ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭಗೊಳ್ಳಲಿದ್ದು, ಈ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಸಿ, ಶಾಲೆಗಳ ಆರಂಭಿಕ ಸಿದ್ಧತೆ ಸಂಬಂಧ ಕೆಲವೊಂದು ಸೂಚನೆ ನೀಡಿದೆ.
ಪಿ.ಎಂ.ಪೋಷಣ್ ಮತ್ತು ಕ್ಷೀರಭಾಗ, ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದೊಂದಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಮಾರ್ಗಸೂಚಿ ಪ್ರಕಟಿಸಿದೆ.
ಶಾಲೆ ಪ್ರಾರಂಭವಾಗುವ ಪೂರ್ವದಲ್ಲಿ ಶಾಲೆಯಲ್ಲಿರುವ ನೀರಿನ ಸಂಪು, ನೀರಿತ ತೊಟ್ಟಿ, ಓವರ್ ಹೆಡ್ ಟ್ಯಾಂಕ್ ಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಹೊಸ ನೀರನ್ನು ತುಂಬುವುದು ಹಾಗೂ ಕೊಳಾಯಿ ಪೈಪ್ ಗಳು ಕೆಟ್ಟು ಹೋಗಿದ್ದಲ್ಲಿ ಅಗತ್ಯ ರಿಪೇರಿಯನ್ನ ಮಾಡಿಸಿ ನೀರಿನ ಸರಬರಾಜಿಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ.
ಶಾಲೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ದಾನಿಗಳು, ಕಂಪನಿಗಳು, ಜನಪ್ರತಿನಿಧಿಗಳ ಅನುದಾನದಿಂದ ಸಹಾಯ ಫಿಲ್ಟರ್ ಅಳವಡಿಸಿಕೊಳ್ಳುವುದು. ಈಗಾಗಲೇ ಶಾಲೆಯಲ್ಲಿ ಬಳಸುತ್ತಿರುವ ವಾಟರ್ ಫಿಲ್ಟರ್ ಗಳ ಗುಣಮಟ್ಟ ಕಳಪೆಯಾಗಿದ್ದಲ್ಲಿ ಇಲ್ಲವೇ ಕೆಟ್ಟು ಹೋಗಿದ್ದಲ್ಲಿ ಕೂಡಲೇ ಶಾಲಾ ಉಳಿಕೆ ಅನುದಾನದಿಂದ ರಿಪೇರಿ ಮಾಡಿಸಿ ಬಳಕೆಗೆ ಸಿದ್ಧಪಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…