• *2025 ಹಣಕಾಸು ವರ್ಷದ ಮೊದಲಾರ್ಧದಲ್ಲಿ ₹ 63 ಕೋಟಿ ಲಾಭ. ಹಿಂದಿನ ಕಳೆದ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ*
• *ನಿರ್ವಹಣೆಯಲ್ಲಿರುವ ಸ್ವತ್ತುಗಳು (ಎಯುಎಂ) ಶೇ 13ರಷ್ಟು ಏರಿಕೆಯಾಗಿದ್ದು, ₹ 14,636 ಕೋಟಿಗೆ ತಲುಪಿದೆ*
• *ದೀರ್ಘಾವಧಿಯಲ್ಲಿನ ಹೊಣೆಗಾರಿಕೆಗಳನ್ನು ನಿಭಾಯಿಸುವ ಸಾಮರ್ಥ್ಯವು ಶೇ 189ರಿಂದ ಶೇ 194ಕ್ಕೆ ಏರಿಕೆಯಾಗಿದೆ*
• *ಅವಿವಾದ ವಿಶಿಷ್ಟ ಉತ್ಪನ್ನಗಳು ಲಾಭ ತಂದುಕೊಟ್ಟಿದ್ದು, ಗ್ರಾಹಕರು, ಮಾರಾಟಗಾರರು ಮತ್ತು ಷೇರುದಾರರಲ್ಲಿ ವಿಶ್ವಾಸ ಹೆಚ್ಚಿಸಿವೆ*
* 2, ಡಿಸೆಂಬರ್ 2024:* ಅವಿವಾ ಇಂಡಿಯಾ, ಹಣಕಾಸು ವರ್ಷ 2025ರ ಮೊದಲಾರ್ಧದ ತನ್ನ ಹಣಕಾಸು ಫಲಿತಾಂಶಗಳನ್ನು ಪ್ರಕಟಿಸಿದ್ದು ಪ್ರಮುಖ ಮಾನದಂಡಗಳಲ್ಲಿ ಸ್ಥಿರ ಪ್ರಗತಿ ಪ್ರದರ್ಶಿಸಿದೆ. ಈ ಅವಧಿಯಲ್ಲಿ ₹ 63 ಕೋಟಿ ಲಾಭ ಗಳಿಸಿದ್ದು, ಇದು ಹಿಂದಿನ ವರ್ಷದ ₹ 50 ಕೋಟಿಗೆ ಹೋಲಿಸಿದರೆ ಶೇ 25ರಷ್ಟು ಹೆಚ್ಚಳ ಸಾಧಿಸಿದೆ.
ನಿರ್ವಹಣೆಯಲ್ಲಿರುವ ಸ್ವತ್ತು (ಎಯುಎಂ) ಶೇ 13ರಷ್ಟು ಬೆಳವಣಿಗೆ ಕಂಡಿದ್ದು, ₹ 14,636 ಕೋಟಿಗೆ ತಲುಪಿದೆ.
ಇದು ಉತ್ತಮ ನಿಧಿ ನಿರ್ವಹಣೆ ಮತ್ತು ಹೂಡಿಕೆದಾರರ ವಿಶ್ವಾಸ ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ. ಮಾರಾಟ ಗುಣಮಟ್ಟವೂ ಭಾರಿ ಸುಧಾರಣೆ ಕಂಡಿದ್ದು, “ಪ್ರತಿ 10 ಸಾವಿರ ಪಾಲಿಸಿಗಳಿಗೆ ದೂರುಗಳು” ಹಿಂದಿನ ವರ್ಷದ ಇದೇ ಅವಧಿಯಲ್ಲಿನ 10.3 ರಿಂದ ಈಗ 8.8 ಆಗಿದೆ. ಗ್ರಾಹಕರ ಅನುಭವ ಸುಧಾರಿಸುವ ನಿಟ್ಟಿನಲ್ಲಿ ಅವಿವಾ ಇಂಡಿಯಾದ ಬದ್ಧತೆಗೆ ಇದು ನಿದರ್ಶನವಾಗಿದೆ.
ವಿಮೆ ಪಾಲಿಸಿಗಳಿಗೆ ಗ್ರಾಹಕರಿಂದ ಸಂಗ್ರಹಿಸಲಾದ ಒಟ್ಟಾರೆ ಮೊತ್ತವು (ಜಿಡಬ್ಲ್ಯುಪಿ) ₹ 548 ಕೋಟಿಗಳಷ್ಟಾಗಿದ್ದು, ಹಿಂದಿನ ವರ್ಷದ ಇದೇ ಅವಧಿಯಲ್ಲಿನ ₹ 546 ಕೋಟಿಗೆ ಹೋಲಿಸಿದರೆ ಸಮಾನ ರೀತಿಯ ಬೆಳವಣಿಗೆ ಸೂಚಿಸುತ್ತದೆ. ಜಿಡಬ್ಲ್ಯುಪಿಗೆ ಕಾರ್ಯಾಚರಣೆ ವೆಚ್ಚ ಅನುಪಾತವು (ಒಪಿಇಎಕ್ಸ್) ಕಳೆದ ವರ್ಷದ ಶೇ 30 ರಿಂದ ಶೇ 27 ಕ್ಕೆ ಕುಸಿದಿದೆ. ಇದು ವೆಚ್ಚ ಕಡಿತ ಮತ್ತು ಸಂಪನ್ಮೂಲ ನಿರ್ವಹಣೆಯ ಸರಳೀಕರಣದ ಮೇಲೆ ಕಂಪನಿಯು ಹೆಚ್ಚಿನ ಒತ್ತು ನೀಡಿರುವುದನ್ನು ಸೂಚಿಸುತ್ತದೆ.
