2047ರ ಹೊತ್ತಿಗೆ ನಮ್ಮ ದೇಶವನ್ನು ಪರಿಪೂರ್ಣ ಅಭಿವೃದ್ಧಿ ಸಾಧಿಸಿದ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಹಾಗೂ ವಿಶ್ವಗುರು ಸ್ಥಾನಕ್ಕೇರಿಸುವುದು ಭಾರತ ಸರ್ಕಾರದ ಗುರಿಯಾಗಿದೆ, ಇಂದಿನ ಯುವಜನತೆಗೆ ನಮ್ಮ ದೇಶದ ಪ್ರಧಾನಿಯವರು ಹೇಳಿದಂತೆ ಇದು ನಿಜಕ್ಕೂ ಅಮೃತಕಾಲ ಎಂದು ಟಾಟಾ ಕನ್ಸಲ್ಸ್ ಸರ್ವಿಸಸ್ (ಟಿ.ಸಿ.ಎಸ್)ನ ವಿದ್ವತ್ ವಿನಿಮಯ ವಿಭಾಗದ ಮುಖ್ಯಸ್ಥ ಡಾ. ಕೆ.ಎಂ. ಸುಸೀಂದ್ರನ್ ಹೇಳಿದರು.
ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜನೆಗೊಂಡಿದ್ದ 2023-2027ರ ಅವಧಿಯ ಇಂಜಿನಿಯರಿಂಗ್ ಕಲಿಕೆಯ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ನಮ್ಮ ಯುವ ಜನತೆ ದೇಶವನ್ನು ಸಮಗ್ರವಾಗಿ ಮುನ್ನೆಡೆಸುವ ಗುರುತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ನನಗಿದೆ ಎಂದರು.
ಯುವಜನರನ್ನ ಪರಿಣಿತ ತಂತ್ರಜ್ಞರನ್ನಾಗಿ ರೂಪಿಸಲು ಹಲವು ವಿದ್ಯಾ ಸಂಸ್ಥೆಗಳು ಶ್ರಮಪಡುತ್ತಿವೆ, ಅದರಲ್ಲೂ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಹಗುರಗೊಳಿಸಲು ಸಮರ್ಥವಾಗಿದ್ದು, ಟಿ.ಸಿ.ಎಸ್ ಕೂಡ ಈ ಮಹತ್ವದ ಯಾನದಲ್ಲಿ ಕೈಜೋಡಿಸಲಿದೆ. ಇದೀಗ ತಾನೆ ನಮ್ಮ ಸಂಸ್ಥೆ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಜತೆ ಒಪ್ಪಂದ ಮಾಡಿಕೊಂಡಿದೆ. ಅದರ ಪ್ರಕಾರ ನಾವು ಆಗಾಗ್ಗೆ ಬಂದು ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹಾಗೂ ಕೌಶಲ್ಯದ ಸಾಮರ್ಥ್ಯಗಳನ್ನು ಪರಿಶೀಲಿಸಲಿದ್ದೇವೆ ಮತ್ತು ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ನೆರವಾಗಲಿದ್ದೇವೆ ಎಂದು ತಿಳಿಸಿದ್ದಾರೆ.
ತಂತ್ರಜ್ಞಾನದ ಅನ್ವೇಷಣೆಗಳು ಪ್ರತಿದಿನ, ಪ್ರತಿಕ್ಷಣ ಏರುಮುಖವಾಗಿ ಸಕಾರಾತ್ಮಕ ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ‘ನಿರಂತರ ಕಲಿಕೆ’ ಅನಿವಾರ್ಯವಾಗಿದೆ ಎಂದರು.
ಪದವಿ ಪಡೆದ ನಂತರವೂ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರವಾಗಿ ಸಾಗಬೇಕಿದೆ. ಆಗಲೇ ನಾವು ನಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಲು ಸಾಧ್ಯವಾಗುತ್ತದೆ. ಇದಲ್ಲದೆ ವಿದ್ಯಾರ್ಥಿಗಳು ತಾವು ವಿಧಿವತ್ತಾಗಿ ಕಲಿಯುವ ವಿದ್ಯೆಯ ಜತೆ, ತಮ್ಮ ಸ್ವ ಇಚ್ಛೆಯಿಂದ ಪ್ರೀತಿಸುವ ವಿಷಯವನ್ನೂ ಅಧ್ಯಯನ ಮಾಡಬೇಕು. ಇದಕ್ಕಾಗಿ ಪ್ರತಿದಿನ ಹತ್ತು ನಿಮಿಷ ಮೀಸಲಿಟ್ಟರೂ ಸಾಕು. ಕಲಿಯುವ ವಿದ್ಯೆ ಇಂಜಿನಿಯರಿಂಗ್ ಆದರೂ ಪ್ರೀತಿಸುವ ವಿಷಯ ಸಮಾಜಸೇವೆ, ರಾಜಕೀಯ, ಆಡಳಿತ ಇತ್ಯಾದಿ ಇತ್ಯಾದಿ’, ಯಾವುದಾದರೂ ಆಗಬಹುದು. ಎಂದು ಅಭಿಪ್ರಾಯಪಟ್ಟರು.
ನಂತರ ನಿಟ್ಟೆ ಶಿಕ್ಷಣ ಸಂಸ್ಥೆಗಳ ಹಿರಿಯ ಸಲಹೆಗಾರ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಆರ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಪ್ರೌಢಾವಸ್ಥೆಯಲ್ಲಿದ್ದು, ಉನ್ನತ ಶಿಕ್ಷಣ ಕಲಿಕೆಗೆ ದಾಖಲಾಗಿದ್ದಾರೆ. ಮೊದಲು ಅವರು ತಮ್ಮ ಬಾಲ್ಯದ ಮನಸ್ಥಿತಿಯಿಂದ ಹೊರ ಬಂದು ತಮ್ಮ ಜ್ಞಾನ ಹಾಗೂ ಕೌಶಲ್ಯದ ಅಭಿವೃದ್ಧಿಗೆ ನಿರಂತರ ಅಧ್ಯಯನದಲ್ಲಿ ತೊಡಗಬೇಕು ಎಂದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಹೆಚ್.ಸಿ, ನಾಗರಾಜ್ ಸ್ವಾಗತಿಸಿ, ಸಂಸ್ಥೆಯಲ್ಲಿ ಕೌಶಲ್ಯದ ಅಭಿವೃದ್ಧಿಗೆ ಇರುವ ಅವಕಾಶಗಳ ಬಗ್ಗೆ ಸಭಿಕರ ಗಮನ ಸೆಳೆದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…