ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-1ರ 42.3 ಕಿ.ಮೀ.ಗಳ ಉದ್ದದ ಮಾರ್ಗವನ್ನು ರೂ. 14,133 ಕೋಟಿ ವೆಚ್ಚದಲ್ಲಿ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ಇತರ ಗಣ್ಯರೊಂದಿಗೆ ದೇಶಕ್ಕೆ ಸಮರ್ಪಿಸಿದರು. ಈ ಯೋಜನೆಗಾಗಿ ಕರ್ನಾಟಕ ಸರ್ಕಾರವು ರೂ. 5630 ಕೋಟಿಗಳಷ್ಟು ವೆಚ್ಚ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು ಮೆಟ್ರೊ ರೈಲು ಯೋಜನೆ ಹಂತ-2ರಲ್ಲಿ 75.06 ಕಿ.ಮೀ.ಗಳ ಉದ್ದದ ಮಾರ್ಗ ಹೊಂದಿದ್ದು, ಸದರಿ ಯೋಜನೆಗೆ ರೂ. 30,695 ಕೋಟಿಗಳ ವೆಚ್ಚವಾಗಲಿದೆ. ಈಗಾಗಲೇ ಕಾಮಗಾರಿಗಳು ಭರದಿಂದ ನಿರ್ಮಾಣವಾಗುತ್ತಿದ್ದು, 32 ಕಿ.ಮೀ.ಗಳ ಉದ್ದದ ಮಾರ್ಗವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ ಎಂದು ನಿಮಗೆ ತಿಳಿಸಲು ನಾನು ಹರ್ಷಿಸುತ್ತೇನೆ. ಪ್ರಸ್ತುತ ಬೆಂಗಳೂರು ಮೆಟ್ರೋ ಜಾಲದ ಕಾರ್ಯಾಚರಣೆಯು 74 ಕಿ.ಮೀ.ಗಳಿಗೆ ಏರಿಕೆಯಾಗಿದೆ ಎಂದರು.
ನಾಗಸಂದ್ರದಿಂದ ಮಾದವಾರದವರೆಗಿನ ಉತ್ತರ ವಿಸ್ತರಣೆ 3.14 ಕಿ.ಮೀ.ಗಳ ಉದ್ದದ ಮಾರ್ಗವು ಮತ್ತು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ.ಗಳ ಉದ್ದದ ಹೊಸ ಮಾರ್ಗಗಳು ಮುಕ್ತಾಯದ ಹಂತದಲ್ಲಿದ್ದು, ಏಪ್ರಿಲ್ 2024ರ ವೇಳೆಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಂತ-2 ಯೋಜನೆಗಾಗಿ, ಕರ್ನಾಟಕ ಸರ್ಕಾರವು ರೂ. 11583.08 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ.
ಓಆರ್ಆರ್-ಏರ್ಪೋರ್ಟ್ ಮೆಟ್ರೋ ಎಂದು ಕರೆಯಲ್ಪಡುವ 58 ಕಿ.ಮೀ.ಗಳ ಉದ್ದದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಹೆಬ್ಬಾಳ ಜಂಕ್ಷನ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಂತ 2ಎ ಮತ್ತು 2ಬಿ ಯೋಜನೆಯನ್ನು ಅಂದಾಜು ರೂ. 14788.1 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, 2026ರ ವೇಳೆಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಕರ್ನಾಟಕ ಸರ್ಕಾರವು ಇದುವರೆಗೆ ರೂ. 4775.36 ಕೋಟಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯು ಪೂರ್ಣಗೊಂಡ ನಂತರ, ಮೆಟ್ರೋ ಜಾಲವು 176 ಕಿ.ಮೀ.ಗಳು ಆಗಲಿದೆ ಮತ್ತು ಪ್ರತಿದಿನ ಸುಮಾರು 20 ಲಕ್ಷ ಪ್ರಯಾಣಿಕರು ಸಂಚರಿಸಲಿದ್ದಾರೆ ಎಂದು ಹೇಳಿದ್ದಾರೆ.
ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಬೆಂಗಳೂರು ಮೆಟ್ರೊ ರೈಲು ಯೋಜನೆಯ 3ನೇ ಹಂತದಲ್ಲಿ 45 ಕಿ.ಮೀ.ಗಳ ಉದ್ದದ ಮಾರ್ಗವನ್ನು ಅಂದಾಜು ರೂ. 15,611 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲು ಡಿಪಿಆರ್ನ್ನು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ನಾನು ಮಾನ್ಯ ಪ್ರಧಾನ ಮಂತ್ರಿಯವರನ್ನು ಕೋರುತ್ತೇನೆ ಎಂದರು.
ಅಲ್ಲದೆ, ಸರ್ಜಾಪುರದಿಂದ ಹೆಬ್ಬಾಳದವರೆಗಿನ 37 ಕಿ.ಮೀ.ಗಳ ಉದ್ದದ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ಎಗೆ ಡಿಪಿಆರ್ ತಯಾರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಕರ್ನಾಟಕ ಸರ್ಕಾರವು 2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಸಿಎಂಪಿ ಪ್ಲಾನ್ನಲ್ಲಿ ಅನುಮೋದಿಸಿದೆ. ಈಗಾಗಲೇ 257 ಕಿ.ಮೀ.ಗಳ ಮಾರ್ಗವು ಕಾರ್ಯಾಚರಣೆ, ನಿರ್ಮಾಣ ಮತ್ತು ಯೋಜನೆ ಹಂತದಲ್ಲಿದೆ. ಇನ್ನುಳಿದ 60 ಕಿ.ಮೀ.ಗಳ ಮೆಟ್ರೊ ಮಾರ್ಗಗಳ ಕಾರ್ಯಸಾಧ್ಯತೆಯ ಸಮೀಕ್ಷೆಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದರು.
ಸಾಧಾರಣ ಬಡ್ಡಿದರಗಳೊಂದಿಗೆ ದೀರ್ಘಾವಧಿ ಸಾಲವನ್ನು ಒದಗಿಸುವ ಮೂಲಕ ಬೆಂಗಳೂರು ಮೆಟ್ರೋ ರೈಲು ಯೋಜನೆಗೆ ಬೆಂಬಲ ನೀಡಿದ ಎಲ್ಲಾ ವಿದೇಶೀ ಹಣಕಾಸು ಸಂಸ್ಥೆಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ಈ ಯೋಜನೆಯಲ್ಲಿ ಕೆಲಸ ಮಾಡಿದ ಎಲ್ಲಾ ಗುತ್ತಿಗೆದಾರರಿಗೆ ಹಾಗೂ ಈ ಯೋಜನೆಗಳಲ್ಲಿ ತೊಡಗಿರುವ 14 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…