2025 ಹಣಕಾಸು ವರ್ಷದ ಮೊದಲಾರ್ಧದ ಹಣಕಾಸು ಫಲಿತಾಂಶ ಪ್ರಕಟಿಸಿದ ಅವಿವಾ ಇಂಡಿಯಾ

• *2025 ಹಣಕಾಸು ವರ್ಷದ ಮೊದಲಾರ್ಧದಲ್ಲಿ ₹ 63 ಕೋಟಿ ಲಾಭ. ಹಿಂದಿನ ಕಳೆದ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ*
• *ನಿರ್ವಹಣೆಯಲ್ಲಿರುವ ಸ್ವತ್ತುಗಳು (ಎಯುಎಂ) ಶೇ 13ರಷ್ಟು ಏರಿಕೆಯಾಗಿದ್ದು, ₹ 14,636 ಕೋಟಿಗೆ ತಲುಪಿದೆ*
• *ದೀರ್ಘಾವಧಿಯಲ್ಲಿನ ಹೊಣೆಗಾರಿಕೆಗಳನ್ನು ನಿಭಾಯಿಸುವ ಸಾಮರ್ಥ್ಯವು ಶೇ 189ರಿಂದ ಶೇ 194ಕ್ಕೆ ಏರಿಕೆಯಾಗಿದೆ*
• *ಅವಿವಾದ ವಿಶಿಷ್ಟ ಉತ್ಪನ್ನಗಳು ಲಾಭ ತಂದುಕೊಟ್ಟಿದ್ದು, ಗ್ರಾಹಕರು, ಮಾರಾಟಗಾರರು ಮತ್ತು ಷೇರುದಾರರಲ್ಲಿ ವಿಶ್ವಾಸ ಹೆಚ್ಚಿಸಿವೆ*

* 2, ಡಿಸೆಂಬರ್‌ 2024:* ಅವಿವಾ ಇಂಡಿಯಾ, ಹಣಕಾಸು ವರ್ಷ 2025ರ ಮೊದಲಾರ್ಧದ ತನ್ನ ಹಣಕಾಸು ಫಲಿತಾಂಶಗಳನ್ನು ಪ್ರಕಟಿಸಿದ್ದು ಪ್ರಮುಖ ಮಾನದಂಡಗಳಲ್ಲಿ ಸ್ಥಿರ ಪ್ರಗತಿ ಪ್ರದರ್ಶಿಸಿದೆ. ಈ ಅವಧಿಯಲ್ಲಿ ₹ 63 ಕೋಟಿ ಲಾಭ ಗಳಿಸಿದ್ದು, ಇದು ಹಿಂದಿನ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ ಸಾಧಿಸಿದೆ.

ನಿರ್ವಹಣೆಯಲ್ಲಿರುವ ಸ್ವತ್ತು (ಎಯುಎಂ) ಶೇ 13ರಷ್ಟು ಬೆಳವಣಿಗೆ ಕಂಡಿದ್ದು, ₹ 14,636 ಕೋಟಿಗೆ ತಲುಪಿದೆ.

ಇದು ಉತ್ತಮ ನಿಧಿ ನಿರ್ವಹಣೆ ಮತ್ತು ಹೂಡಿಕೆದಾರರ ವಿಶ್ವಾಸ ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ. ಮಾರಾಟ ಗುಣಮಟ್ಟವೂ ಭಾರಿ ಸುಧಾರಣೆ ಕಂಡಿದ್ದು, “ಪ್ರತಿ 10 ಸಾವಿರ ಪಾಲಿಸಿಗಳಿಗೆ ದೂರುಗಳು” ಹಿಂದಿನ ವರ್ಷದ ಇದೇ ಅವಧಿಯಲ್ಲಿನ 10.3 ರಿಂದ ಈಗ 8.8 ಆಗಿದೆ. ಗ್ರಾಹಕರ ಅನುಭವ ಸುಧಾರಿಸುವ ನಿಟ್ಟಿನಲ್ಲಿ ಅವಿವಾ ಇಂಡಿಯಾದ ಬದ್ಧತೆಗೆ ಇದು ನಿದರ್ಶನವಾಗಿದೆ.

ವಿಮೆ ಪಾಲಿಸಿಗಳಿಗೆ ಗ್ರಾಹಕರಿಂದ ಸಂಗ್ರಹಿಸಲಾದ ಒಟ್ಟಾರೆ ಮೊತ್ತವು (ಜಿಡಬ್ಲ್ಯುಪಿ) ₹ 548 ಕೋಟಿಗಳಷ್ಟಾಗಿದ್ದು, ಹಿಂದಿನ ವರ್ಷದ ಇದೇ ಅವಧಿಯಲ್ಲಿನ ₹ 546 ಕೋಟಿಗೆ ಹೋಲಿಸಿದರೆ ಸಮಾನ ರೀತಿಯ ಬೆಳವಣಿಗೆ ಸೂಚಿಸುತ್ತದೆ. ಜಿಡಬ್ಲ್ಯುಪಿಗೆ ಕಾರ್ಯಾಚರಣೆ ವೆಚ್ಚ ಅನುಪಾತವು (ಒಪಿಇಎಕ್ಸ್‌) ಕಳೆದ ವರ್ಷದ ಶೇ 30 ರಿಂದ ಶೇ 27 ಕ್ಕೆ ಕುಸಿದಿದೆ. ಇದು ವೆಚ್ಚ ಕಡಿತ ಮತ್ತು ಸಂಪನ್ಮೂಲ ನಿರ್ವಹಣೆಯ ಸರಳೀಕರಣದ ಮೇಲೆ ಕಂಪನಿಯು ಹೆಚ್ಚಿನ ಒತ್ತು ನೀಡಿರುವುದನ್ನು ಸೂಚಿಸುತ್ತದೆ.

ಗ್ರಾಹಕರ ವಿಶ್ವಾಸಾರ್ಹತೆಯ ಪ್ರಮುಖ ಮಾನದಂಡವಾಗಿರುವ ವಿಮೆ ಪರಿಹಾರ ಇತ್ಯರ್ಥ ಅನುಪಾತವು ಶೇ 98.8ರಷ್ಟಿದ್ದು, ಪಾಲಿಸಿದಾರರ ವಿಶ್ವಾಸಾರ್ಹತೆ ಮತ್ತು ಬದ್ಧತೆಯ ವಿಷಯದಲ್ಲಿ ಅವಿವಾ ಇಂಡಿಯಾ ಹೊಂದಿರುವ ದೃಢ ನಂಬಿಕೆಯನ್ನು ಇದು ಸೂಚಿಸುತ್ತದೆ.

ಅವಿವಾ ಇಂಡಿಯಾದ ವಿತರಣಾ ಜಾಲದಲ್ಲಿ 5,600 ತರಬೇತಿ ಹೊಂದಿರುವ ವಿಮೆ ವೃತ್ತಿಪರರು ಇದ್ದಾರೆ. ದೇಶದಾದ್ಯಂತ 52 ಕಚೇರಿಗಳನ್ನು ಹೊಂದಿದೆ. ಈ ಮೂಲಕ ತನ್ನ ವೈವಿಧ್ಯಮಯ ಗ್ರಾಹಕ ಸಮೂಹಕ್ಕೆ ದಕ್ಷವಾಗಿ ಕಂಪನಿಯು ಸೇವೆ ಸಲ್ಲಿಸುತ್ತಿದೆ.

ಅವಿವಾ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಸಿತ್ ರಥ್ ಅವರು ಮಾತನಾಡಿ, ʼನಮ್ಮ ಗ್ರಾಹಕ-ಕೇಂದ್ರಿತ ಉತ್ಪನ್ನಗಳು ಮತ್ತು ಕಾರ್ಯಾಚರಣೆಯ ದಕ್ಷತೆಯಿಂದ ಲಾಭ ಹೆಚ್ಚಳವಾಗಿದ್ದು, ಈ ನಿರಂತರ ಬೆಳವಣಿಗೆಯು ಮಾರುಕಟ್ಟೆಯಲ್ಲಿ ವಹಿವಾಟು ಹೆಚ್ಚುತ್ತಿರುವ ನಮ್ಮ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. ನಮ್ಮ ಗ್ರಾಹಕರಿಗೆ ಆರ್ಥಿಕ ಭದ್ರತೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸಲು ನಾವು ಬದ್ಧರಾಗಿದ್ದೇವೆʼ ಎಂದು ಹೇಳಿದ್ದಾರೆ.

*ಭವಿಷ್ಯದ ಕ್ರಮಗಳು:*

ಮುಂಬರುವ ತ್ರೈಮಾಸಿಕಗಳಲ್ಲಿ ಅವಿವಾ ಇಂಡಿಯಾ ಪರಿವರ್ತನೀಯ ಬ್ರ್ಯಾಂಡ್ ಪರಿಚಯಿಸಲು ಸಜ್ಜಾಗಿದೆ. ಈ ಬದಲಾವಣೆಯು ಗ್ರಾಹಕರು ಮತ್ತು ಪಾಲುದಾರರನ್ನು ಆರೋಗ್ಯಕರ ನಿರ್ಧಾರ ಕೈಗೊಳ್ಳಲು ಆದ್ಯತೆ ನೀಡುವುದಕ್ಕೆ ಪ್ರೇರೇಪಿಸುವ ಗುರಿ ಹೊಂದಿದೆ.

ಕಡಿಮೆ ವಿಮೆ ಪರಿಹಾರದ ಹಾಗೂ ಕಡಿಮೆ ಪ್ರೀಮಿಯಂನ ವಿಮೆ ಉತ್ಪನ್ನಗಳನ್ನು ಕಂಪನಿಯು ಭವಿಷ್ಯದಲ್ಲಿ ಪರಿಚಯಿಸಲಿದ್ದು, ಇವು ಜನಸಾಮಾನ್ಯರಿಗೆ ಹೆಚ್ಚು ಉಪಯುಕ್ತವಾಗಿರುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

8 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

9 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

9 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

11 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

14 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

15 hours ago