹೆಚ್ಚಿಸಿವೆ*

* 2, ಡಿಸೆಂಬರ್‌ 2024:* ಅವಿವಾ ಇಂಡಿಯಾ, ಹಣಕಾಸು ವರ್ಷ 2025ರ ಮೊದಲಾರ್ಧದ ತನ್ನ ಹಣಕಾಸು ಫಲಿತಾಂಶಗಳನ್ನು ಪ್ರಕಟಿಸಿದ್ದು ಪ್ರಮುಖ ಮಾನದಂಡಗಳಲ್ಲಿ ಸ್ಥಿರ ಪ್ರಗತಿ ಪ್ರದರ್ಶಿಸಿದೆ. ಈ ಅವಧಿಯಲ್ಲಿ ₹ 63 ಕೋಟಿ ಲಾಭ ಗಳಿಸಿದ್ದು, ಇದು ಹಿಂದಿನ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ ಸಾಧಿಸಿದೆ.

ನಿರ್ವಹಣೆಯಲ್ಲಿರುವ ಸ್ವತ್ತು (ಎಯುಎಂ) ಶೇ 13ರಷ್ಟು ಬೆಳವಣಿಗೆ ಕಂಡಿದ್ದು, ₹ 14,636 ಕೋಟಿಗೆ ತಲುಪಿದೆ.

ಇದು ಉತ್ತಮ ನಿಧಿ ನಿರ್ವಹಣೆ ಮತ್ತು ಹೂಡಿಕೆದಾರರ ವಿಶ್ವಾಸ ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ. ಮಾರಾಟ ಗುಣಮಟ್ಟವೂ ಭಾರಿ ಸುಧಾರಣೆ ಕಂಡಿದ್ದು, “ಪ್ರತಿ 10 ಸಾವಿರ ಪಾಲಿಸಿಗಳಿಗೆ ದೂರುಗಳು” ಹಿಂದಿನ ವರ್ಷದ ಇದೇ ಅವಧಿಯಲ್ಲಿನ 10.3 ರಿಂದ ಈಗ 8.8 ಆಗಿದೆ. ಗ್ರಾಹಕರ ಅನುಭವ ಸುಧಾರಿಸುವ ನಿಟ್ಟಿನಲ್ಲಿ ಅವಿವಾ ಇಂಡಿಯಾದ ಬದ್ಧತೆಗೆ ಇದು ನಿದರ್ಶನವಾಗಿದೆ.

ವಿಮೆ ಪಾಲಿಸಿಗಳಿಗೆ ಗ್ರಾಹಕರಿಂದ ಸಂಗ್ರಹಿಸಲಾದ ಒಟ್ಟಾರೆ ಮೊತ್ತವು (ಜಿಡಬ್ಲ್ಯುಪಿ) ₹ 548 ಕೋಟಿಗಳಷ್ಟಾಗಿದ್ದು, ಹಿಂದಿನ ವರ್ಷದ ಇದೇ ಅವಧಿಯಲ್ಲಿನ ₹ 546 ಕೋಟಿಗೆ ಹೋಲಿಸಿದರೆ ಸಮಾನ ರೀತಿಯ ಬೆಳವಣಿಗೆ ಸೂಚಿಸುತ್ತದೆ. ಜಿಡಬ್ಲ್ಯುಪಿಗೆ ಕಾರ್ಯಾಚರಣೆ ವೆಚ್ಚ ಅನುಪಾತವು (ಒಪಿಇಎಕ್ಸ್‌) ಕಳೆದ ವರ್ಷದ ಶೇ 30 ರಿಂದ ಶೇ 27 ಕ್ಕೆ ಕುಸಿದಿದೆ. ಇದು ವೆಚ್ಚ ಕಡಿತ ಮತ್ತು ಸಂಪನ್ಮೂಲ ನಿರ್ವಹಣೆಯ ಸರಳೀಕರಣದ ಮೇಲೆ ಕಂಪನಿಯು ಹೆಚ್ಚಿನ ಒತ್ತು ನೀಡಿರುವುದನ್ನು ಸೂಚಿಸುತ್ತದೆ.

