2025-ಹೊಸ ವರ್ಷಾಚರಣೆ: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದ ಜಿಲ್ಲಾಡಳಿತ: 2024-ಡಿ.31ರ ಸಂಜೆ 6ಗಂಟೆಯಿಂದ 2025-ಜ.1ರ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರು, ಪ್ರವಾಸಿಗರು, ವಾಹನಗಳ ಪ್ರವೇಶಕ್ಕೆ ನಿಷೇಧ

ಹೊಸ ವರ್ಷಾಚರಣೆಗೆ ಇನ್ನೇನು ಎರಡು ದಿನಗಳು ಬಾಕಿ ಇದ್ದು, 2025ನೇ ಸಾಲನ್ನು ಬರಮಾಡಿಕೊಂಡು ಅದ್ಧೂರಿ ಸಂಭ್ರಮಾಚರಣೆ ಮಾಡಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಸಮುದ್ರಮಟ್ಟದಿಂದ 1,486 ಮೀಟರ್ ಎತ್ತರದಲ್ಲಿರುವ ನಂದಿ ಗಿರಿಧಾಮ ಯುವಕ-ಯುವತಿಯರ ನೆಚ್ಚಿನ ತಾಣ ಹಾಗೂ ಹಾಟ್ ಸ್ಪಾಟ್. ಇಲ್ಲಿನ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ಬಣ್ಣಬಣ್ಣ ಹೂಗಳ ವಯ್ಯಾರ. ಸೂರ್ಯೋದಯ ಹಾಗೂ ಸೂರ್ಯಸ್ತ ನೋಡಲು ಲವ್ ಬರ್ಡ್ಸ್, ಪಾರ್ಟಿ ಪ್ರಿಯರು, ನವ ವಿವಾಹಿತರು, ಟೆಕ್ಕಿಗಳು, ಸ್ನೇಹಿತರು ಸೇರಿದಂತೆ ಇತರರು ಇಲ್ಲಿ ಬಂದು ಎಂಜಾಯ್ ಮಾಡುತ್ತಾರೆ. ಪ್ರಕೃತಿ‌ ಮಡಿಲಲ್ಲಿ ಕುಳಿತು ಸೌಂದರ್ಯ ಸವಿಯುತ್ತಾ ಹೊಸ ವರ್ಷವನ್ನು ಅದ್ಧೂರಿಯಾಗಿ ಸೆಲಬ್ರೇಟ್ ಮಾಡಬೇಕು ಎಂದು ಕನಸು ಕೂಡ ಕಂಡಿರುತ್ತಾರೆ. ಆದರೆ, ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿಕೆ ಮಾಡಿ ಎಲ್ಲರಿಗೂ ಶಾಕ್ ನೀಡಿದೆ.

2024-ಡಿ.31ರ ಸಂಜೆ 6ಗಂಟೆಯಿಂದ 2025-ಜ.1ರ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರು, ಪ್ರವಾಸಿಗರು, ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಅತಿಥಿ ಗೃಹಗಳ ಕಾಯ್ದಿರಿಸುವಿಕೆ ಕೂಡ ರದ್ದು ಮಾಡಲಾಗಿರುತ್ತದೆ. ನಂದಿ ಬೆಟ್ಟದಲ್ಲಿ ಹಲವಾರು ಸೂಕ್ಷ್ಮ , ಅಪಾಯಕಾರಿ ಪ್ರದೇಶಗಳು ಇದ್ದು, ಜನಸಂದಣಿಯ ಹೆಚ್ಚಾಗಿ ಅನಾಹುತ ಸಂಭವಿಸುವ ಸನ್ನಿವೇಶ ಇರುತ್ತದೆ. ಅದೇರೀತಿ ಹೊಸಬರಿಗೆ ಇಂತಹ ಸ್ಥಳ ಪರಿಚಯ ಇರುವುದಿಲ್ಲ. ಅನಾಹುತ, ಪ್ರಾಣಿ ಹಾನಿ, ಅಪಾಯ ತಪ್ಪಿಸಲು ಸಲುವಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ನಿರ್ಬಂಧ ಹೇರಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

11 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

15 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

15 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

20 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago