ಹೊಸ ವರ್ಷಾಚರಣೆಗೆ ಇನ್ನೇನು ಎರಡು ದಿನಗಳು ಬಾಕಿ ಇದ್ದು, 2025ನೇ ಸಾಲನ್ನು ಬರಮಾಡಿಕೊಂಡು ಅದ್ಧೂರಿ ಸಂಭ್ರಮಾಚರಣೆ ಮಾಡಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಸಮುದ್ರಮಟ್ಟದಿಂದ 1,486 ಮೀಟರ್ ಎತ್ತರದಲ್ಲಿರುವ ನಂದಿ ಗಿರಿಧಾಮ ಯುವಕ-ಯುವತಿಯರ ನೆಚ್ಚಿನ ತಾಣ ಹಾಗೂ ಹಾಟ್ ಸ್ಪಾಟ್. ಇಲ್ಲಿನ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ಬಣ್ಣಬಣ್ಣ ಹೂಗಳ ವಯ್ಯಾರ. ಸೂರ್ಯೋದಯ ಹಾಗೂ ಸೂರ್ಯಸ್ತ ನೋಡಲು ಲವ್ ಬರ್ಡ್ಸ್, ಪಾರ್ಟಿ ಪ್ರಿಯರು, ನವ ವಿವಾಹಿತರು, ಟೆಕ್ಕಿಗಳು, ಸ್ನೇಹಿತರು ಸೇರಿದಂತೆ ಇತರರು ಇಲ್ಲಿ ಬಂದು ಎಂಜಾಯ್ ಮಾಡುತ್ತಾರೆ. ಪ್ರಕೃತಿ ಮಡಿಲಲ್ಲಿ ಕುಳಿತು ಸೌಂದರ್ಯ ಸವಿಯುತ್ತಾ ಹೊಸ ವರ್ಷವನ್ನು ಅದ್ಧೂರಿಯಾಗಿ ಸೆಲಬ್ರೇಟ್ ಮಾಡಬೇಕು ಎಂದು ಕನಸು ಕೂಡ ಕಂಡಿರುತ್ತಾರೆ. ಆದರೆ, ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿಕೆ ಮಾಡಿ ಎಲ್ಲರಿಗೂ ಶಾಕ್ ನೀಡಿದೆ.
ಅತಿಥಿ ಗೃಹಗಳ ಕಾಯ್ದಿರಿಸುವಿಕೆ ಕೂಡ ರದ್ದು ಮಾಡಲಾಗಿರುತ್ತದೆ. ನಂದಿ ಬೆಟ್ಟದಲ್ಲಿ ಹಲವಾರು ಸೂಕ್ಷ್ಮ , ಅಪಾಯಕಾರಿ ಪ್ರದೇಶಗಳು ಇದ್ದು, ಜನಸಂದಣಿಯ ಹೆಚ್ಚಾಗಿ ಅನಾಹುತ ಸಂಭವಿಸುವ ಸನ್ನಿವೇಶ ಇರುತ್ತದೆ. ಅದೇರೀತಿ ಹೊಸಬರಿಗೆ ಇಂತಹ ಸ್ಥಳ ಪರಿಚಯ ಇರುವುದಿಲ್ಲ. ಅನಾಹುತ, ಪ್ರಾಣಿ ಹಾನಿ, ಅಪಾಯ ತಪ್ಪಿಸಲು ಸಲುವಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ನಿರ್ಬಂಧ ಹೇರಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…