ಗ್ರಾಹಕರ ವಿಶ್ವಾಸಾರ್ಹತೆಯ ಪ್ರಮುಖ ಮಾನದಂಡವಾಗಿರುವ ವಿಮೆ ಪರಿಹಾರ ಇತ್ಯರ್ಥ ಅನುಪಾತವು ಶೇ 98.8ರಷ್ಟಿದ್ದು, ಪಾಲಿಸಿದಾರರ ವಿಶ್ವಾಸಾರ್ಹತೆ ಮತ್ತು ಬದ್ಧತೆಯ ವಿಷಯದಲ್ಲಿ ಅವಿವಾ ಇಂಡಿಯಾ ಹೊಂದಿರುವ ದೃಢ ನಂಬಿಕೆಯನ್ನು ಇದು ಸೂಚಿಸುತ್ತದೆ.

ಅವಿವಾ ಇಂಡಿಯಾದ ವಿತರಣಾ ಜಾಲದಲ್ಲಿ 5,600 ತರಬೇತಿ ಹೊಂದಿರುವ ವಿಮೆ ವೃತ್ತಿಪರರು ಇದ್ದಾರೆ. ದೇಶದಾದ್ಯಂತ 52 ಕಚೇರಿಗಳನ್ನು ಹೊಂದಿದೆ. ಈ ಮೂಲಕ ತನ್ನ ವೈವಿಧ್ಯಮಯ ಗ್ರಾಹಕ ಸಮೂಹಕ್ಕೆ ದಕ್ಷವಾಗಿ ಕಂಪನಿಯು ಸೇವೆ ಸಲ್ಲಿಸುತ್ತಿದೆ.

ಅವಿವಾ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಸಿತ್ ರಥ್ ಅವರು ಮಾತನಾಡಿ, ʼನಮ್ಮ ಗ್ರಾಹಕ-ಕೇಂದ್ರಿತ ಉತ್ಪನ್ನಗಳು ಮತ್ತು ಕಾರ್ಯಾಚರಣೆಯ ದಕ್ಷತೆಯಿಂದ ಲಾಭ ಹೆಚ್ಚಳವಾಗಿದ್ದು, ಈ ನಿರಂತರ ಬೆಳವಣಿಗೆಯು ಮಾರುಕಟ್ಟೆಯಲ್ಲಿ ವಹಿವಾಟು ಹೆಚ್ಚುತ್ತಿರುವ ನಮ್ಮ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. ನಮ್ಮ ಗ್ರಾಹಕರಿಗೆ ಆರ್ಥಿಕ ಭದ್ರತೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸಲು ನಾವು ಬದ್ಧರಾಗಿದ್ದೇವೆʼ ಎಂದು ಹೇಳಿದ್ದಾರೆ.

*ಭವಿಷ್ಯದ ಕ್ರಮಗಳು:*

ಮುಂಬರುವ ತ್ರೈಮಾಸಿಕಗಳಲ್ಲಿ ಅವಿವಾ ಇಂಡಿಯಾ ಪರಿವರ್ತನೀಯ ಬ್ರ್ಯಾಂಡ್ ಪರಿಚಯಿಸಲು ಸಜ್ಜಾಗಿದೆ. ಈ ಬದಲಾವಣೆಯು ಗ್ರಾಹಕರು ಮತ್ತು ಪಾಲುದಾರರನ್ನು ಆರೋಗ್ಯಕರ ನಿರ್ಧಾರ ಕೈಗೊಳ್ಳಲು ಆದ್ಯತೆ ನೀಡುವುದಕ್ಕೆ ಪ್ರೇರೇಪಿಸುವ ಗುರಿ ಹೊಂದಿದೆ.

ಕಡಿಮೆ ವಿಮೆ ಪರಿಹಾರದ ಹಾಗೂ ಕಡಿಮೆ ಪ್ರೀಮಿಯಂನ ವಿಮೆ ಉತ್ಪನ್ನಗಳನ್ನು ಕಂಪನಿಯು ಭವಿಷ್ಯದಲ್ಲಿ ಪರಿಚಯಿಸಲಿದ್ದು, ಇವು ಜನಸಾಮಾನ್ಯರಿಗೆ ಹೆಚ್ಚು ಉಪಯುಕ್ತವಾಗಿರುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

14 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago