2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಸಿಎಂಪಿ ಪ್ಲಾನ್‌ನಲ್ಲಿ ಅನುಮೋದನೆ

ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-1ರ 42.3 ಕಿ.ಮೀ.ಗಳ ಉದ್ದದ ಮಾರ್ಗವನ್ನು ರೂ. 14,133 ಕೋಟಿ ವೆಚ್ಚದಲ್ಲಿ  ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ಇತರ ಗಣ್ಯರೊಂದಿಗೆ  ದೇಶಕ್ಕೆ ಸಮರ್ಪಿಸಿದರು.  ಈ ಯೋಜನೆಗಾಗಿ ಕರ್ನಾಟಕ ಸರ್ಕಾರವು  ರೂ. 5630 ಕೋಟಿಗಳಷ್ಟು ವೆಚ್ಚ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಮೆಟ್ರೊ ರೈಲು ಯೋಜನೆ ಹಂತ-2ರಲ್ಲಿ 75.06 ಕಿ.ಮೀ.ಗಳ ಉದ್ದದ ಮಾರ್ಗ ಹೊಂದಿದ್ದು, ಸದರಿ ಯೋಜನೆಗೆ ರೂ. 30,695 ಕೋಟಿಗಳ ವೆಚ್ಚವಾಗಲಿದೆ.  ಈಗಾಗಲೇ ಕಾಮಗಾರಿಗಳು ಭರದಿಂದ ನಿರ್ಮಾಣವಾಗುತ್ತಿದ್ದು, 32 ಕಿ.ಮೀ.ಗಳ ಉದ್ದದ ಮಾರ್ಗವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ ಎಂದು ನಿಮಗೆ ತಿಳಿಸಲು ನಾನು ಹರ್ಷಿಸುತ್ತೇನೆ. ಪ್ರಸ್ತುತ ಬೆಂಗಳೂರು ಮೆಟ್ರೋ ಜಾಲದ ಕಾರ್ಯಾಚರಣೆಯು 74 ಕಿ.ಮೀ.ಗಳಿಗೆ ಏರಿಕೆಯಾಗಿದೆ ಎಂದರು.

ನಾಗಸಂದ್ರದಿಂದ ಮಾದವಾರದವರೆಗಿನ ಉತ್ತರ ವಿಸ್ತರಣೆ 3.14 ಕಿ.ಮೀ.ಗಳ ಉದ್ದದ ಮಾರ್ಗವು ಮತ್ತು ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ.ಗಳ ಉದ್ದದ ಹೊಸ ಮಾರ್ಗಗಳು ಮುಕ್ತಾಯದ ಹಂತದಲ್ಲಿದ್ದು, ಏಪ್ರಿಲ್ 2024ರ ವೇಳೆಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ 21.26 ಕಿ.ಮೀ.ಗಳ ಉದ್ದದ ಹೊಸ ಮಾರ್ಗವನ್ನು ಮಾರ್ಚ್-2025ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಈ ಮಾರ್ಗಗಳನ್ನು ಪೂರ್ಣಗೊಳಿಸುವುದರೊಂದಿಗೆ, ಕಾರ್ಯಾಚರಣೆಯ ಜಾಲವು 117 ಕಿ.ಮೀ.ಗಳಿಗೆ ವಿಸ್ತಾರಗೊಳ್ಳುತ್ತದೆ ಮತ್ತು 12 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿದೆ ಎಂದರು.

ಹಂತ-2 ಯೋಜನೆಗಾಗಿ, ಕರ್ನಾಟಕ ಸರ್ಕಾರವು ರೂ. 11583.08 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ.

ಓಆರ್‌ಆರ್-ಏರ್‌ಪೋರ್ಟ್ ಮೆಟ್ರೋ ಎಂದು ಕರೆಯಲ್ಪಡುವ 58 ಕಿ.ಮೀ.ಗಳ ಉದ್ದದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಹೆಬ್ಬಾಳ ಜಂಕ್ಷನ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಂತ 2ಎ ಮತ್ತು 2ಬಿ ಯೋಜನೆಯನ್ನು ಅಂದಾಜು ರೂ. 14788.1 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, 2026ರ ವೇಳೆಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ.  ಕರ್ನಾಟಕ ಸರ್ಕಾರವು ಇದುವರೆಗೆ ರೂ. 4775.36 ಕೋಟಿ ಬಿಡುಗಡೆ ಮಾಡಲಾಗಿದೆ.  ಈ ಯೋಜನೆಯು ಪೂರ್ಣಗೊಂಡ ನಂತರ, ಮೆಟ್ರೋ ಜಾಲವು 176 ಕಿ.ಮೀ.ಗಳು ಆಗಲಿದೆ ಮತ್ತು ಪ್ರತಿದಿನ ಸುಮಾರು 20 ಲಕ್ಷ ಪ್ರಯಾಣಿಕರು ಸಂಚರಿಸಲಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಬೆಂಗಳೂರು ಮೆಟ್ರೊ ರೈಲು ಯೋಜನೆಯ 3ನೇ ಹಂತದಲ್ಲಿ 45 ಕಿ.ಮೀ.ಗಳ ಉದ್ದದ ಮಾರ್ಗವನ್ನು ಅಂದಾಜು ರೂ. 15,611 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲು ಡಿಪಿಆರ್‌ನ್ನು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.  ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ನಾನು ಮಾನ್ಯ ಪ್ರಧಾನ ಮಂತ್ರಿಯವರನ್ನು ಕೋರುತ್ತೇನೆ ಎಂದರು.

ಅಲ್ಲದೆ, ಸರ್ಜಾಪುರದಿಂದ ಹೆಬ್ಬಾಳದವರೆಗಿನ 37 ಕಿ.ಮೀ.ಗಳ ಉದ್ದದ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ಎಗೆ ಡಿಪಿಆರ್ ತಯಾರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಕರ್ನಾಟಕ ಸರ್ಕಾರವು 2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಸಿಎಂಪಿ ಪ್ಲಾನ್‌ನಲ್ಲಿ ಅನುಮೋದಿಸಿದೆ.  ಈಗಾಗಲೇ 257 ಕಿ.ಮೀ.ಗಳ ಮಾರ್ಗವು ಕಾರ್ಯಾಚರಣೆ, ನಿರ್ಮಾಣ ಮತ್ತು ಯೋಜನೆ ಹಂತದಲ್ಲಿದೆ.  ಇನ್ನುಳಿದ 60 ಕಿ.ಮೀ.ಗಳ ಮೆಟ್ರೊ ಮಾರ್ಗಗಳ ಕಾರ್ಯಸಾಧ್ಯತೆಯ ಸಮೀಕ್ಷೆಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದರು.

ಸಾಧಾರಣ ಬಡ್ಡಿದರಗಳೊಂದಿಗೆ ದೀರ್ಘಾವಧಿ ಸಾಲವನ್ನು ಒದಗಿಸುವ ಮೂಲಕ ಬೆಂಗಳೂರು ಮೆಟ್ರೋ ರೈಲು ಯೋಜನೆಗೆ ಬೆಂಬಲ ನೀಡಿದ ಎಲ್ಲಾ ವಿದೇಶೀ ಹಣಕಾಸು ಸಂಸ್ಥೆಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ಈ ಯೋಜನೆಯಲ್ಲಿ ಕೆಲಸ ಮಾಡಿದ ಎಲ್ಲಾ ಗುತ್ತಿಗೆದಾರರಿಗೆ ಹಾಗೂ ಈ ಯೋಜನೆಗಳಲ್ಲಿ ತೊಡಗಿರುವ 14 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago