2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿದ್ದಾರೆ.

ಮಾರ್ಚ್ 6 ಬೆಳಗ್ಗೆ 10:15ಕ್ಕೆ ಬಜೆಟ್​ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 27ಕ್ಕೆ ಅಂತ್ಯವಾಗಲಿದೆ. ಒಟ್ಟು 14 ದಿನ ಬಜೆಟ್ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ 16 ಬಾರಿ ಬಜೆಟ್​ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್​ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ​ ಅರಸು ಅವರ​ ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದಾರೆ. ದೇವರಾಜ ಅರಸು ಅವರು ಸತತವಾಗಿ ಏಳೂವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ದೇವರಾಜ ಅರಸು ಅವರು 2,789 ದಿನ ಅಂದ್ರೆ 7 ವರ್ಷ- 239 ದಿನಗಳ (ಎರಡು ಅವಧಿ) ಕಾಲ ರಾಜ್ಯದ ಮುಖ್ಯಮಂತ್ರಿ ಆಗಿದ್ದರು. ಸಿದ್ದರಾಮಯ್ಯ ಕೂಡ ಈಗಾಗಲೇ 7 ವರ್ಷ 239 ದಿನ ಪೂರೈಸಿ ಅರಸು ದಾಖಲೆ ಮುರಿದಿದ್ದಾರೆ.

ಕಾಂಗ್ರೆಸ್​ ಪಕ್ಷದ ಪ್ರಬಲ ನಾಯಕ ಸಿದ್ದರಾಮಯ್ಯ ಅವರು ತಮ್ಮದೇ ವರ್ಚಸ್ಸು, ಚಾತುರ್ಯತೆಯಿಂದ ಬೆಳೆದು ಬಂದಿದ್ದಾರೆ. 2013 ರಿಂದ 2018 ರವರ ಅವಧಿಯಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ರು. ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದರು. ಬಳಿಕ ಮೇ 20, 2023 ರಂದು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

12 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

20 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

20 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago