2025 ಹಣಕಾಸು ವರ್ಷದ ಮೊದಲಾರ್ಧದ ಹಣಕಾಸು ಫಲಿತಾಂಶ ಪ್ರಕಟಿಸಿದ ಅವಿವಾ ಇಂಡಿಯಾ

• *2025 ಹಣಕಾಸು ವರ್ಷದ ಮೊದಲಾರ್ಧದಲ್ಲಿ ₹ 63 ಕೋಟಿ ಲಾಭ. ಹಿಂದಿನ ಕಳೆದ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ*
• *ನಿರ್ವಹಣೆಯಲ್ಲಿರುವ ಸ್ವತ್ತುಗಳು (ಎಯುಎಂ) ಶೇ 13ರಷ್ಟು ಏರಿಕೆಯಾಗಿದ್ದು, ₹ 14,636 ಕೋಟಿಗೆ ತಲುಪಿದೆ*
• *ದೀರ್ಘಾವಧಿಯಲ್ಲಿನ ಹೊಣೆಗಾರಿಕೆಗಳನ್ನು ನಿಭಾಯಿಸುವ ಸಾಮರ್ಥ್ಯವು ಶೇ 189ರಿಂದ ಶೇ 194ಕ್ಕೆ ಏರಿಕೆಯಾಗಿದೆ*
• *ಅವಿವಾದ ವಿಶಿಷ್ಟ ಉತ್ಪನ್ನಗಳು ಲಾಭ ತಂದುಕೊಟ್ಟಿದ್ದು, ಗ್ರಾಹಕರು, ಮಾರಾಟಗಾರರು ಮತ್ತು ಷೇರುದಾರರಲ್ಲಿ ವಿಶ್ವಾಸ ಹೆಚ್ಚಿಸಿವೆ*

* 2, ಡಿಸೆಂಬರ್‌ 2024:* ಅವಿವಾ ಇಂಡಿಯಾ, ಹಣಕಾಸು ವರ್ಷ 2025ರ ಮೊದಲಾರ್ಧದ ತನ್ನ ಹಣಕಾಸು ಫಲಿತಾಂಶಗಳನ್ನು ಪ್ರಕಟಿಸಿದ್ದು ಪ್ರಮುಖ ಮಾನದಂಡಗಳಲ್ಲಿ ಸ್ಥಿರ ಪ್ರಗತಿ ಪ್ರದರ್ಶಿಸಿದೆ. ಈ ಅವಧಿಯಲ್ಲಿ ₹ 63 ಕೋಟಿ ಲಾಭ ಗಳಿಸಿದ್ದು, ಇದು ಹಿಂದಿನ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ ಸಾಧಿಸಿದೆ.

ನಿರ್ವಹಣೆಯಲ್ಲಿರುವ ಸ್ವತ್ತು (ಎಯುಎಂ) ಶೇ 13ರಷ್ಟು ಬೆಳವಣಿಗೆ ಕಂಡಿದ್ದು, ₹ 14,636 ಕೋಟಿಗೆ ತಲುಪಿದೆ.

ಇದು ಉತ್ತಮ ನಿಧಿ ನಿರ್ವಹಣೆ ಮತ್ತು ಹೂಡಿಕೆದಾರರ ವಿಶ್ವಾಸ ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ. ಮಾರಾಟ ಗುಣಮಟ್ಟವೂ ಭಾರಿ ಸುಧಾರಣೆ ಕಂಡಿದ್ದು, “ಪ್ರತಿ 10 ಸಾವಿರ ಪಾಲಿಸಿಗಳಿಗೆ ದೂರುಗಳು” ಹಿಂದಿನ ವರ್ಷದ ಇದೇ ಅವಧಿಯಲ್ಲಿನ 10.3 ರಿಂದ ಈಗ 8.8 ಆಗಿದೆ. ಗ್ರಾಹಕರ ಅನುಭವ ಸುಧಾರಿಸುವ ನಿಟ್ಟಿನಲ್ಲಿ ಅವಿವಾ ಇಂಡಿಯಾದ ಬದ್ಧತೆಗೆ ಇದು ನಿದರ್ಶನವಾಗಿದೆ.

ವಿಮೆ ಪಾಲಿಸಿಗಳಿಗೆ ಗ್ರಾಹಕರಿಂದ ಸಂಗ್ರಹಿಸಲಾದ ಒಟ್ಟಾರೆ ಮೊತ್ತವು (ಜಿಡಬ್ಲ್ಯುಪಿ) ₹ 548 ಕೋಟಿಗಳಷ್ಟಾಗಿದ್ದು, ಹಿಂದಿನ ವರ್ಷದ ಇದೇ ಅವಧಿಯಲ್ಲಿನ ₹ 546 ಕೋಟಿಗೆ ಹೋಲಿಸಿದರೆ ಸಮಾನ ರೀತಿಯ ಬೆಳವಣಿಗೆ ಸೂಚಿಸುತ್ತದೆ. ಜಿಡಬ್ಲ್ಯುಪಿಗೆ ಕಾರ್ಯಾಚರಣೆ ವೆಚ್ಚ ಅನುಪಾತವು (ಒಪಿಇಎಕ್ಸ್‌) ಕಳೆದ ವರ್ಷದ ಶೇ 30 ರಿಂದ ಶೇ 27 ಕ್ಕೆ ಕುಸಿದಿದೆ. ಇದು ವೆಚ್ಚ ಕಡಿತ ಮತ್ತು ಸಂಪನ್ಮೂಲ ನಿರ್ವಹಣೆಯ ಸರಳೀಕರಣದ ಮೇಲೆ ಕಂಪನಿಯು ಹೆಚ್ಚಿನ ಒತ್ತು ನೀಡಿರುವುದನ್ನು ಸೂಚಿಸುತ್ತದೆ.

