2027ಕ್ಕೆ ಜನಗಣತಿ ಶುರು- ಜಿಲ್ಲಾಧಿಕಾರಿ ಎ.ಬಿ ಬಸವರಾಜು

2027 ಕ್ಕೆ ಜನಗಣತಿ ಶುರುವಾಗಲಿದ್ದು ಜಿಲ್ಲೆಯಲ್ಲಿ ಜನಗಣತಿ ಕಾರ್ಯ ಕೈಗೊಳ್ಳಲು ಇಂದಿನಿಂದಲೇ ಪೂರ್ವ ಸಿದ್ಧತೆ ಕೈಗೊಂಡು ಗ್ರಾಮ, ಪಟ್ಟಣಗಳ ಗಡಿ ಗುರುತಿಸುವಿಕೆ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನಗಣತಿ-2027 ಕ್ಕೆ ಸಂಬಂಧಿಸಿದಂತೆ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜನಗಣತಿಯ ಮೂಲ ಉದ್ದೇಶವು ದೇಶದ ಎಲ್ಲಾ ವ್ಯಕ್ತಿಗಳ ಎಣಿಕೆಯನ್ನು ಯಾವುದೇ ಲೋಪದೋಷ ಇಲ್ಲದಂತೆ ಸಿದ್ಧಪಡಿಸುವುದು. ಹಾಗಾಗಿ ಮೊದಲು ಗ್ರಾಮಗಳ ಬೌಂಡರಿ ಗುರುತಿಸುವಿಕೆ ಕಾರ್ಯ ನಡೆಯಲಿದೆ ಎಂದರು.

*ಜನಗಣತಿ-2027 ಹಂತಗಳು*

ಜನಗಣತಿ 2027ಕ್ಕೆ ಸಂಬಂಧಿಸಿದಂತೆ ಹೌಸ್ ಲಿಸ್ಟಿಂಗ್ ಮತ್ತು ಮನೆ ಗಣತಿ (ಹಂತ-01) ಕಾರ್ಯವು ಏಪ್ರಿಲ್ 2026 ರಿಂದ ಸೆಪ್ಟೆಂಬರ್ 2026ರ ಅವಧಿಯಲ್ಲಿ ನಡೆಯಲಿದೆ. ಜನಸಂಖ್ಯೆ ಗಣತಿ ಕಾರ್ಯವು (ಹಂತ-02) ಫೆಬ್ರವರಿ 2027ರಲ್ಲಿ ನಡೆಯಲಿದೆ.

*ಗ್ರಾಮಗಳ ಗಡಿ ಗುರುತಿಸುವಿಕೆ ಕಾರ್ಯ*

ಜನಗಣತಿಯ ನಿರ್ದೇಶನಾಲಯವು 2011ರ ಜನಗಣತಿಯಂತೆ ಗ್ರಾಮ ಮತ್ತು ಪಟ್ಟಣಗಳ ಪಟ್ಟಿ ನೀಡಿದ್ದು ಪರಿಷ್ಕೃತ ಪಟ್ಟಿ ನೀಡಲು ಸೂಚಿಸಿದೆ. ಅದರಂತೆ ಪ್ರಸ್ತುತ ಗ್ರಾಮಗಳು ಮತ್ತು ಪಟ್ಟಣಗಳಿಗೆ ಸಂಬಂಧಿಸಿದಂತೆ ಸೆಕ್ಷನ್-ಎ(ಗ್ರಾಮೀಣ ಪ್ರದೇಶಗಳು) ಮತ್ತು ಸೆಕ್ಷನ್-ಬಿ (ಪಟ್ಟಣ ಪ್ರದೇಶಗಳು) ಪಟ್ಟಿಯನ್ನು ಪರಿಷ್ಕರಿಸಿ ಸಿದ್ದಪಡಿಸಬೇಕಿದೆ. ಗ್ರಾಮಗಳ ಪಟ್ಟಿ ಆಧರಿಸಿ ಗ್ರಾಮಗಳ ಗಡಿ ಗುರ್ತಿಸುವಿಕೆಯಲ್ಲಿ ತಹಶೀಲ್ದಾರ್ ಗಳು ಜವಾಬ್ದಾರಿ ವಹಿಸಬೇಕು. ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಗಡಿ ಗುರ್ತಿಸುವಲ್ಲಿ ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವ ಗ್ರಾಮಗಳು ಬಿಟ್ಟು ಹೋಗಿದೆ, ಯಾವ ಗ್ರಾಮಗಳು ಸೇರ್ಪಡೆ ಆಗಿವೆ, ವ್ಯತ್ಯಾಸಗಳೇನು ಎಂಬುದನ್ನು ದೃಢೀಕರಿಸಿ ಗ್ರಾಮಗಳ, ಪಟ್ಟಣಗಳ ಗಡಿ(ಬೌಂಡರಿ)ಯನ್ನು ಗುರ್ತಿಸಿ ನವೆಂಬರ್ ಅಂತ್ಯದೊಳಗೆ ವರದಿ ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

*ಗ್ರಾಮಗಳ ಪಟ್ಟಿ ವಿವರ*

ದೇವನಹಳ್ಳಿ-230
ಹೊಸಕೋಟೆ-302
ದೊಡ್ಡಬಳ್ಳಾಪುರ-309
ನೆಲಮಂಗಲ-252
ಒಟ್ಟು-1093 ಗ್ರಾಮಗಳ ಗಡಿ ಗುರುತಿಸುವ ಕಾರ್ಯ ನಡೆಯಲಿದೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಉಪವಿಭಾಗಾಧಿಕಾರಿ ದುರ್ಗಶ್ರೀ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

8 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

10 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

22 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

1 day ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

1 day ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 day ago