ಗ್ರಾಹಕರ ವಿಶ್ವಾಸಾರ್ಹತೆಯ ಪ್ರಮುಖ ಮಾನದಂಡವಾಗಿರುವ ವಿಮೆ ಪರಿಹಾರ ಇತ್ಯರ್ಥ ಅನುಪಾತವು ಶೇ 98.8ರಷ್ಟಿದ್ದು, ಪಾಲಿಸಿದಾರರ ವಿಶ್ವಾಸಾರ್ಹತೆ ಮತ್ತು ಬದ್ಧತೆಯ ವಿಷಯದಲ್ಲಿ ಅವಿವಾ ಇಂಡಿಯಾ ಹೊಂದಿರುವ ದೃಢ ನಂಬಿಕೆಯನ್ನು ಇದು ಸೂಚಿಸುತ್ತದೆ.
ಅವಿವಾ ಇಂಡಿಯಾದ ವಿತರಣಾ ಜಾಲದಲ್ಲಿ 5,600 ತರಬೇತಿ ಹೊಂದಿರುವ ವಿಮೆ ವೃತ್ತಿಪರರು ಇದ್ದಾರೆ. ದೇಶದಾದ್ಯಂತ 52 ಕಚೇರಿಗಳನ್ನು ಹೊಂದಿದೆ. ಈ ಮೂಲಕ ತನ್ನ ವೈವಿಧ್ಯಮಯ ಗ್ರಾಹಕ ಸಮೂಹಕ್ಕೆ ದಕ್ಷವಾಗಿ ಕಂಪನಿಯು ಸೇವೆ ಸಲ್ಲಿಸುತ್ತಿದೆ.
ಅವಿವಾ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಸಿತ್ ರಥ್ ಅವರು ಮಾತನಾಡಿ, ʼನಮ್ಮ ಗ್ರಾಹಕ-ಕೇಂದ್ರಿತ ಉತ್ಪನ್ನಗಳು ಮತ್ತು ಕಾರ್ಯಾಚರಣೆಯ ದಕ್ಷತೆಯಿಂದ ಲಾಭ ಹೆಚ್ಚಳವಾಗಿದ್ದು, ಈ ನಿರಂತರ ಬೆಳವಣಿಗೆಯು ಮಾರುಕಟ್ಟೆಯಲ್ಲಿ ವಹಿವಾಟು ಹೆಚ್ಚುತ್ತಿರುವ ನಮ್ಮ ಸಾಮರ್ಥ್ಯವನ್ನು ಇದು ಪ್ರತಿಬಿಂಬಿಸುತ್ತದೆ. ನಮ್ಮ ಗ್ರಾಹಕರಿಗೆ ಆರ್ಥಿಕ ಭದ್ರತೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸಲು ನಾವು ಬದ್ಧರಾಗಿದ್ದೇವೆʼ ಎಂದು ಹೇಳಿದ್ದಾರೆ.
*ಭವಿಷ್ಯದ ಕ್ರಮಗಳು:*
ಮುಂಬರುವ ತ್ರೈಮಾಸಿಕಗಳಲ್ಲಿ ಅವಿವಾ ಇಂಡಿಯಾ ಪರಿವರ್ತನೀಯ ಬ್ರ್ಯಾಂಡ್ ಪರಿಚಯಿಸಲು ಸಜ್ಜಾಗಿದೆ. ಈ ಬದಲಾವಣೆಯು ಗ್ರಾಹಕರು ಮತ್ತು ಪಾಲುದಾರರನ್ನು ಆರೋಗ್ಯಕರ ನಿರ್ಧಾರ ಕೈಗೊಳ್ಳಲು ಆದ್ಯತೆ ನೀಡುವುದಕ್ಕೆ ಪ್ರೇರೇಪಿಸುವ ಗುರಿ ಹೊಂದಿದೆ.
ಕಡಿಮೆ ವಿಮೆ ಪರಿಹಾರದ ಹಾಗೂ ಕಡಿಮೆ ಪ್ರೀಮಿಯಂನ ವಿಮೆ ಉತ್ಪನ್ನಗಳನ್ನು ಕಂಪನಿಯು ಭವಿಷ್ಯದಲ್ಲಿ ಪರಿಚಯಿಸಲಿದ್ದು, ಇವು ಜನಸಾಮಾನ್ಯರಿಗೆ ಹೆಚ್ಚು ಉಪಯುಕ್ತವಾಗಿರುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…