Categories: ಕೋಲಾರ

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು ನಾವು ಸರಿಯಾಗಿ ಬಳಸಿಕೊಂಡಿಲ್ಲ. ಇನ್ನಾದರೂ ಸಮರ್ಥವಾಗಿ ಹಾಗೂ ಪರಿಣಾಮಕಾರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾತ್ಯತೀತ ಜನತಾದಳದ ಸಾಮಾಜಿಕ ಜಾಲತಾಣ ಸಕ್ರಿಯ ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅವರ ಗೃಹ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಎನ್‌ಡಿಎನಲ್ಲಿ ಕುಮಾರಸ್ವಾಮಿ ಮಾಸ್ ನಾಯಕ, ಅವರಿಗೆ ಉತ್ತಮ ಭವಿಷ್ಯ ಇದೆ. ಅವರ ನೇತೃತ್ವದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.

ಎಲ್ಲಾ ತಾಲ್ಲೂಕುಗಳಲ್ಲಿ ಯಾವ ರೀತಿ ರಾಜಕೀಯ ನಡೆಯುತ್ತಿದೆ ಎಂಬುದು ನನಗ ಗೊತ್ತು. ಕೋಲಾರ ತಾಲ್ಲೂಕಿನ ಪರಿಸ್ಥಿತಿಯನ್ನು ವರಿಷ್ಠರ ಗಮನಕ್ಕೆ ತರುತ್ತೇನೆ. ಸಮಸ್ಯೆ ಬಗೆಹರಿದರೆ ಜಿಲ್ಲೆಯಲ್ಲಿ ಐದು ಕ್ಷೇತ್ರ ಗೆಲ್ಲಬಹುದು. ಎಸ್ಐಆರ್ ನಲ್ಲಿ ಪ್ರತಿ ಕ್ಷೇತ್ರದಲ್ಲಿ 20 ಸಾವಿರ ಗಲೀಜು (ಬೋಗಸ್) ವೋಟುಗಳು ಹೋಗಿವೆ. ಇದು ಕೂಡ ನಮಗೆ ನೆರವಾಗಲಿದೆ ಎಂದು ಹೇಳಿದರು.

ನಾನು 50 ವರ್ಷಗಳಿಂದ ‌ರಾಜಕೀಯದಲ್ಲಿದ್ದೇನೆ. 10 ಚುನಾವಣೆ ಎದುರಿಸಿದ್ದೇನೆ. ಹಿಂದಿನ‌ ಚುನಾವಣಾ ರೀತಿಯೇ ಬೇರೆ, ಎಲೆ-ಅಡಿಕೆ ಕೊಟ್ಟರೆ ಸಾಕಿತ್ತು. ಈಗ ಕೋಟಿ‌ ಕೋಟಿ ಖರ್ಚು ಮಾಡುವ ಮಟ್ಟಕ್ಕೆ ಹೋಗಿದೆ. ರಾಜಕಾರಣದಲ್ಲಿ ನಾನು ದುಡ್ಡು ಮಾಡಿಲ್ಲ. ಆರೋಗ್ಯವೇ ನನ್ನ ಸರ್ವಸ್ವ ಎಂದು ತಿಳಿಸಿದರು.

ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, 2028ರ ವಿಧಾನಸಭೆ ಚುನಾವಣೆಗೆ ಸಾಮಾಜಿಕ ಜಾಲತಾಣ ಪ್ರಮುಖ ಅಸ್ತವಾಗಲಿದೆ‌. ಅದಕ್ಕೆ ಕೇವಲ 20 ತಿಂಗಳು ಇದೆ. ಹೀಗಾಗಿ, ಪರಿಣಾಮಕಾರಿಯಾಗಿ ಬಳಸಿಕೊಂಡು ಜೆಡಿಎಸ್ ಪಕ್ಷ ಸಂಘಟನೆ ಮಾಡಬೇಕು. ದೇವೇಗೌಡರು, ಕುಮಾರಣ್ಣ, ನಿಖಿಲ್ ಕುಮಾರಸ್ವಾಮಿ ದೂರದೃಷ್ಟಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಮುಂದೆ ಮೈತ್ರಿ ಸರ್ಕಾರ ಬಂದು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು ಎಂದರು.

