ಹೊಸ ವರ್ಷಾಚರಣೆಗೆ ಇನ್ನೇನು ಎರಡು ದಿನಗಳು ಬಾಕಿ ಇದ್ದು, 2025ನೇ ಸಾಲನ್ನು ಬರಮಾಡಿಕೊಂಡು ಅದ್ಧೂರಿ ಸಂಭ್ರಮಾಚರಣೆ ಮಾಡಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಸಮುದ್ರಮಟ್ಟದಿಂದ 1,486 ಮೀಟರ್ ಎತ್ತರದಲ್ಲಿರುವ ನಂದಿ ಗಿರಿಧಾಮ ಯುವಕ-ಯುವತಿಯರ ನೆಚ್ಚಿನ ತಾಣ ಹಾಗೂ ಹಾಟ್ ಸ್ಪಾಟ್. ಇಲ್ಲಿನ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ಬಣ್ಣಬಣ್ಣ ಹೂಗಳ ವಯ್ಯಾರ. ಸೂರ್ಯೋದಯ ಹಾಗೂ ಸೂರ್ಯಸ್ತ ನೋಡಲು ಲವ್ ಬರ್ಡ್ಸ್, ಪಾರ್ಟಿ ಪ್ರಿಯರು, ನವ ವಿವಾಹಿತರು, ಟೆಕ್ಕಿಗಳು, ಸ್ನೇಹಿತರು ಸೇರಿದಂತೆ ಇತರರು ಇಲ್ಲಿ ಬಂದು ಎಂಜಾಯ್ ಮಾಡುತ್ತಾರೆ. ಪ್ರಕೃತಿ ಮಡಿಲಲ್ಲಿ ಕುಳಿತು ಸೌಂದರ್ಯ ಸವಿಯುತ್ತಾ ಹೊಸ ವರ್ಷವನ್ನು ಅದ್ಧೂರಿಯಾಗಿ ಸೆಲಬ್ರೇಟ್ ಮಾಡಬೇಕು ಎಂದು ಕನಸು ಕೂಡ ಕಂಡಿರುತ್ತಾರೆ. ಆದರೆ, ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿಕೆ ಮಾಡಿ ಎಲ್ಲರಿಗೂ ಶಾಕ್ ನೀಡಿದೆ.
ಅತಿಥಿ ಗೃಹಗಳ ಕಾಯ್ದಿರಿಸುವಿಕೆ ಕೂಡ ರದ್ದು ಮಾಡಲಾಗಿರುತ್ತದೆ. ನಂದಿ ಬೆಟ್ಟದಲ್ಲಿ ಹಲವಾರು ಸೂಕ್ಷ್ಮ , ಅಪಾಯಕಾರಿ ಪ್ರದೇಶಗಳು ಇದ್ದು, ಜನಸಂದಣಿಯ ಹೆಚ್ಚಾಗಿ ಅನಾಹುತ ಸಂಭವಿಸುವ ಸನ್ನಿವೇಶ ಇರುತ್ತದೆ. ಅದೇರೀತಿ ಹೊಸಬರಿಗೆ ಇಂತಹ ಸ್ಥಳ ಪರಿಚಯ ಇರುವುದಿಲ್ಲ. ಅನಾಹುತ, ಪ್ರಾಣಿ ಹಾನಿ, ಅಪಾಯ ತಪ್ಪಿಸಲು ಸಲುವಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ನಿರ್ಬಂಧ ಹೇರಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…