2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಸಿಎಂಪಿ ಪ್ಲಾನ್‌ನಲ್ಲಿ ಅನುಮೋದನೆ

ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-1ರ 42.3 ಕಿ.ಮೀ.ಗಳ ಉದ್ದದ ಮಾರ್ಗವನ್ನು ರೂ. 14,133 ಕೋಟಿ ವೆಚ್ಚದಲ್ಲಿ  ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ಇತರ ಗಣ್ಯರೊಂದಿಗೆ  ದೇಶಕ್ಕೆ ಸಮರ್ಪಿಸಿದರು.  ಈ ಯೋಜನೆಗಾಗಿ ಕರ್ನಾಟಕ ಸರ್ಕಾರವು  ರೂ. 5630 ಕೋಟಿಗಳಷ್ಟು ವೆಚ್ಚ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಮೆಟ್ರೊ ರೈಲು ಯೋಜನೆ ಹಂತ-2ರಲ್ಲಿ 75.06 ಕಿ.ಮೀ.ಗಳ ಉದ್ದದ ಮಾರ್ಗ ಹೊಂದಿದ್ದು, ಸದರಿ ಯೋಜನೆಗೆ ರೂ. 30,695 ಕೋಟಿಗಳ ವೆಚ್ಚವಾಗಲಿದೆ.  ಈಗಾಗಲೇ ಕಾಮಗಾರಿಗಳು ಭರದಿಂದ ನಿರ್ಮಾಣವಾಗುತ್ತಿದ್ದು, 32 ಕಿ.ಮೀ.ಗಳ ಉದ್ದದ ಮಾರ್ಗವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ ಎಂದು ನಿಮಗೆ ತಿಳಿಸಲು ನಾನು ಹರ್ಷಿಸುತ್ತೇನೆ. ಪ್ರಸ್ತುತ ಬೆಂಗಳೂರು ಮೆಟ್ರೋ ಜಾಲದ ಕಾರ್ಯಾಚರಣೆಯು 74 ಕಿ.ಮೀ.ಗಳಿಗೆ ಏರಿಕೆಯಾಗಿದೆ ಎಂದರು.

ನಾಗಸಂದ್ರದಿಂದ ಮಾದವಾರದವರೆಗಿನ ಉತ್ತರ ವಿಸ್ತರಣೆ 3.14 ಕಿ.ಮೀ.ಗಳ ಉದ್ದದ ಮಾರ್ಗವು ಮತ್ತು ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ.ಗಳ ಉದ್ದದ ಹೊಸ ಮಾರ್ಗಗಳು ಮುಕ್ತಾಯದ ಹಂತದಲ್ಲಿದ್ದು, ಏಪ್ರಿಲ್ 2024ರ ವೇಳೆಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ 21.26 ಕಿ.ಮೀ.ಗಳ ಉದ್ದದ ಹೊಸ ಮಾರ್ಗವನ್ನು ಮಾರ್ಚ್-2025ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಈ ಮಾರ್ಗಗಳನ್ನು ಪೂರ್ಣಗೊಳಿಸುವುದರೊಂದಿಗೆ, ಕಾರ್ಯಾಚರಣೆಯ ಜಾಲವು 117 ಕಿ.ಮೀ.ಗಳಿಗೆ ವಿಸ್ತಾರಗೊಳ್ಳುತ್ತದೆ ಮತ್ತು 12 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿದೆ ಎಂದರು.

ಹಂತ-2 ಯೋಜನೆಗಾಗಿ, ಕರ್ನಾಟಕ ಸರ್ಕಾರವು ರೂ. 11583.08 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ.

ಓಆರ್‌ಆರ್-ಏರ್‌ಪೋರ್ಟ್ ಮೆಟ್ರೋ ಎಂದು ಕರೆಯಲ್ಪಡುವ 58 ಕಿ.ಮೀ.ಗಳ ಉದ್ದದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಹೆಬ್ಬಾಳ ಜಂಕ್ಷನ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಂತ 2ಎ ಮತ್ತು 2ಬಿ ಯೋಜನೆಯನ್ನು ಅಂದಾಜು ರೂ. 14788.1 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, 2026ರ ವೇಳೆಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ.  ಕರ್ನಾಟಕ ಸರ್ಕಾರವು ಇದುವರೆಗೆ ರೂ. 4775.36 ಕೋಟಿ ಬಿಡುಗಡೆ ಮಾಡಲಾಗಿದೆ.  ಈ ಯೋಜನೆಯು ಪೂರ್ಣಗೊಂಡ ನಂತರ, ಮೆಟ್ರೋ ಜಾಲವು 176 ಕಿ.ಮೀ.ಗಳು ಆಗಲಿದೆ ಮತ್ತು ಪ್ರತಿದಿನ ಸುಮಾರು 20 ಲಕ್ಷ ಪ್ರಯಾಣಿಕರು ಸಂಚರಿಸಲಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಬೆಂಗಳೂರು ಮೆಟ್ರೊ ರೈಲು ಯೋಜನೆಯ 3ನೇ ಹಂತದಲ್ಲಿ 45 ಕಿ.ಮೀ.ಗಳ ಉದ್ದದ ಮಾರ್ಗವನ್ನು ಅಂದಾಜು ರೂ. 15,611 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲು ಡಿಪಿಆರ್‌ನ್ನು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.  ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ನಾನು ಮಾನ್ಯ ಪ್ರಧಾನ ಮಂತ್ರಿಯವರನ್ನು ಕೋರುತ್ತೇನೆ ಎಂದರು.

ಅಲ್ಲದೆ, ಸರ್ಜಾಪುರದಿಂದ ಹೆಬ್ಬಾಳದವರೆಗಿನ 37 ಕಿ.ಮೀ.ಗಳ ಉದ್ದದ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ಎಗೆ ಡಿಪಿಆರ್ ತಯಾರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಕರ್ನಾಟಕ ಸರ್ಕಾರವು 2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಸಿಎಂಪಿ ಪ್ಲಾನ್‌ನಲ್ಲಿ ಅನುಮೋದಿಸಿದೆ.  ಈಗಾಗಲೇ 257 ಕಿ.ಮೀ.ಗಳ ಮಾರ್ಗವು ಕಾರ್ಯಾಚರಣೆ, ನಿರ್ಮಾಣ ಮತ್ತು ಯೋಜನೆ ಹಂತದಲ್ಲಿದೆ.  ಇನ್ನುಳಿದ 60 ಕಿ.ಮೀ.ಗಳ ಮೆಟ್ರೊ ಮಾರ್ಗಗಳ ಕಾರ್ಯಸಾಧ್ಯತೆಯ ಸಮೀಕ್ಷೆಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದರು.

ಸಾಧಾರಣ ಬಡ್ಡಿದರಗಳೊಂದಿಗೆ ದೀರ್ಘಾವಧಿ ಸಾಲವನ್ನು ಒದಗಿಸುವ ಮೂಲಕ ಬೆಂಗಳೂರು ಮೆಟ್ರೋ ರೈಲು ಯೋಜನೆಗೆ ಬೆಂಬಲ ನೀಡಿದ ಎಲ್ಲಾ ವಿದೇಶೀ ಹಣಕಾಸು ಸಂಸ್ಥೆಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ಈ ಯೋಜನೆಯಲ್ಲಿ ಕೆಲಸ ಮಾಡಿದ ಎಲ್ಲಾ ಗುತ್ತಿಗೆದಾರರಿಗೆ ಹಾಗೂ ಈ ಯೋಜನೆಗಳಲ್ಲಿ ತೊಡಗಿರುವ 14 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

59 minutes ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

6 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago