ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭಗೊಳ್ಳಲಿದ್ದು, ಈ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಸಿ, ಶಾಲೆಗಳ ಆರಂಭಿಕ ಸಿದ್ಧತೆ ಸಂಬಂಧ ಕೆಲವೊಂದು ಸೂಚನೆ ನೀಡಿದೆ.
ಪಿ.ಎಂ.ಪೋಷಣ್ ಮತ್ತು ಕ್ಷೀರಭಾಗ, ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದೊಂದಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆ ಪ್ರಾರಂಭವಾಗುವ ಪೂರ್ವದಲ್ಲಿ ಶಾಲೆಯಲ್ಲಿರುವ ನೀರಿನ ಸಂಪು, ನೀರಿತ ತೊಟ್ಟಿ, ಓವರ್ ಹೆಡ್ ಟ್ಯಾಂಕ್ ಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಹೊಸ ನೀರನ್ನು ತುಂಬುವುದು ಹಾಗೂ ಕೊಳಾಯಿ ಪೈಪ್ ಗಳು ಕೆಟ್ಟು ಹೋಗಿದ್ದಲ್ಲಿ ಅಗತ್ಯ ರಿಪೇರಿಯನ್ನ ಮಾಡಿಸಿ ನೀರಿನ ಸರಬರಾಜಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ.
ಶಾಲೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ದಾನಿಗಳು, ಕಂಪನಿಗಳು, ಜನಪ್ರತಿನಿಧಿಗಳ ಅನುದಾನದಿಂದ ಸಹಾಯ ಫಿಲ್ಟರ್ ಅಳವಡಿಸಿಕೊಳ್ಳುವುದು. ಈಗಾಗಲೇ ಶಾಲೆಯಲ್ಲಿ ಬಳಸುತ್ತಿರುವ ವಾಟರ್ ಫಿಲ್ಟರ್ ಗಳ ಗುಣಮಟ್ಟ ಕಳಪೆಯಾಗಿದ್ದಲ್ಲಿ ಇಲ್ಲವೇ ಕೆಟ್ಟು ಹೋಗಿದ್ದಲ್ಲಿ ಕೂಡಲೇ ಶಾಲಾ ಉಳಿಕೆ ಅನುದಾನದಿಂದ ರಿಪೇರಿ ಮಾಡಿಸಿ ಬಳಕೆಗೆ ಸಿದ್ಧಪಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…