ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭಗೊಳ್ಳಲಿದ್ದು, ಈ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಸಿ, ಶಾಲೆಗಳ ಆರಂಭಿಕ ಸಿದ್ಧತೆ ಸಂಬಂಧ ಕೆಲವೊಂದು ಸೂಚನೆ ನೀಡಿದೆ.
ಪಿ.ಎಂ.ಪೋಷಣ್ ಮತ್ತು ಕ್ಷೀರಭಾಗ, ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದೊಂದಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆ ಪ್ರಾರಂಭವಾಗುವ ಪೂರ್ವದಲ್ಲಿ ಶಾಲೆಯಲ್ಲಿರುವ ನೀರಿನ ಸಂಪು, ನೀರಿತ ತೊಟ್ಟಿ, ಓವರ್ ಹೆಡ್ ಟ್ಯಾಂಕ್ ಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಹೊಸ ನೀರನ್ನು ತುಂಬುವುದು ಹಾಗೂ ಕೊಳಾಯಿ ಪೈಪ್ ಗಳು ಕೆಟ್ಟು ಹೋಗಿದ್ದಲ್ಲಿ ಅಗತ್ಯ ರಿಪೇರಿಯನ್ನ ಮಾಡಿಸಿ ನೀರಿನ ಸರಬರಾಜಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ.
ಶಾಲೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ದಾನಿಗಳು, ಕಂಪನಿಗಳು, ಜನಪ್ರತಿನಿಧಿಗಳ ಅನುದಾನದಿಂದ ಸಹಾಯ ಫಿಲ್ಟರ್ ಅಳವಡಿಸಿಕೊಳ್ಳುವುದು. ಈಗಾಗಲೇ ಶಾಲೆಯಲ್ಲಿ ಬಳಸುತ್ತಿರುವ ವಾಟರ್ ಫಿಲ್ಟರ್ ಗಳ ಗುಣಮಟ್ಟ ಕಳಪೆಯಾಗಿದ್ದಲ್ಲಿ ಇಲ್ಲವೇ ಕೆಟ್ಟು ಹೋಗಿದ್ದಲ್ಲಿ ಕೂಡಲೇ ಶಾಲಾ ಉಳಿಕೆ ಅನುದಾನದಿಂದ ರಿಪೇರಿ ಮಾಡಿಸಿ ಬಳಕೆಗೆ ಸಿದ್ಧಪಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…