ಗ್ರಾಹಕರ ವಿಶ್ವಾಸಾರ್ಹತೆಯ ಪ್ರಮುಖ ಮಾನದಂಡವಾಗಿರುವ ವಿಮೆ ಪರಿಹಾರ ಇತ್ಯರ್ಥ ಅನುಪಾತವು ಶೇ 98.8ರಷ್ಟಿದ್ದು, ಪಾಲಿಸಿದಾರರ ವಿಶ್ವಾಸಾರ್ಹತೆ ಮತ್ತು ಬದ್ಧತೆಯ ವಿಷಯದಲ್ಲಿ ಅವಿವಾ ಇಂಡಿಯಾ ಹೊಂದಿರುವ ದೃಢ ನಂಬಿಕೆಯನ್ನು ಇದು ಸೂಚಿಸುತ್ತದೆ.

ಅವಿವಾ ಇಂಡಿಯಾದ ವಿತರಣಾ ಜಾಲದಲ್ಲಿ 5,600 ತರಬೇತಿ ಹೊಂದಿರುವ ವಿಮೆ ವೃತ್ತಿಪರರು ಇದ್ದಾರೆ. ದೇಶದಾದ್ಯಂತ 52 ಕಚೇರಿಗಳನ್ನು ಹೊಂದಿದೆ. ಈ ಮೂಲಕ ತನ್ನ ವೈವಿಧ್ಯಮಯ ಗ್ರಾಹಕ ಸಮೂಹಕ್ಕೆ ದಕ್ಷವಾಗಿ ಕಂಪನಿಯು ಸೇವೆ ಸಲ್ಲಿಸುತ್ತಿದೆ.

ಅವಿವಾ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಸಿತ್ ರಥ್ ಅವರು ಮಾತನಾಡಿ, ʼನಮ್ಮ ಗ್ರಾಹಕ-ಕೇಂದ್ರಿತ ಉತ್ಪನ್ನಗಳು ಮತ್ತು ಕಾರ್ಯಾಚರಣೆಯ ದಕ್ಷತೆಯಿಂದ ಲಾಭ ಹೆಚ್ಚಳವಾಗಿದ್ದು, ಈ ನಿರಂತರ ಬೆಳವಣಿಗೆಯು ಮಾರುಕಟ್ಟೆಯಲ್ಲಿ ವಹಿವಾಟು ಹೆಚ್ಚುತ್ತಿರುವ ನಮ್ಮ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. ನಮ್ಮ ಗ್ರಾಹಕರಿಗೆ ಆರ್ಥಿಕ ಭದ್ರತೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸಲು ನಾವು ಬದ್ಧರಾಗಿದ್ದೇವೆʼ ಎಂದು ಹೇಳಿದ್ದಾರೆ.

*ಭವಿಷ್ಯದ ಕ್ರಮಗಳು:*

ಮುಂಬರುವ ತ್ರೈಮಾಸಿಕಗಳಲ್ಲಿ ಅವಿವಾ ಇಂಡಿಯಾ ಪರಿವರ್ತನೀಯ ಬ್ರ್ಯಾಂಡ್ ಪರಿಚಯಿಸಲು ಸಜ್ಜಾಗಿದೆ. ಈ ಬದಲಾವಣೆಯು ಗ್ರಾಹಕರು ಮತ್ತು ಪಾಲುದಾರರನ್ನು ಆರೋಗ್ಯಕರ ನಿರ್ಧಾರ ಕೈಗೊಳ್ಳಲು ಆದ್ಯತೆ ನೀಡುವುದಕ್ಕೆ ಪ್ರೇರೇಪಿಸುವ ಗುರಿ ಹೊಂದಿದೆ.

ಕಡಿಮೆ ವಿಮೆ ಪರಿಹಾರದ ಹಾಗೂ ಕಡಿಮೆ ಪ್ರೀಮಿಯಂನ ವಿಮೆ ಉತ್ಪನ್ನಗಳನ್ನು ಕಂಪನಿಯು ಭವಿಷ್ಯದಲ್ಲಿ ಪರಿಚಯಿಸಲಿದ್ದು, ಇವು ಜನಸಾಮಾನ್ಯರಿಗೆ ಹೆಚ್ಚು ಉಪಯುಕ್ತವಾಗಿರುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

23 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

24 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

1 day ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

2 days ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

2 days ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

2 days ago