2047ರ ಹೊತ್ತಿಗೆ ಭಾರತವನ್ನ ಅಭಿವೃದ್ಧಿ ರಾಷ್ಟ್ರವಾಗಿಸುವುದು ಸರ್ಕಾರದ ಧ್ಯೇಯ- ಡಾ.ಕೆ.ಎಂ.ಸುಸೀಂದ್ರನ್‌

2047ರ ಹೊತ್ತಿಗೆ ನಮ್ಮ ದೇಶವನ್ನು ಪರಿಪೂರ್ಣ ಅಭಿವೃದ್ಧಿ ಸಾಧಿಸಿದ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಹಾಗೂ ವಿಶ್ವಗುರು ಸ್ಥಾನಕ್ಕೇರಿಸುವುದು ಭಾರತ ಸರ್ಕಾರದ ಗುರಿಯಾಗಿದೆ, ಇಂದಿನ ಯುವಜನತೆಗೆ ನಮ್ಮ ದೇಶದ ಪ್ರಧಾನಿಯವರು ಹೇಳಿದಂತೆ ಇದು ನಿಜಕ್ಕೂ ಅಮೃತಕಾಲ ಎಂದು ಟಾಟಾ ಕನ್‌ಸಲ್ಸ್ ಸರ್ವಿಸಸ್ (ಟಿ.ಸಿ.ಎಸ್)ನ ವಿದ್ವತ್ ವಿನಿಮಯ ವಿಭಾಗದ ಮುಖ್ಯಸ್ಥ ಡಾ. ಕೆ.ಎಂ. ಸುಸೀಂದ್ರನ್‌ ಹೇಳಿದರು.

ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜನೆಗೊಂಡಿದ್ದ 2023-2027ರ ಅವಧಿಯ ಇಂಜಿನಿಯರಿಂಗ್ ಕಲಿಕೆಯ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ನಮ್ಮ ಯುವ ಜನತೆ ದೇಶವನ್ನು ಸಮಗ್ರವಾಗಿ ಮುನ್ನೆಡೆಸುವ ಗುರುತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ನನಗಿದೆ ಎಂದರು.

ಯುವಜನರನ್ನ ಪರಿಣಿತ ತಂತ್ರಜ್ಞರನ್ನಾಗಿ ರೂಪಿಸಲು ಹಲವು ವಿದ್ಯಾ ಸಂಸ್ಥೆಗಳು ಶ್ರಮಪಡುತ್ತಿವೆ, ಅದರಲ್ಲೂ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಹಗುರಗೊಳಿಸಲು ಸಮರ್ಥವಾಗಿದ್ದು, ಟಿ.ಸಿ.ಎಸ್ ಕೂಡ ಈ ಮಹತ್ವದ ಯಾನದಲ್ಲಿ ಕೈಜೋಡಿಸಲಿದೆ. ಇದೀಗ ತಾನೆ ನಮ್ಮ ಸಂಸ್ಥೆ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಜತೆ ಒಪ್ಪಂದ ಮಾಡಿಕೊಂಡಿದೆ. ಅದರ ಪ್ರಕಾರ ನಾವು ಆಗಾಗ್ಗೆ ಬಂದು ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹಾಗೂ ಕೌಶಲ್ಯದ ಸಾಮರ್ಥ್ಯಗಳನ್ನು ಪರಿಶೀಲಿಸಲಿದ್ದೇವೆ ಮತ್ತು ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ನೆರವಾಗಲಿದ್ದೇವೆ ಎಂದು ತಿಳಿಸಿದ್ದಾರೆ.

ತಂತ್ರಜ್ಞಾನದ ಅನ್ವೇಷಣೆಗಳು ಪ್ರತಿದಿನ, ಪ್ರತಿಕ್ಷಣ ಏರುಮುಖವಾಗಿ ಸಕಾರಾತ್ಮಕ ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ‘ನಿರಂತರ ಕಲಿಕೆ’ ಅನಿವಾರ್ಯವಾಗಿದೆ ಎಂದರು.

ಪದವಿ ಪಡೆದ ನಂತರವೂ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರವಾಗಿ ಸಾಗಬೇಕಿದೆ. ಆಗಲೇ ನಾವು ನಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಲು ಸಾಧ್ಯವಾಗುತ್ತದೆ. ಇದಲ್ಲದೆ ವಿದ್ಯಾರ್ಥಿಗಳು ತಾವು ವಿಧಿವತ್ತಾಗಿ ಕಲಿಯುವ ವಿದ್ಯೆಯ ಜತೆ, ತಮ್ಮ ಸ್ವ ಇಚ್ಛೆಯಿಂದ ಪ್ರೀತಿಸುವ ವಿಷಯವನ್ನೂ ಅಧ್ಯಯನ ಮಾಡಬೇಕು. ಇದಕ್ಕಾಗಿ ಪ್ರತಿದಿನ ಹತ್ತು ನಿಮಿಷ ಮೀಸಲಿಟ್ಟರೂ ಸಾಕು. ಕಲಿಯುವ ವಿದ್ಯೆ ಇಂಜಿನಿಯರಿಂಗ್ ಆದರೂ ಪ್ರೀತಿಸುವ ವಿಷಯ ಸಮಾಜಸೇವೆ, ರಾಜಕೀಯ, ಆಡಳಿತ ಇತ್ಯಾದಿ ಇತ್ಯಾದಿ’, ಯಾವುದಾದರೂ ಆಗಬಹುದು. ಎಂದು ಅಭಿಪ್ರಾಯಪಟ್ಟರು.

ನಂತರ ನಿಟ್ಟೆ ಶಿಕ್ಷಣ ಸಂಸ್ಥೆಗಳ ಹಿರಿಯ ಸಲಹೆಗಾರ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್‌.ಆರ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಪ್ರೌಢಾವಸ್ಥೆಯಲ್ಲಿದ್ದು, ಉನ್ನತ ಶಿಕ್ಷಣ ಕಲಿಕೆಗೆ ದಾಖಲಾಗಿದ್ದಾರೆ. ಮೊದಲು ಅವರು ತಮ್ಮ ಬಾಲ್ಯದ ಮನಸ್ಥಿತಿಯಿಂದ ಹೊರ ಬಂದು ತಮ್ಮ ಜ್ಞಾನ ಹಾಗೂ ಕೌಶಲ್ಯದ ಅಭಿವೃದ್ಧಿಗೆ ನಿರಂತರ ಅಧ್ಯಯನದಲ್ಲಿ ತೊಡಗಬೇಕು ಎಂದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಹೆಚ್.ಸಿ, ನಾಗರಾಜ್‌ ಸ್ವಾಗತಿಸಿ, ಸಂಸ್ಥೆಯಲ್ಲಿ ಕೌಶಲ್ಯದ ಅಭಿವೃದ್ಧಿಗೆ ಇರುವ ಅವಕಾಶಗಳ ಬಗ್ಗೆ ಸಭಿಕರ ಗಮನ ಸೆಳೆದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago