2025-ಹೊಸ ವರ್ಷಾಚರಣೆ: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದ ಜಿಲ್ಲಾಡಳಿತ: 2024-ಡಿ.31ರ ಸಂಜೆ 6ಗಂಟೆಯಿಂದ 2025-ಜ.1ರ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರು, ಪ್ರವಾಸಿಗರು, ವಾಹನಗಳ ಪ್ರವೇಶಕ್ಕೆ ನಿಷೇಧ

ಹೊಸ ವರ್ಷಾಚರಣೆಗೆ ಇನ್ನೇನು ಎರಡು ದಿನಗಳು ಬಾಕಿ ಇದ್ದು, 2025ನೇ ಸಾಲನ್ನು ಬರಮಾಡಿಕೊಂಡು ಅದ್ಧೂರಿ ಸಂಭ್ರಮಾಚರಣೆ ಮಾಡಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಸಮುದ್ರಮಟ್ಟದಿಂದ 1,486 ಮೀಟರ್ ಎತ್ತರದಲ್ಲಿರುವ ನಂದಿ ಗಿರಿಧಾಮ ಯುವಕ-ಯುವತಿಯರ ನೆಚ್ಚಿನ ತಾಣ ಹಾಗೂ ಹಾಟ್ ಸ್ಪಾಟ್. ಇಲ್ಲಿನ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ಬಣ್ಣಬಣ್ಣ ಹೂಗಳ ವಯ್ಯಾರ. ಸೂರ್ಯೋದಯ ಹಾಗೂ ಸೂರ್ಯಸ್ತ ನೋಡಲು ಲವ್ ಬರ್ಡ್ಸ್, ಪಾರ್ಟಿ ಪ್ರಿಯರು, ನವ ವಿವಾಹಿತರು, ಟೆಕ್ಕಿಗಳು, ಸ್ನೇಹಿತರು ಸೇರಿದಂತೆ ಇತರರು ಇಲ್ಲಿ ಬಂದು ಎಂಜಾಯ್ ಮಾಡುತ್ತಾರೆ. ಪ್ರಕೃತಿ‌ ಮಡಿಲಲ್ಲಿ ಕುಳಿತು ಸೌಂದರ್ಯ ಸವಿಯುತ್ತಾ ಹೊಸ ವರ್ಷವನ್ನು ಅದ್ಧೂರಿಯಾಗಿ ಸೆಲಬ್ರೇಟ್ ಮಾಡಬೇಕು ಎಂದು ಕನಸು ಕೂಡ ಕಂಡಿರುತ್ತಾರೆ. ಆದರೆ, ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿಕೆ ಮಾಡಿ ಎಲ್ಲರಿಗೂ ಶಾಕ್ ನೀಡಿದೆ.

2024-ಡಿ.31ರ ಸಂಜೆ 6ಗಂಟೆಯಿಂದ 2025-ಜ.1ರ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರು, ಪ್ರವಾಸಿಗರು, ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಅತಿಥಿ ಗೃಹಗಳ ಕಾಯ್ದಿರಿಸುವಿಕೆ ಕೂಡ ರದ್ದು ಮಾಡಲಾಗಿರುತ್ತದೆ. ನಂದಿ ಬೆಟ್ಟದಲ್ಲಿ ಹಲವಾರು ಸೂಕ್ಷ್ಮ , ಅಪಾಯಕಾರಿ ಪ್ರದೇಶಗಳು ಇದ್ದು, ಜನಸಂದಣಿಯ ಹೆಚ್ಚಾಗಿ ಅನಾಹುತ ಸಂಭವಿಸುವ ಸನ್ನಿವೇಶ ಇರುತ್ತದೆ. ಅದೇರೀತಿ ಹೊಸಬರಿಗೆ ಇಂತಹ ಸ್ಥಳ ಪರಿಚಯ ಇರುವುದಿಲ್ಲ. ಅನಾಹುತ, ಪ್ರಾಣಿ ಹಾನಿ, ಅಪಾಯ ತಪ್ಪಿಸಲು ಸಲುವಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ನಿರ್ಬಂಧ ಹೇರಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

17 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

21 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago