2025-ಹೊಸ ವರ್ಷಾಚರಣೆ: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದ ಜಿಲ್ಲಾಡಳಿತ: 2024-ಡಿ.31ರ ಸಂಜೆ 6ಗಂಟೆಯಿಂದ 2025-ಜ.1ರ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರು, ಪ್ರವಾಸಿಗರು, ವಾಹನಗಳ ಪ್ರವೇಶಕ್ಕೆ ನಿಷೇಧ

ಹೊಸ ವರ್ಷಾಚರಣೆಗೆ ಇನ್ನೇನು ಎರಡು ದಿನಗಳು ಬಾಕಿ ಇದ್ದು, 2025ನೇ ಸಾಲನ್ನು ಬರಮಾಡಿಕೊಂಡು ಅದ್ಧೂರಿ ಸಂಭ್ರಮಾಚರಣೆ ಮಾಡಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಸಮುದ್ರಮಟ್ಟದಿಂದ 1,486 ಮೀಟರ್ ಎತ್ತರದಲ್ಲಿರುವ ನಂದಿ ಗಿರಿಧಾಮ ಯುವಕ-ಯುವತಿಯರ ನೆಚ್ಚಿನ ತಾಣ ಹಾಗೂ ಹಾಟ್ ಸ್ಪಾಟ್. ಇಲ್ಲಿನ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ಬಣ್ಣಬಣ್ಣ ಹೂಗಳ ವಯ್ಯಾರ. ಸೂರ್ಯೋದಯ ಹಾಗೂ ಸೂರ್ಯಸ್ತ ನೋಡಲು ಲವ್ ಬರ್ಡ್ಸ್, ಪಾರ್ಟಿ ಪ್ರಿಯರು, ನವ ವಿವಾಹಿತರು, ಟೆಕ್ಕಿಗಳು, ಸ್ನೇಹಿತರು ಸೇರಿದಂತೆ ಇತರರು ಇಲ್ಲಿ ಬಂದು ಎಂಜಾಯ್ ಮಾಡುತ್ತಾರೆ. ಪ್ರಕೃತಿ‌ ಮಡಿಲಲ್ಲಿ ಕುಳಿತು ಸೌಂದರ್ಯ ಸವಿಯುತ್ತಾ ಹೊಸ ವರ್ಷವನ್ನು ಅದ್ಧೂರಿಯಾಗಿ ಸೆಲಬ್ರೇಟ್ ಮಾಡಬೇಕು ಎಂದು ಕನಸು ಕೂಡ ಕಂಡಿರುತ್ತಾರೆ. ಆದರೆ, ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿಕೆ ಮಾಡಿ ಎಲ್ಲರಿಗೂ ಶಾಕ್ ನೀಡಿದೆ.

2024-ಡಿ.31ರ ಸಂಜೆ 6ಗಂಟೆಯಿಂದ 2025-ಜ.1ರ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರು, ಪ್ರವಾಸಿಗರು, ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಅತಿಥಿ ಗೃಹಗಳ ಕಾಯ್ದಿರಿಸುವಿಕೆ ಕೂಡ ರದ್ದು ಮಾಡಲಾಗಿರುತ್ತದೆ. ನಂದಿ ಬೆಟ್ಟದಲ್ಲಿ ಹಲವಾರು ಸೂಕ್ಷ್ಮ , ಅಪಾಯಕಾರಿ ಪ್ರದೇಶಗಳು ಇದ್ದು, ಜನಸಂದಣಿಯ ಹೆಚ್ಚಾಗಿ ಅನಾಹುತ ಸಂಭವಿಸುವ ಸನ್ನಿವೇಶ ಇರುತ್ತದೆ. ಅದೇರೀತಿ ಹೊಸಬರಿಗೆ ಇಂತಹ ಸ್ಥಳ ಪರಿಚಯ ಇರುವುದಿಲ್ಲ. ಅನಾಹುತ, ಪ್ರಾಣಿ ಹಾನಿ, ಅಪಾಯ ತಪ್ಪಿಸಲು ಸಲುವಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ನಿರ್ಬಂಧ ಹೇರಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

16 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

24 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago