ಹೊಸ ವರ್ಷಾಚರಣೆಗೆ ಇನ್ನೇನು ಎರಡು ದಿನಗಳು ಬಾಕಿ ಇದ್ದು, 2025ನೇ ಸಾಲನ್ನು ಬರಮಾಡಿಕೊಂಡು ಅದ್ಧೂರಿ ಸಂಭ್ರಮಾಚರಣೆ ಮಾಡಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಸಮುದ್ರಮಟ್ಟದಿಂದ 1,486 ಮೀಟರ್ ಎತ್ತರದಲ್ಲಿರುವ ನಂದಿ ಗಿರಿಧಾಮ ಯುವಕ-ಯುವತಿಯರ ನೆಚ್ಚಿನ ತಾಣ ಹಾಗೂ ಹಾಟ್ ಸ್ಪಾಟ್. ಇಲ್ಲಿನ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ಬಣ್ಣಬಣ್ಣ ಹೂಗಳ ವಯ್ಯಾರ. ಸೂರ್ಯೋದಯ ಹಾಗೂ ಸೂರ್ಯಸ್ತ ನೋಡಲು ಲವ್ ಬರ್ಡ್ಸ್, ಪಾರ್ಟಿ ಪ್ರಿಯರು, ನವ ವಿವಾಹಿತರು, ಟೆಕ್ಕಿಗಳು, ಸ್ನೇಹಿತರು ಸೇರಿದಂತೆ ಇತರರು ಇಲ್ಲಿ ಬಂದು ಎಂಜಾಯ್ ಮಾಡುತ್ತಾರೆ. ಪ್ರಕೃತಿ ಮಡಿಲಲ್ಲಿ ಕುಳಿತು ಸೌಂದರ್ಯ ಸವಿಯುತ್ತಾ ಹೊಸ ವರ್ಷವನ್ನು ಅದ್ಧೂರಿಯಾಗಿ ಸೆಲಬ್ರೇಟ್ ಮಾಡಬೇಕು ಎಂದು ಕನಸು ಕೂಡ ಕಂಡಿರುತ್ತಾರೆ. ಆದರೆ, ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿಕೆ ಮಾಡಿ ಎಲ್ಲರಿಗೂ ಶಾಕ್ ನೀಡಿದೆ.
ಅತಿಥಿ ಗೃಹಗಳ ಕಾಯ್ದಿರಿಸುವಿಕೆ ಕೂಡ ರದ್ದು ಮಾಡಲಾಗಿರುತ್ತದೆ. ನಂದಿ ಬೆಟ್ಟದಲ್ಲಿ ಹಲವಾರು ಸೂಕ್ಷ್ಮ , ಅಪಾಯಕಾರಿ ಪ್ರದೇಶಗಳು ಇದ್ದು, ಜನಸಂದಣಿಯ ಹೆಚ್ಚಾಗಿ ಅನಾಹುತ ಸಂಭವಿಸುವ ಸನ್ನಿವೇಶ ಇರುತ್ತದೆ. ಅದೇರೀತಿ ಹೊಸಬರಿಗೆ ಇಂತಹ ಸ್ಥಳ ಪರಿಚಯ ಇರುವುದಿಲ್ಲ. ಅನಾಹುತ, ಪ್ರಾಣಿ ಹಾನಿ, ಅಪಾಯ ತಪ್ಪಿಸಲು ಸಲುವಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ನಿರ್ಬಂಧ ಹೇರಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…