ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭಗೊಳ್ಳಲಿದ್ದು, ಈ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಸಿ, ಶಾಲೆಗಳ ಆರಂಭಿಕ ಸಿದ್ಧತೆ ಸಂಬಂಧ ಕೆಲವೊಂದು ಸೂಚನೆ ನೀಡಿದೆ.
ಪಿ.ಎಂ.ಪೋಷಣ್ ಮತ್ತು ಕ್ಷೀರಭಾಗ, ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದೊಂದಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆ ಪ್ರಾರಂಭವಾಗುವ ಪೂರ್ವದಲ್ಲಿ ಶಾಲೆಯಲ್ಲಿರುವ ನೀರಿನ ಸಂಪು, ನೀರಿತ ತೊಟ್ಟಿ, ಓವರ್ ಹೆಡ್ ಟ್ಯಾಂಕ್ ಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಹೊಸ ನೀರನ್ನು ತುಂಬುವುದು ಹಾಗೂ ಕೊಳಾಯಿ ಪೈಪ್ ಗಳು ಕೆಟ್ಟು ಹೋಗಿದ್ದಲ್ಲಿ ಅಗತ್ಯ ರಿಪೇರಿಯನ್ನ ಮಾಡಿಸಿ ನೀರಿನ ಸರಬರಾಜಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ.
ಶಾಲೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ದಾನಿಗಳು, ಕಂಪನಿಗಳು, ಜನಪ್ರತಿನಿಧಿಗಳ ಅನುದಾನದಿಂದ ಸಹಾಯ ಫಿಲ್ಟರ್ ಅಳವಡಿಸಿಕೊಳ್ಳುವುದು. ಈಗಾಗಲೇ ಶಾಲೆಯಲ್ಲಿ ಬಳಸುತ್ತಿರುವ ವಾಟರ್ ಫಿಲ್ಟರ್ ಗಳ ಗುಣಮಟ್ಟ ಕಳಪೆಯಾಗಿದ್ದಲ್ಲಿ ಇಲ್ಲವೇ ಕೆಟ್ಟು ಹೋಗಿದ್ದಲ್ಲಿ ಕೂಡಲೇ ಶಾಲಾ ಉಳಿಕೆ ಅನುದಾನದಿಂದ ರಿಪೇರಿ ಮಾಡಿಸಿ ಬಳಕೆಗೆ ಸಿದ್ಧಪಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…