2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಸಿಎಂಪಿ ಪ್ಲಾನ್‌ನಲ್ಲಿ ಅನುಮೋದನೆ

ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-1ರ 42.3 ಕಿ.ಮೀ.ಗಳ ಉದ್ದದ ಮಾರ್ಗವನ್ನು ರೂ. 14,133 ಕೋಟಿ ವೆಚ್ಚದಲ್ಲಿ  ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ಇತರ ಗಣ್ಯರೊಂದಿಗೆ  ದೇಶಕ್ಕೆ ಸಮರ್ಪಿಸಿದರು.  ಈ ಯೋಜನೆಗಾಗಿ ಕರ್ನಾಟಕ ಸರ್ಕಾರವು  ರೂ. 5630 ಕೋಟಿಗಳಷ್ಟು ವೆಚ್ಚ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಮೆಟ್ರೊ ರೈಲು ಯೋಜನೆ ಹಂತ-2ರಲ್ಲಿ 75.06 ಕಿ.ಮೀ.ಗಳ ಉದ್ದದ ಮಾರ್ಗ ಹೊಂದಿದ್ದು, ಸದರಿ ಯೋಜನೆಗೆ ರೂ. 30,695 ಕೋಟಿಗಳ ವೆಚ್ಚವಾಗಲಿದೆ.  ಈಗಾಗಲೇ ಕಾಮಗಾರಿಗಳು ಭರದಿಂದ ನಿರ್ಮಾಣವಾಗುತ್ತಿದ್ದು, 32 ಕಿ.ಮೀ.ಗಳ ಉದ್ದದ ಮಾರ್ಗವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ ಎಂದು ನಿಮಗೆ ತಿಳಿಸಲು ನಾನು ಹರ್ಷಿಸುತ್ತೇನೆ. ಪ್ರಸ್ತುತ ಬೆಂಗಳೂರು ಮೆಟ್ರೋ ಜಾಲದ ಕಾರ್ಯಾಚರಣೆಯು 74 ಕಿ.ಮೀ.ಗಳಿಗೆ ಏರಿಕೆಯಾಗಿದೆ ಎಂದರು.

ನಾಗಸಂದ್ರದಿಂದ ಮಾದವಾರದವರೆಗಿನ ಉತ್ತರ ವಿಸ್ತರಣೆ 3.14 ಕಿ.ಮೀ.ಗಳ ಉದ್ದದ ಮಾರ್ಗವು ಮತ್ತು ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ.ಗಳ ಉದ್ದದ ಹೊಸ ಮಾರ್ಗಗಳು ಮುಕ್ತಾಯದ ಹಂತದಲ್ಲಿದ್ದು, ಏಪ್ರಿಲ್ 2024ರ ವೇಳೆಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ 21.26 ಕಿ.ಮೀ.ಗಳ ಉದ್ದದ ಹೊಸ ಮಾರ್ಗವನ್ನು ಮಾರ್ಚ್-2025ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಈ ಮಾರ್ಗಗಳನ್ನು ಪೂರ್ಣಗೊಳಿಸುವುದರೊಂದಿಗೆ, ಕಾರ್ಯಾಚರಣೆಯ ಜಾಲವು 117 ಕಿ.ಮೀ.ಗಳಿಗೆ ವಿಸ್ತಾರಗೊಳ್ಳುತ್ತದೆ ಮತ್ತು 12 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿದೆ ಎಂದರು.

ಹಂತ-2 ಯೋಜನೆಗಾಗಿ, ಕರ್ನಾಟಕ ಸರ್ಕಾರವು ರೂ. 11583.08 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ.

ಓಆರ್‌ಆರ್-ಏರ್‌ಪೋರ್ಟ್ ಮೆಟ್ರೋ ಎಂದು ಕರೆಯಲ್ಪಡುವ 58 ಕಿ.ಮೀ.ಗಳ ಉದ್ದದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಹೆಬ್ಬಾಳ ಜಂಕ್ಷನ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಂತ 2ಎ ಮತ್ತು 2ಬಿ ಯೋಜನೆಯನ್ನು ಅಂದಾಜು ರೂ. 14788.1 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, 2026ರ ವೇಳೆಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ.  ಕರ್ನಾಟಕ ಸರ್ಕಾರವು ಇದುವರೆಗೆ ರೂ. 4775.36 ಕೋಟಿ ಬಿಡುಗಡೆ ಮಾಡಲಾಗಿದೆ.  ಈ ಯೋಜನೆಯು ಪೂರ್ಣಗೊಂಡ ನಂತರ, ಮೆಟ್ರೋ ಜಾಲವು 176 ಕಿ.ಮೀ.ಗಳು ಆಗಲಿದೆ ಮತ್ತು ಪ್ರತಿದಿನ ಸುಮಾರು 20 ಲಕ್ಷ ಪ್ರಯಾಣಿಕರು ಸಂಚರಿಸಲಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಬೆಂಗಳೂರು ಮೆಟ್ರೊ ರೈಲು ಯೋಜನೆಯ 3ನೇ ಹಂತದಲ್ಲಿ 45 ಕಿ.ಮೀ.ಗಳ ಉದ್ದದ ಮಾರ್ಗವನ್ನು ಅಂದಾಜು ರೂ. 15,611 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲು ಡಿಪಿಆರ್‌ನ್ನು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.  ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ನಾನು ಮಾನ್ಯ ಪ್ರಧಾನ ಮಂತ್ರಿಯವರನ್ನು ಕೋರುತ್ತೇನೆ ಎಂದರು.

ಅಲ್ಲದೆ, ಸರ್ಜಾಪುರದಿಂದ ಹೆಬ್ಬಾಳದವರೆಗಿನ 37 ಕಿ.ಮೀ.ಗಳ ಉದ್ದದ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ಎಗೆ ಡಿಪಿಆರ್ ತಯಾರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಕರ್ನಾಟಕ ಸರ್ಕಾರವು 2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಸಿಎಂಪಿ ಪ್ಲಾನ್‌ನಲ್ಲಿ ಅನುಮೋದಿಸಿದೆ.  ಈಗಾಗಲೇ 257 ಕಿ.ಮೀ.ಗಳ ಮಾರ್ಗವು ಕಾರ್ಯಾಚರಣೆ, ನಿರ್ಮಾಣ ಮತ್ತು ಯೋಜನೆ ಹಂತದಲ್ಲಿದೆ.  ಇನ್ನುಳಿದ 60 ಕಿ.ಮೀ.ಗಳ ಮೆಟ್ರೊ ಮಾರ್ಗಗಳ ಕಾರ್ಯಸಾಧ್ಯತೆಯ ಸಮೀಕ್ಷೆಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದರು.

ಸಾಧಾರಣ ಬಡ್ಡಿದರಗಳೊಂದಿಗೆ ದೀರ್ಘಾವಧಿ ಸಾಲವನ್ನು ಒದಗಿಸುವ ಮೂಲಕ ಬೆಂಗಳೂರು ಮೆಟ್ರೋ ರೈಲು ಯೋಜನೆಗೆ ಬೆಂಬಲ ನೀಡಿದ ಎಲ್ಲಾ ವಿದೇಶೀ ಹಣಕಾಸು ಸಂಸ್ಥೆಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ಈ ಯೋಜನೆಯಲ್ಲಿ ಕೆಲಸ ಮಾಡಿದ ಎಲ್ಲಾ ಗುತ್ತಿಗೆದಾರರಿಗೆ ಹಾಗೂ ಈ ಯೋಜನೆಗಳಲ್ಲಿ ತೊಡಗಿರುವ 14 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

41 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

53 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

23 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago