2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನರಾಗುತ್ತಿದ್ದಾರೆ.

ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿ, ಜೆಜೆಎಂ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ ವೈದ್ಯ ಡಾ ಸುರೇಶ್‌ ಹನಗವಾಡಿ ಹಾಗೂ ಬೆಂಗಳೂರಿನಲ್ಲಿ ಸುಮಂಗಲಿ ಸೇವಾ ಆಶ್ರಮ ಸ್ಥಾಪಿಸಿ ಮಹಿಳಾ ಸಬಲೀಕರಣ, ಶಿಶು ಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ದಶಕಗಳಿಂದ ಶ್ರಮಿಸುತ್ತಿರುವ ಸಮಾಜ ಸೇವಕಿ ಎಸ್‌ಜಿ ಸುಶೀಲಮ್ಮ, ಶಿಕ್ಷಣ ಕ್ಷೇತ್ರದ ಸಾಧನೆಗೆ ಬೆಳಗಾವಿಯ ಡಾ.ಪ್ರಭಾಕರ್ ಕೋರೆ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಗೆ ಶಶಿಶೇಖರ ವೆಂಪತಿ, ವಿಜ್ಞಾನ ತಂತ್ರಜ್ಞಾನ ಕ್ಷೇತ್ರದ ಶುಭಾ ವೆಂಕಟೇಶ್ ಅಯ್ಯಂಗಾರ್, ಉದ್ಯಮ ಮತ್ತು ವ್ಯಾಪಾರ ಕ್ಷೇತ್ರದ ಸಾಧ್ಯನೆಗೆ (ಮರಣೋತ್ತರ) ಟಿಟಿ ಜಗನ್ನಾಥ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭ್ಯಸಿದೆ. ಕಲಾ ಕ್ಷೇತ್ರದ ಸಾಧನೆಗೆ ಶತಾವಧಾನಿ ಆರ್‌ ಗಣೇಶ್ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವರ್ಷದ ಪದ್ಮ ಪ್ರಶಸ್ತಿಗೆ ಕೇಂದ್ರ ಸರ್ಕಾರವು ಭಾರತದ ಉದ್ದಗಲಕ್ಕೂ ಇರುವ ವಿವಿಧ ರೀತಿಯ ಪ್ರಚಾರವಿಲ್ಲದ ಸಾಧಕರನ್ನು ಗುರುತಿಸಿದೆ. ಇವರಲ್ಲಿ ಹಿಂದುಳಿದ ಮತ್ತು ದಲಿತ ಸಮುದಾಯಗಳು, ಪ್ರಾಚೀನ ಬುಡಕಟ್ಟು ಜನಾಂಗದವರು ಮತ್ತು ದೂರದ ಮತ್ತು ಕಷ್ಟಕರ ಪ್ರದೇಶಗಳಿಂದ ಬಂದವರು ಸೇರಿದ್ದಾರೆ.

ಆರೋಗ್ಯ ರಕ್ಷಣೆ, ಶಿಕ್ಷಣ, ಜೀವನೋಪಾಯ, ನೈರ್ಮಲ್ಯ, ಸುಸ್ಥಿರತೆ ಇತ್ಯಾದಿಗಳನ್ನು ಉತ್ತೇಜಿಸುವಲ್ಲಿ ಕೆಲಸ ಮಾಡುವರು, ದಿವ್ಯಾಂಗರು, ಮಹಿಳೆಯರು, ಮಕ್ಕಳು, ದಲಿತರು ಮತ್ತು ಬುಡಕಟ್ಟು ಜನಾಂಗದವರ ಸೇವೆಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟವರು ಇದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

58 minutes ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

2 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago