2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಜತೆಗೆ ಪ್ರಮುಖ ಮಾರ್ಗಸೂಚಿಗಳನ್ನು ಸಹ ತಿಳಿಸಿದ್ದಾರೆ. 2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆದಿದೆ. ಈ ಸಭೆಯಲ್ಲಿ ಫಲಿತಾಂಶ ದಿನಾಂಕ ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ..

ದ್ವಿತೀಯ ಪಿಯುಸಿ ಪರೀಕ್ಷೆ 1 ರ ಫಲಿತಾಂಶ ಏಪ್ರಿಲ್‌ 7 ಕ್ಕೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ಫಲಿತಾಂಶ ಏಪ್ರಿಲ್‌ 24 ಕ್ಕೆ ಹೊರಬೀಳಲಿದೆ.

ಈ ಬಾರಿ 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಮತ್ತು 9,02,889 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇಲಾಖೆಯು ಫಲಿತಾಂಶ ಪ್ರಕಟಿಸುವ ಸಂಭಾವ್ಯ ದಿನಾಂಕವನ್ನೂ ಈಗಲೇ ತಿಳಿಸಿದೆ. ದ್ವಿತೀಯ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 7, 2026 ರಂದು ಹಾಗೂ ಎಸ್‌ಎಸ್‌ಎಲ್‌ಸಿ ಫಲಿತಾಂಶ ಏಪ್ರಿಲ್ 24, 2026 ರಂದು ಪ್ರಕಟವಾಗುವ ನಿರೀಕ್ಷೆಯಿದೆ. ಅನುತ್ತೀರ್ಣರಾದ ಅಥವಾ ಫಲಿತಾಂಶ ಸುಧಾರಣೆ ಬಯಸುವ ವಿದ್ಯಾರ್ಥಿಗಳಿಗೆ ‘ಪರೀಕ್ಷೆ-2’ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆಯಲಿದೆ.

ವಿದ್ಯಾರ್ಥಿ ಸ್ನೇಹಿ ಕ್ರಮಗಳು ಏನು?
ಉಚಿತ ಬಸ್ ಪ್ರಯಾಣ: ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಕೆ.ಎಸ್.ಆರ್.ಟಿ.ಸಿ ಮತ್ತು ನಗರ ಸಾರಿಗೆ ಬಸ್‌ಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂತಿರುಗಲು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸ್ಟೂಡೆಂಟ್ ಕಾರ್ನರ್: ಮಂಡಳಿಯ ವೆಬ್‌ಸೈಟ್‌ನಲ್ಲಿ ಸ್ಟೂಡೆಂಟ್‌ ಕಾರ್ನರ್ ಅಡಿಯಲ್ಲಿ ಬ್ಲೂಪ್ರಿಂಟ್, ಮಾದರಿ ಪ್ರಶ್ನೆ ಪತ್ರಿಕೆಗಳು, ಪ್ರಶ್ನೆ ಕೋಶ ಮತ್ತು ಹಿಂದಿನ ಸಾಲಿನ ಪ್ರಶ್ನೆ ಪತ್ರಿಕೆಗಳನ್ನು ಉತ್ತರಗಳ ಸಮೇತ ಒದಗಿಸಲಾಗಿದೆ.
ಖಾಸಗಿ ಅಭ್ಯರ್ಥಿಗಳಿಗೆ ಆನ್‌ಲೈನ್ ನೋಂದಣಿ: ಇದೇ ಮೊದಲ ಬಾರಿಗೆ ಖಾಸಗಿ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು ಹಾಗೂ ಅವರಿಗೆ ತಾಲೂಕು ಮಟ್ಟದಲ್ಲಿ ರಾಂಡಮೈಸ್ ಮೂಲಕ ಸರ್ಕಾರಿ ಪದವಿ ಪೂರ್ವ ಕಾಲೇಜು/ಶಾಲೆಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಹಂಚಿಕೆ ಮಾಡಲಾಗಿದೆ.

ನಿಷೇಧಾಜ್ಞೆ: ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್ ಸೆಂಟರ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ.

ವೆಬ್ ಕಾಸ್ಟಿಂಗ್: ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಕಣ್ಗಾವಲು ಇಡಲಾಗುತ್ತದೆ.

ಸಾಮಾಜಿಕ ಜಾಲತಾಣದ ಮೇಲೆ ನಿಗಾ: ವಾಟ್ಸಾಪ್, ಟೆಲಿಗ್ರಾಮ್, ಇನ್ಸ್ಟಾಗ್ರಾಮ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆ ಹರಿಬಿಡುವವರ ವಿರುದ್ಧ ಮತ್ತು ವದಂತಿ ಹಬ್ಬಿಸುವವರ ವಿರುದ್ಧ ‘ಭಾರತೀಯ ನ್ಯಾಯ ಸಂಹಿತೆ’ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಎಲೆಕ್ಟ್ರಾನಿಕ್ ಉಪಕರಣ ನಿಷೇಧ: ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

14 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

22 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

22 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago