ಹೊಸ ವರ್ಷಾಚರಣೆಗೆ ಇನ್ನೇನು ಎರಡು ದಿನಗಳು ಬಾಕಿ ಇದ್ದು, 2025ನೇ ಸಾಲನ್ನು ಬರಮಾಡಿಕೊಂಡು ಅದ್ಧೂರಿ ಸಂಭ್ರಮಾಚರಣೆ ಮಾಡಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಸಮುದ್ರಮಟ್ಟದಿಂದ 1,486 ಮೀಟರ್ ಎತ್ತರದಲ್ಲಿರುವ ನಂದಿ ಗಿರಿಧಾಮ ಯುವಕ-ಯುವತಿಯರ ನೆಚ್ಚಿನ ತಾಣ ಹಾಗೂ ಹಾಟ್ ಸ್ಪಾಟ್. ಇಲ್ಲಿನ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ಬಣ್ಣಬಣ್ಣ ಹೂಗಳ ವಯ್ಯಾರ. ಸೂರ್ಯೋದಯ ಹಾಗೂ ಸೂರ್ಯಸ್ತ ನೋಡಲು ಲವ್ ಬರ್ಡ್ಸ್, ಪಾರ್ಟಿ ಪ್ರಿಯರು, ನವ ವಿವಾಹಿತರು, ಟೆಕ್ಕಿಗಳು, ಸ್ನೇಹಿತರು ಸೇರಿದಂತೆ ಇತರರು ಇಲ್ಲಿ ಬಂದು ಎಂಜಾಯ್ ಮಾಡುತ್ತಾರೆ. ಪ್ರಕೃತಿ ಮಡಿಲಲ್ಲಿ ಕುಳಿತು ಸೌಂದರ್ಯ ಸವಿಯುತ್ತಾ ಹೊಸ ವರ್ಷವನ್ನು ಅದ್ಧೂರಿಯಾಗಿ ಸೆಲಬ್ರೇಟ್ ಮಾಡಬೇಕು ಎಂದು ಕನಸು ಕೂಡ ಕಂಡಿರುತ್ತಾರೆ. ಆದರೆ, ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿಕೆ ಮಾಡಿ ಎಲ್ಲರಿಗೂ ಶಾಕ್ ನೀಡಿದೆ.
ಅತಿಥಿ ಗೃಹಗಳ ಕಾಯ್ದಿರಿಸುವಿಕೆ ಕೂಡ ರದ್ದು ಮಾಡಲಾಗಿರುತ್ತದೆ. ನಂದಿ ಬೆಟ್ಟದಲ್ಲಿ ಹಲವಾರು ಸೂಕ್ಷ್ಮ , ಅಪಾಯಕಾರಿ ಪ್ರದೇಶಗಳು ಇದ್ದು, ಜನಸಂದಣಿಯ ಹೆಚ್ಚಾಗಿ ಅನಾಹುತ ಸಂಭವಿಸುವ ಸನ್ನಿವೇಶ ಇರುತ್ತದೆ. ಅದೇರೀತಿ ಹೊಸಬರಿಗೆ ಇಂತಹ ಸ್ಥಳ ಪರಿಚಯ ಇರುವುದಿಲ್ಲ. ಅನಾಹುತ, ಪ್ರಾಣಿ ಹಾನಿ, ಅಪಾಯ ತಪ್ಪಿಸಲು ಸಲುವಾಗಿ, ಸಾರ್ವಜನಿಕ ಹಿತದೃಷ್ಟಿಯಿಂದ ನಿರ್ಬಂಧ ಹೇರಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…