ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭಗೊಳ್ಳಲಿದ್ದು, ಈ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಸಿ, ಶಾಲೆಗಳ ಆರಂಭಿಕ ಸಿದ್ಧತೆ ಸಂಬಂಧ ಕೆಲವೊಂದು ಸೂಚನೆ ನೀಡಿದೆ.
ಪಿ.ಎಂ.ಪೋಷಣ್ ಮತ್ತು ಕ್ಷೀರಭಾಗ, ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದೊಂದಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆ ಪ್ರಾರಂಭವಾಗುವ ಪೂರ್ವದಲ್ಲಿ ಶಾಲೆಯಲ್ಲಿರುವ ನೀರಿನ ಸಂಪು, ನೀರಿತ ತೊಟ್ಟಿ, ಓವರ್ ಹೆಡ್ ಟ್ಯಾಂಕ್ ಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಹೊಸ ನೀರನ್ನು ತುಂಬುವುದು ಹಾಗೂ ಕೊಳಾಯಿ ಪೈಪ್ ಗಳು ಕೆಟ್ಟು ಹೋಗಿದ್ದಲ್ಲಿ ಅಗತ್ಯ ರಿಪೇರಿಯನ್ನ ಮಾಡಿಸಿ ನೀರಿನ ಸರಬರಾಜಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ.
ಶಾಲೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ದಾನಿಗಳು, ಕಂಪನಿಗಳು, ಜನಪ್ರತಿನಿಧಿಗಳ ಅನುದಾನದಿಂದ ಸಹಾಯ ಫಿಲ್ಟರ್ ಅಳವಡಿಸಿಕೊಳ್ಳುವುದು. ಈಗಾಗಲೇ ಶಾಲೆಯಲ್ಲಿ ಬಳಸುತ್ತಿರುವ ವಾಟರ್ ಫಿಲ್ಟರ್ ಗಳ ಗುಣಮಟ್ಟ ಕಳಪೆಯಾಗಿದ್ದಲ್ಲಿ ಇಲ್ಲವೇ ಕೆಟ್ಟು ಹೋಗಿದ್ದಲ್ಲಿ ಕೂಡಲೇ ಶಾಲಾ ಉಳಿಕೆ ಅನುದಾನದಿಂದ ರಿಪೇರಿ ಮಾಡಿಸಿ ಬಳಕೆಗೆ ಸಿದ್ಧಪಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…