2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿದ್ದಾರೆ.

ಮಾರ್ಚ್ 6 ಬೆಳಗ್ಗೆ 10:15ಕ್ಕೆ ಬಜೆಟ್​ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 27ಕ್ಕೆ ಅಂತ್ಯವಾಗಲಿದೆ. ಒಟ್ಟು 14 ದಿನ ಬಜೆಟ್ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ 16 ಬಾರಿ ಬಜೆಟ್​ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್​ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ​ ಅರಸು ಅವರ​ ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದಾರೆ. ದೇವರಾಜ ಅರಸು ಅವರು ಸತತವಾಗಿ ಏಳೂವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ದೇವರಾಜ ಅರಸು ಅವರು 2,789 ದಿನ ಅಂದ್ರೆ 7 ವರ್ಷ- 239 ದಿನಗಳ (ಎರಡು ಅವಧಿ) ಕಾಲ ರಾಜ್ಯದ ಮುಖ್ಯಮಂತ್ರಿ ಆಗಿದ್ದರು. ಸಿದ್ದರಾಮಯ್ಯ ಕೂಡ ಈಗಾಗಲೇ 7 ವರ್ಷ 239 ದಿನ ಪೂರೈಸಿ ಅರಸು ದಾಖಲೆ ಮುರಿದಿದ್ದಾರೆ.

ಕಾಂಗ್ರೆಸ್​ ಪಕ್ಷದ ಪ್ರಬಲ ನಾಯಕ ಸಿದ್ದರಾಮಯ್ಯ ಅವರು ತಮ್ಮದೇ ವರ್ಚಸ್ಸು, ಚಾತುರ್ಯತೆಯಿಂದ ಬೆಳೆದು ಬಂದಿದ್ದಾರೆ. 2013 ರಿಂದ 2018 ರವರ ಅವಧಿಯಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ರು. ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದರು. ಬಳಿಕ ಮೇ 20, 2023 ರಂದು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

5 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

17 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

17 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

18 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

21 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago