ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭಗೊಳ್ಳಲಿದ್ದು, ಈ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಸಿ, ಶಾಲೆಗಳ ಆರಂಭಿಕ ಸಿದ್ಧತೆ ಸಂಬಂಧ ಕೆಲವೊಂದು ಸೂಚನೆ ನೀಡಿದೆ.
ಪಿ.ಎಂ.ಪೋಷಣ್ ಮತ್ತು ಕ್ಷೀರಭಾಗ, ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದೊಂದಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆ ಪ್ರಾರಂಭವಾಗುವ ಪೂರ್ವದಲ್ಲಿ ಶಾಲೆಯಲ್ಲಿರುವ ನೀರಿನ ಸಂಪು, ನೀರಿತ ತೊಟ್ಟಿ, ಓವರ್ ಹೆಡ್ ಟ್ಯಾಂಕ್ ಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಹೊಸ ನೀರನ್ನು ತುಂಬುವುದು ಹಾಗೂ ಕೊಳಾಯಿ ಪೈಪ್ ಗಳು ಕೆಟ್ಟು ಹೋಗಿದ್ದಲ್ಲಿ ಅಗತ್ಯ ರಿಪೇರಿಯನ್ನ ಮಾಡಿಸಿ ನೀರಿನ ಸರಬರಾಜಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ.
ಶಾಲೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ದಾನಿಗಳು, ಕಂಪನಿಗಳು, ಜನಪ್ರತಿನಿಧಿಗಳ ಅನುದಾನದಿಂದ ಸಹಾಯ ಫಿಲ್ಟರ್ ಅಳವಡಿಸಿಕೊಳ್ಳುವುದು. ಈಗಾಗಲೇ ಶಾಲೆಯಲ್ಲಿ ಬಳಸುತ್ತಿರುವ ವಾಟರ್ ಫಿಲ್ಟರ್ ಗಳ ಗುಣಮಟ್ಟ ಕಳಪೆಯಾಗಿದ್ದಲ್ಲಿ ಇಲ್ಲವೇ ಕೆಟ್ಟು ಹೋಗಿದ್ದಲ್ಲಿ ಕೂಡಲೇ ಶಾಲಾ ಉಳಿಕೆ ಅನುದಾನದಿಂದ ರಿಪೇರಿ ಮಾಡಿಸಿ ಬಳಕೆಗೆ ಸಿದ್ಧಪಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…