ನಾನು ಸುಮಾರು 15 ವರ್ಷಗಳಿಂದ ಯಾವುದೇ ಅಪೇಕ್ಷೆ ಇಲ್ಲದೆ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಜಾಲತಾಣದಲ್ಲಿ ಲಕ್ಷಾಂತರ ಮಂದಿಗೆ ಸಂದೇಶ ಕೊಡಬಹುದು, ಬಹಳ ವೇಗವಾಗಿ ಮುಟ್ಟುತ್ತದೆ. ಅದಕ್ಕೆ ಉದಾಹರಣೆ ಪ್ರಧಾನಿ‌ ಮೋದಿ‌. ಜೆನ್ ಜಿ ವಿಚಾರವಾಗಿ ಅವರು ಮಾಡಿದ ಸ್ವ ವಿಡಿಯೋವನ್ನು ಕೋಟ್ಯಂತರ ಮಂದಿ ವೀಕ್ಷಿಸಿದರು‌. ನಮ್ಮಲ್ಲಿ ಬಹಳ ಹಿಂದೆಯೇ ಸಾಮಾಜಿಕ ಜಾಲತಾಣ ಬಳಕೆ ಇತ್ತು, ಆದರೆ ಮುಖಂಡರು ಸರಿಯಾಗಿ ಬಳಸಿಕೊಂಡಿಲ್ಲ. ಹಲವರು ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಇಡೀ ರಾಜ್ಯಕ್ಕೆ ಮಾದರಿಯಾಗುವಂತೆ ಸಾಮಾಜಿಕ ಜಾಲತಾಣ ಬಳಸಿಕೊಳ್ಳಬೇಕು. ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳಲು ತಜ್ಞರೊಬ್ಬರನ್ನು ಕೊಡುತ್ತೇನೆ. ಆರು ಕ್ಷೇತ್ರದಲ್ಲಿ ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿದರೆ ಗೆಲ್ಲಬಹುದು. ಮುಂದೆ ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬರಲಿದೆ. ಒಗ್ಗಟ್ಟಾಗಿ ಮಾಡೋಣ ಎಂದು ತಿಳಿಸಿದರು.

ನಮ್ಮೆಲ್ಲರ ಉದ್ದೇಶದಿಂದ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ವೈಯಕ್ತಿಕ ನಿಂದನೆ ಮಾಡಬಾರದು, ಪ್ರಚೋದನೆ ಮಾಡಬಾರದು. ಮೈತ್ರಿ ಪಕ್ಷ ಬಿಜೆಪಿಗೆ ಮುಜುಗರ ಮಾಡಬಾರದು. ಬೇರೆ ವಿಷಯಗಳು ಟನ್ ಗಟ್ಟಲೆ ಸಮಸ್ಯೆ ಇವೆ. ಕೆಪಿಎಸ್ಸಿ ಹಗರಣ ಇದೆ, ಗ್ಯಾರಂಟಿ ಯೋಜನೆ ಜನರಿಗೆ ಸರಿಯಾಗಿ ತಲುಪುತ್ತಿಲ್ಲ, ಸರಿಯಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಈ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗಮನ ಹರಿಸಿ ಲೋಪದೋಷಗಳನ್ನು ಪತ್ತೆಹಚ್ಚಿ ಪೋಸ್ಟ್ ಮಾಡಬೇಕು ಎಂದು ಸಲಹೆ ನೀಡಿದರು.

