2047ರ ಹೊತ್ತಿಗೆ ಭಾರತವನ್ನ ಅಭಿವೃದ್ಧಿ ರಾಷ್ಟ್ರವಾಗಿಸುವುದು ಸರ್ಕಾರದ ಧ್ಯೇಯ- ಡಾ.ಕೆ.ಎಂ.ಸುಸೀಂದ್ರನ್‌

2047ರ ಹೊತ್ತಿಗೆ ನಮ್ಮ ದೇಶವನ್ನು ಪರಿಪೂರ್ಣ ಅಭಿವೃದ್ಧಿ ಸಾಧಿಸಿದ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಹಾಗೂ ವಿಶ್ವಗುರು ಸ್ಥಾನಕ್ಕೇರಿಸುವುದು ಭಾರತ ಸರ್ಕಾರದ ಗುರಿಯಾಗಿದೆ, ಇಂದಿನ ಯುವಜನತೆಗೆ ನಮ್ಮ ದೇಶದ ಪ್ರಧಾನಿಯವರು ಹೇಳಿದಂತೆ ಇದು ನಿಜಕ್ಕೂ ಅಮೃತಕಾಲ ಎಂದು ಟಾಟಾ ಕನ್‌ಸಲ್ಸ್ ಸರ್ವಿಸಸ್ (ಟಿ.ಸಿ.ಎಸ್)ನ ವಿದ್ವತ್ ವಿನಿಮಯ ವಿಭಾಗದ ಮುಖ್ಯಸ್ಥ ಡಾ. ಕೆ.ಎಂ. ಸುಸೀಂದ್ರನ್‌ ಹೇಳಿದರು.

ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜನೆಗೊಂಡಿದ್ದ 2023-2027ರ ಅವಧಿಯ ಇಂಜಿನಿಯರಿಂಗ್ ಕಲಿಕೆಯ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ನಮ್ಮ ಯುವ ಜನತೆ ದೇಶವನ್ನು ಸಮಗ್ರವಾಗಿ ಮುನ್ನೆಡೆಸುವ ಗುರುತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ನನಗಿದೆ ಎಂದರು.

ಯುವಜನರನ್ನ ಪರಿಣಿತ ತಂತ್ರಜ್ಞರನ್ನಾಗಿ ರೂಪಿಸಲು ಹಲವು ವಿದ್ಯಾ ಸಂಸ್ಥೆಗಳು ಶ್ರಮಪಡುತ್ತಿವೆ, ಅದರಲ್ಲೂ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಹಗುರಗೊಳಿಸಲು ಸಮರ್ಥವಾಗಿದ್ದು, ಟಿ.ಸಿ.ಎಸ್ ಕೂಡ ಈ ಮಹತ್ವದ ಯಾನದಲ್ಲಿ ಕೈಜೋಡಿಸಲಿದೆ. ಇದೀಗ ತಾನೆ ನಮ್ಮ ಸಂಸ್ಥೆ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಜತೆ ಒಪ್ಪಂದ ಮಾಡಿಕೊಂಡಿದೆ. ಅದರ ಪ್ರಕಾರ ನಾವು ಆಗಾಗ್ಗೆ ಬಂದು ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹಾಗೂ ಕೌಶಲ್ಯದ ಸಾಮರ್ಥ್ಯಗಳನ್ನು ಪರಿಶೀಲಿಸಲಿದ್ದೇವೆ ಮತ್ತು ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ನೆರವಾಗಲಿದ್ದೇವೆ ಎಂದು ತಿಳಿಸಿದ್ದಾರೆ.

ತಂತ್ರಜ್ಞಾನದ ಅನ್ವೇಷಣೆಗಳು ಪ್ರತಿದಿನ, ಪ್ರತಿಕ್ಷಣ ಏರುಮುಖವಾಗಿ ಸಕಾರಾತ್ಮಕ ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ‘ನಿರಂತರ ಕಲಿಕೆ’ ಅನಿವಾರ್ಯವಾಗಿದೆ ಎಂದರು.

ಪದವಿ ಪಡೆದ ನಂತರವೂ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರವಾಗಿ ಸಾಗಬೇಕಿದೆ. ಆಗಲೇ ನಾವು ನಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಲು ಸಾಧ್ಯವಾಗುತ್ತದೆ. ಇದಲ್ಲದೆ ವಿದ್ಯಾರ್ಥಿಗಳು ತಾವು ವಿಧಿವತ್ತಾಗಿ ಕಲಿಯುವ ವಿದ್ಯೆಯ ಜತೆ, ತಮ್ಮ ಸ್ವ ಇಚ್ಛೆಯಿಂದ ಪ್ರೀತಿಸುವ ವಿಷಯವನ್ನೂ ಅಧ್ಯಯನ ಮಾಡಬೇಕು. ಇದಕ್ಕಾಗಿ ಪ್ರತಿದಿನ ಹತ್ತು ನಿಮಿಷ ಮೀಸಲಿಟ್ಟರೂ ಸಾಕು. ಕಲಿಯುವ ವಿದ್ಯೆ ಇಂಜಿನಿಯರಿಂಗ್ ಆದರೂ ಪ್ರೀತಿಸುವ ವಿಷಯ ಸಮಾಜಸೇವೆ, ರಾಜಕೀಯ, ಆಡಳಿತ ಇತ್ಯಾದಿ ಇತ್ಯಾದಿ’, ಯಾವುದಾದರೂ ಆಗಬಹುದು. ಎಂದು ಅಭಿಪ್ರಾಯಪಟ್ಟರು.

ನಂತರ ನಿಟ್ಟೆ ಶಿಕ್ಷಣ ಸಂಸ್ಥೆಗಳ ಹಿರಿಯ ಸಲಹೆಗಾರ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್‌.ಆರ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಪ್ರೌಢಾವಸ್ಥೆಯಲ್ಲಿದ್ದು, ಉನ್ನತ ಶಿಕ್ಷಣ ಕಲಿಕೆಗೆ ದಾಖಲಾಗಿದ್ದಾರೆ. ಮೊದಲು ಅವರು ತಮ್ಮ ಬಾಲ್ಯದ ಮನಸ್ಥಿತಿಯಿಂದ ಹೊರ ಬಂದು ತಮ್ಮ ಜ್ಞಾನ ಹಾಗೂ ಕೌಶಲ್ಯದ ಅಭಿವೃದ್ಧಿಗೆ ನಿರಂತರ ಅಧ್ಯಯನದಲ್ಲಿ ತೊಡಗಬೇಕು ಎಂದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಹೆಚ್.ಸಿ, ನಾಗರಾಜ್‌ ಸ್ವಾಗತಿಸಿ, ಸಂಸ್ಥೆಯಲ್ಲಿ ಕೌಶಲ್ಯದ ಅಭಿವೃದ್ಧಿಗೆ ಇರುವ ಅವಕಾಶಗಳ ಬಗ್ಗೆ ಸಭಿಕರ ಗಮನ ಸೆಳೆದರು.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

4 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

4 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

12 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

1 day ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago