2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನರಾಗುತ್ತಿದ್ದಾರೆ.
ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿ, ಜೆಜೆಎಂ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ ವೈದ್ಯ ಡಾ ಸುರೇಶ್ ಹನಗವಾಡಿ ಹಾಗೂ ಬೆಂಗಳೂರಿನಲ್ಲಿ ಸುಮಂಗಲಿ ಸೇವಾ ಆಶ್ರಮ ಸ್ಥಾಪಿಸಿ ಮಹಿಳಾ ಸಬಲೀಕರಣ, ಶಿಶು ಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ದಶಕಗಳಿಂದ ಶ್ರಮಿಸುತ್ತಿರುವ ಸಮಾಜ ಸೇವಕಿ ಎಸ್ಜಿ ಸುಶೀಲಮ್ಮ, ಶಿಕ್ಷಣ ಕ್ಷೇತ್ರದ ಸಾಧನೆಗೆ ಬೆಳಗಾವಿಯ ಡಾ.ಪ್ರಭಾಕರ್ ಕೋರೆ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಗೆ ಶಶಿಶೇಖರ ವೆಂಪತಿ, ವಿಜ್ಞಾನ ತಂತ್ರಜ್ಞಾನ ಕ್ಷೇತ್ರದ ಶುಭಾ ವೆಂಕಟೇಶ್ ಅಯ್ಯಂಗಾರ್, ಉದ್ಯಮ ಮತ್ತು ವ್ಯಾಪಾರ ಕ್ಷೇತ್ರದ ಸಾಧ್ಯನೆಗೆ (ಮರಣೋತ್ತರ) ಟಿಟಿ ಜಗನ್ನಾಥ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭ್ಯಸಿದೆ. ಕಲಾ ಕ್ಷೇತ್ರದ ಸಾಧನೆಗೆ ಶತಾವಧಾನಿ ಆರ್ ಗಣೇಶ್ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವರ್ಷದ ಪದ್ಮ ಪ್ರಶಸ್ತಿಗೆ ಕೇಂದ್ರ ಸರ್ಕಾರವು ಭಾರತದ ಉದ್ದಗಲಕ್ಕೂ ಇರುವ ವಿವಿಧ ರೀತಿಯ ಪ್ರಚಾರವಿಲ್ಲದ ಸಾಧಕರನ್ನು ಗುರುತಿಸಿದೆ. ಇವರಲ್ಲಿ ಹಿಂದುಳಿದ ಮತ್ತು ದಲಿತ ಸಮುದಾಯಗಳು, ಪ್ರಾಚೀನ ಬುಡಕಟ್ಟು ಜನಾಂಗದವರು ಮತ್ತು ದೂರದ ಮತ್ತು ಕಷ್ಟಕರ ಪ್ರದೇಶಗಳಿಂದ ಬಂದವರು ಸೇರಿದ್ದಾರೆ.
ಆರೋಗ್ಯ ರಕ್ಷಣೆ, ಶಿಕ್ಷಣ, ಜೀವನೋಪಾಯ, ನೈರ್ಮಲ್ಯ, ಸುಸ್ಥಿರತೆ ಇತ್ಯಾದಿಗಳನ್ನು ಉತ್ತೇಜಿಸುವಲ್ಲಿ ಕೆಲಸ ಮಾಡುವರು, ದಿವ್ಯಾಂಗರು, ಮಹಿಳೆಯರು, ಮಕ್ಕಳು, ದಲಿತರು ಮತ್ತು ಬುಡಕಟ್ಟು ಜನಾಂಗದವರ ಸೇವೆಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟವರು ಇದ್ದಾರೆ.
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…
ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…