ಶಾಸಕ ವೆಂಕಟಶಿವಾರೆಡ್ಡಿ ರಾಜಕಾರಣಿ ಎನ್ನುವುದಕ್ಕಿಂತ ಕುಟುಂಬದ ಯಜಮಾನ. ಅವರ ಅನುಭವದ ಜೊತೆಗೆ ಆಧುನಿಕ ವ್ಯವಸ್ಥೆ ಬಳಸಿಕೊಂಡು ಪಕ್ಷ ಸಂಘಟನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ಸದಸ್ಯ ಲೋಕೇಶ್ ಮರಿಯಪ್ಪ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ನಮ್ಮ ಪಕ್ಷದ ನಾಯಕರನ್ನು ಗೊಂದಲಕ್ಕೆ ಒಳಪಡಿಸಬಾರದು. ಪಕ್ಷವೆಂದರೆ ಕುಟುಂಬ ಇದ್ದ‌ಂತೆ, ಭಿನ್ನಾಭಿಪ್ರಾಯ ಸಹಜ, ಅದನ್ನು ಕುಳಿತು ಬಗೆಹರಿಸಿಕೊಳ್ಳಬೇಕು. ಸಾಮಾಜಿಕ ಜಾಲತಾಣದ ಬಳಕೆ ಸಂಬಂಧ ತರಬೇತಿ ನೀಡಲಾಗುವುದು, ಸಮರ್ಥವಾಗಿ ಬಳಕೆ ಮಾಡಿಕೊಳ್ಳಬೇಕು. ಪ್ರತಿ ತಾಲ್ಲೂಕಿನಲ್ಲಿ ಸಮಿತಿ ಮಾಡಲಾಗುತ್ತದೆ. ಅದಕ್ಕೆ ಸಿಎಂಆರ್ ಶ್ರೀನಾಥ್ ಕಂಪ್ಯೂಟರ್ ಸಮೇತ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಕಾರ್ಯಕರ್ತರು ಮಾತನಾಡಿ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿದೆ, ಆದರೆ ಅದು ಬೆಳಕಿಗೆ ಬರುತ್ತಿಲ್ಲ. ಸಾಮಾಜಿಕ ಜಾಲತಾಣದ ಕುರಿತು ತರಬೇತಿ ಕೊಡಬೇಕು, ತಂಡ ಮಾಡಲಾಗುತ್ತಿದೆ ಎಂದರು.

ಬಳಿಕ ಬೆಂಗಳೂರಿನ ಸಭೆಗೆ ಜಾಲತಾಣ ಕಾರ್ಯಕರ್ತರು ಪಾಲ್ಗೊಳ್ಳಲು ಸಿಎಂಆರ್ ಶ್ರೀನಾಥ್ ಬಸ್ಸಿನ ವ್ಯವಸ್ಥೆ ಮಾಡಿದ್ದರು

ಈ ಸಂದರ್ಭದಲ್ಲಿ ಮುಖಂಡರಾದ ರವಿ, ಹೊಲ್ಲರಹಳ್ಳಿ ಅಶೋಕ್, ಶೆಟ್ಟಿಗಾನಹಳ್ಳಿ ಸಂತೋಷ್, ವಕ್ಕಲೇರಿ ಚಿರಂಜೀವಿ, ಯಲುವಗುಳಿ ನಾಗರಾಜ್, ಎಂಐ ಸಿಟಿ ಮಂಜು, ಬೆಟ್ಟೇಗೌಡ, ಕುರಗಲ್ ಗಿರೀಶ್, ಡಿವಿಜಿ‌ ಮಂಜು, ಮನು, ಮಹೇಶ್, ಬಹದ್ದೂರ್ ಖಾನ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಆಸಕ್ತಿ ಹೊಂದಿರುವ ಜೆಡಿಎಸ್ ಪಕ್ಷದ ಆರು ತಾಲ್ಲೂಕಿನ ಕಾರ್ಯಕರ್ತರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 hour ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 hour ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

2 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

3 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

7 hours ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

12 hours ago