ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭಗೊಳ್ಳಲಿದ್ದು, ಈ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಸಿ, ಶಾಲೆಗಳ ಆರಂಭಿಕ ಸಿದ್ಧತೆ ಸಂಬಂಧ ಕೆಲವೊಂದು ಸೂಚನೆ ನೀಡಿದೆ.
ಪಿ.ಎಂ.ಪೋಷಣ್ ಮತ್ತು ಕ್ಷೀರಭಾಗ, ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದೊಂದಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆ ಪ್ರಾರಂಭವಾಗುವ ಪೂರ್ವದಲ್ಲಿ ಶಾಲೆಯಲ್ಲಿರುವ ನೀರಿನ ಸಂಪು, ನೀರಿತ ತೊಟ್ಟಿ, ಓವರ್ ಹೆಡ್ ಟ್ಯಾಂಕ್ ಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಹೊಸ ನೀರನ್ನು ತುಂಬುವುದು ಹಾಗೂ ಕೊಳಾಯಿ ಪೈಪ್ ಗಳು ಕೆಟ್ಟು ಹೋಗಿದ್ದಲ್ಲಿ ಅಗತ್ಯ ರಿಪೇರಿಯನ್ನ ಮಾಡಿಸಿ ನೀರಿನ ಸರಬರಾಜಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ.
ಶಾಲೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ದಾನಿಗಳು, ಕಂಪನಿಗಳು, ಜನಪ್ರತಿನಿಧಿಗಳ ಅನುದಾನದಿಂದ ಸಹಾಯ ಫಿಲ್ಟರ್ ಅಳವಡಿಸಿಕೊಳ್ಳುವುದು. ಈಗಾಗಲೇ ಶಾಲೆಯಲ್ಲಿ ಬಳಸುತ್ತಿರುವ ವಾಟರ್ ಫಿಲ್ಟರ್ ಗಳ ಗುಣಮಟ್ಟ ಕಳಪೆಯಾಗಿದ್ದಲ್ಲಿ ಇಲ್ಲವೇ ಕೆಟ್ಟು ಹೋಗಿದ್ದಲ್ಲಿ ಕೂಡಲೇ ಶಾಲಾ ಉಳಿಕೆ ಅನುದಾನದಿಂದ ರಿಪೇರಿ ಮಾಡಿಸಿ ಬಳಕೆಗೆ ಸಿದ್ಧಪಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…