2047ರ ಹೊತ್ತಿಗೆ ಭಾರತವನ್ನ ಅಭಿವೃದ್ಧಿ ರಾಷ್ಟ್ರವಾಗಿಸುವುದು ಸರ್ಕಾರದ ಧ್ಯೇಯ- ಡಾ.ಕೆ.ಎಂ.ಸುಸೀಂದ್ರನ್‌

2047ರ ಹೊತ್ತಿಗೆ ನಮ್ಮ ದೇಶವನ್ನು ಪರಿಪೂರ್ಣ ಅಭಿವೃದ್ಧಿ ಸಾಧಿಸಿದ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಹಾಗೂ ವಿಶ್ವಗುರು ಸ್ಥಾನಕ್ಕೇರಿಸುವುದು ಭಾರತ ಸರ್ಕಾರದ ಗುರಿಯಾಗಿದೆ, ಇಂದಿನ ಯುವಜನತೆಗೆ ನಮ್ಮ ದೇಶದ ಪ್ರಧಾನಿಯವರು ಹೇಳಿದಂತೆ ಇದು ನಿಜಕ್ಕೂ ಅಮೃತಕಾಲ ಎಂದು ಟಾಟಾ ಕನ್‌ಸಲ್ಸ್ ಸರ್ವಿಸಸ್ (ಟಿ.ಸಿ.ಎಸ್)ನ ವಿದ್ವತ್ ವಿನಿಮಯ ವಿಭಾಗದ ಮುಖ್ಯಸ್ಥ ಡಾ. ಕೆ.ಎಂ. ಸುಸೀಂದ್ರನ್‌ ಹೇಳಿದರು.

ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜನೆಗೊಂಡಿದ್ದ 2023-2027ರ ಅವಧಿಯ ಇಂಜಿನಿಯರಿಂಗ್ ಕಲಿಕೆಯ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ನಮ್ಮ ಯುವ ಜನತೆ ದೇಶವನ್ನು ಸಮಗ್ರವಾಗಿ ಮುನ್ನೆಡೆಸುವ ಗುರುತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ನನಗಿದೆ ಎಂದರು.

ಯುವಜನರನ್ನ ಪರಿಣಿತ ತಂತ್ರಜ್ಞರನ್ನಾಗಿ ರೂಪಿಸಲು ಹಲವು ವಿದ್ಯಾ ಸಂಸ್ಥೆಗಳು ಶ್ರಮಪಡುತ್ತಿವೆ, ಅದರಲ್ಲೂ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಹಗುರಗೊಳಿಸಲು ಸಮರ್ಥವಾಗಿದ್ದು, ಟಿ.ಸಿ.ಎಸ್ ಕೂಡ ಈ ಮಹತ್ವದ ಯಾನದಲ್ಲಿ ಕೈಜೋಡಿಸಲಿದೆ. ಇದೀಗ ತಾನೆ ನಮ್ಮ ಸಂಸ್ಥೆ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಜತೆ ಒಪ್ಪಂದ ಮಾಡಿಕೊಂಡಿದೆ. ಅದರ ಪ್ರಕಾರ ನಾವು ಆಗಾಗ್ಗೆ ಬಂದು ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹಾಗೂ ಕೌಶಲ್ಯದ ಸಾಮರ್ಥ್ಯಗಳನ್ನು ಪರಿಶೀಲಿಸಲಿದ್ದೇವೆ ಮತ್ತು ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ನೆರವಾಗಲಿದ್ದೇವೆ ಎಂದು ತಿಳಿಸಿದ್ದಾರೆ.

ತಂತ್ರಜ್ಞಾನದ ಅನ್ವೇಷಣೆಗಳು ಪ್ರತಿದಿನ, ಪ್ರತಿಕ್ಷಣ ಏರುಮುಖವಾಗಿ ಸಕಾರಾತ್ಮಕ ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ‘ನಿರಂತರ ಕಲಿಕೆ’ ಅನಿವಾರ್ಯವಾಗಿದೆ ಎಂದರು.

ಪದವಿ ಪಡೆದ ನಂತರವೂ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರವಾಗಿ ಸಾಗಬೇಕಿದೆ. ಆಗಲೇ ನಾವು ನಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಲು ಸಾಧ್ಯವಾಗುತ್ತದೆ. ಇದಲ್ಲದೆ ವಿದ್ಯಾರ್ಥಿಗಳು ತಾವು ವಿಧಿವತ್ತಾಗಿ ಕಲಿಯುವ ವಿದ್ಯೆಯ ಜತೆ, ತಮ್ಮ ಸ್ವ ಇಚ್ಛೆಯಿಂದ ಪ್ರೀತಿಸುವ ವಿಷಯವನ್ನೂ ಅಧ್ಯಯನ ಮಾಡಬೇಕು. ಇದಕ್ಕಾಗಿ ಪ್ರತಿದಿನ ಹತ್ತು ನಿಮಿಷ ಮೀಸಲಿಟ್ಟರೂ ಸಾಕು. ಕಲಿಯುವ ವಿದ್ಯೆ ಇಂಜಿನಿಯರಿಂಗ್ ಆದರೂ ಪ್ರೀತಿಸುವ ವಿಷಯ ಸಮಾಜಸೇವೆ, ರಾಜಕೀಯ, ಆಡಳಿತ ಇತ್ಯಾದಿ ಇತ್ಯಾದಿ’, ಯಾವುದಾದರೂ ಆಗಬಹುದು. ಎಂದು ಅಭಿಪ್ರಾಯಪಟ್ಟರು.

ನಂತರ ನಿಟ್ಟೆ ಶಿಕ್ಷಣ ಸಂಸ್ಥೆಗಳ ಹಿರಿಯ ಸಲಹೆಗಾರ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್‌.ಆರ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಪ್ರೌಢಾವಸ್ಥೆಯಲ್ಲಿದ್ದು, ಉನ್ನತ ಶಿಕ್ಷಣ ಕಲಿಕೆಗೆ ದಾಖಲಾಗಿದ್ದಾರೆ. ಮೊದಲು ಅವರು ತಮ್ಮ ಬಾಲ್ಯದ ಮನಸ್ಥಿತಿಯಿಂದ ಹೊರ ಬಂದು ತಮ್ಮ ಜ್ಞಾನ ಹಾಗೂ ಕೌಶಲ್ಯದ ಅಭಿವೃದ್ಧಿಗೆ ನಿರಂತರ ಅಧ್ಯಯನದಲ್ಲಿ ತೊಡಗಬೇಕು ಎಂದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಹೆಚ್.ಸಿ, ನಾಗರಾಜ್‌ ಸ್ವಾಗತಿಸಿ, ಸಂಸ್ಥೆಯಲ್ಲಿ ಕೌಶಲ್ಯದ ಅಭಿವೃದ್ಧಿಗೆ ಇರುವ ಅವಕಾಶಗಳ ಬಗ್ಗೆ ಸಭಿಕರ ಗಮನ ಸೆಳೆದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

2 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

15 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

22 hours ago