ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭಗೊಳ್ಳಲಿದ್ದು, ಈ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಸಿ, ಶಾಲೆಗಳ ಆರಂಭಿಕ ಸಿದ್ಧತೆ ಸಂಬಂಧ ಕೆಲವೊಂದು ಸೂಚನೆ ನೀಡಿದೆ.
ಪಿ.ಎಂ.ಪೋಷಣ್ ಮತ್ತು ಕ್ಷೀರಭಾಗ, ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದೊಂದಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆ ಪ್ರಾರಂಭವಾಗುವ ಪೂರ್ವದಲ್ಲಿ ಶಾಲೆಯಲ್ಲಿರುವ ನೀರಿನ ಸಂಪು, ನೀರಿತ ತೊಟ್ಟಿ, ಓವರ್ ಹೆಡ್ ಟ್ಯಾಂಕ್ ಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಹೊಸ ನೀರನ್ನು ತುಂಬುವುದು ಹಾಗೂ ಕೊಳಾಯಿ ಪೈಪ್ ಗಳು ಕೆಟ್ಟು ಹೋಗಿದ್ದಲ್ಲಿ ಅಗತ್ಯ ರಿಪೇರಿಯನ್ನ ಮಾಡಿಸಿ ನೀರಿನ ಸರಬರಾಜಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ.
ಶಾಲೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ದಾನಿಗಳು, ಕಂಪನಿಗಳು, ಜನಪ್ರತಿನಿಧಿಗಳ ಅನುದಾನದಿಂದ ಸಹಾಯ ಫಿಲ್ಟರ್ ಅಳವಡಿಸಿಕೊಳ್ಳುವುದು. ಈಗಾಗಲೇ ಶಾಲೆಯಲ್ಲಿ ಬಳಸುತ್ತಿರುವ ವಾಟರ್ ಫಿಲ್ಟರ್ ಗಳ ಗುಣಮಟ್ಟ ಕಳಪೆಯಾಗಿದ್ದಲ್ಲಿ ಇಲ್ಲವೇ ಕೆಟ್ಟು ಹೋಗಿದ್ದಲ್ಲಿ ಕೂಡಲೇ ಶಾಲಾ ಉಳಿಕೆ ಅನುದಾನದಿಂದ ರಿಪೇರಿ ಮಾಡಿಸಿ ಬಳಕೆಗೆ ಸಿದ್ಧಪಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…