2047ರ ಹೊತ್ತಿಗೆ ಭಾರತವನ್ನ ಅಭಿವೃದ್ಧಿ ರಾಷ್ಟ್ರವಾಗಿಸುವುದು ಸರ್ಕಾರದ ಧ್ಯೇಯ- ಡಾ.ಕೆ.ಎಂ.ಸುಸೀಂದ್ರನ್‌

2047ರ ಹೊತ್ತಿಗೆ ನಮ್ಮ ದೇಶವನ್ನು ಪರಿಪೂರ್ಣ ಅಭಿವೃದ್ಧಿ ಸಾಧಿಸಿದ ರಾಷ್ಟ್ರವನ್ನಾಗಿ ಪರಿವರ್ತಿಸುವುದು ಹಾಗೂ ವಿಶ್ವಗುರು ಸ್ಥಾನಕ್ಕೇರಿಸುವುದು ಭಾರತ ಸರ್ಕಾರದ ಗುರಿಯಾಗಿದೆ, ಇಂದಿನ ಯುವಜನತೆಗೆ ನಮ್ಮ ದೇಶದ ಪ್ರಧಾನಿಯವರು ಹೇಳಿದಂತೆ ಇದು ನಿಜಕ್ಕೂ ಅಮೃತಕಾಲ ಎಂದು ಟಾಟಾ ಕನ್‌ಸಲ್ಸ್ ಸರ್ವಿಸಸ್ (ಟಿ.ಸಿ.ಎಸ್)ನ ವಿದ್ವತ್ ವಿನಿಮಯ ವಿಭಾಗದ ಮುಖ್ಯಸ್ಥ ಡಾ. ಕೆ.ಎಂ. ಸುಸೀಂದ್ರನ್‌ ಹೇಳಿದರು.

ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜನೆಗೊಂಡಿದ್ದ 2023-2027ರ ಅವಧಿಯ ಇಂಜಿನಿಯರಿಂಗ್ ಕಲಿಕೆಯ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ನಮ್ಮ ಯುವ ಜನತೆ ದೇಶವನ್ನು ಸಮಗ್ರವಾಗಿ ಮುನ್ನೆಡೆಸುವ ಗುರುತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ನನಗಿದೆ ಎಂದರು.

ಯುವಜನರನ್ನ ಪರಿಣಿತ ತಂತ್ರಜ್ಞರನ್ನಾಗಿ ರೂಪಿಸಲು ಹಲವು ವಿದ್ಯಾ ಸಂಸ್ಥೆಗಳು ಶ್ರಮಪಡುತ್ತಿವೆ, ಅದರಲ್ಲೂ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಹಗುರಗೊಳಿಸಲು ಸಮರ್ಥವಾಗಿದ್ದು, ಟಿ.ಸಿ.ಎಸ್ ಕೂಡ ಈ ಮಹತ್ವದ ಯಾನದಲ್ಲಿ ಕೈಜೋಡಿಸಲಿದೆ. ಇದೀಗ ತಾನೆ ನಮ್ಮ ಸಂಸ್ಥೆ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಜತೆ ಒಪ್ಪಂದ ಮಾಡಿಕೊಂಡಿದೆ. ಅದರ ಪ್ರಕಾರ ನಾವು ಆಗಾಗ್ಗೆ ಬಂದು ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹಾಗೂ ಕೌಶಲ್ಯದ ಸಾಮರ್ಥ್ಯಗಳನ್ನು ಪರಿಶೀಲಿಸಲಿದ್ದೇವೆ ಮತ್ತು ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ನೆರವಾಗಲಿದ್ದೇವೆ ಎಂದು ತಿಳಿಸಿದ್ದಾರೆ.

ತಂತ್ರಜ್ಞಾನದ ಅನ್ವೇಷಣೆಗಳು ಪ್ರತಿದಿನ, ಪ್ರತಿಕ್ಷಣ ಏರುಮುಖವಾಗಿ ಸಕಾರಾತ್ಮಕ ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಕಾರಣ ವಿದ್ಯಾರ್ಥಿಗಳಿಗೆ ‘ನಿರಂತರ ಕಲಿಕೆ’ ಅನಿವಾರ್ಯವಾಗಿದೆ ಎಂದರು.

ಪದವಿ ಪಡೆದ ನಂತರವೂ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರವಾಗಿ ಸಾಗಬೇಕಿದೆ. ಆಗಲೇ ನಾವು ನಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಲು ಸಾಧ್ಯವಾಗುತ್ತದೆ. ಇದಲ್ಲದೆ ವಿದ್ಯಾರ್ಥಿಗಳು ತಾವು ವಿಧಿವತ್ತಾಗಿ ಕಲಿಯುವ ವಿದ್ಯೆಯ ಜತೆ, ತಮ್ಮ ಸ್ವ ಇಚ್ಛೆಯಿಂದ ಪ್ರೀತಿಸುವ ವಿಷಯವನ್ನೂ ಅಧ್ಯಯನ ಮಾಡಬೇಕು. ಇದಕ್ಕಾಗಿ ಪ್ರತಿದಿನ ಹತ್ತು ನಿಮಿಷ ಮೀಸಲಿಟ್ಟರೂ ಸಾಕು. ಕಲಿಯುವ ವಿದ್ಯೆ ಇಂಜಿನಿಯರಿಂಗ್ ಆದರೂ ಪ್ರೀತಿಸುವ ವಿಷಯ ಸಮಾಜಸೇವೆ, ರಾಜಕೀಯ, ಆಡಳಿತ ಇತ್ಯಾದಿ ಇತ್ಯಾದಿ’, ಯಾವುದಾದರೂ ಆಗಬಹುದು. ಎಂದು ಅಭಿಪ್ರಾಯಪಟ್ಟರು.

ನಂತರ ನಿಟ್ಟೆ ಶಿಕ್ಷಣ ಸಂಸ್ಥೆಗಳ ಹಿರಿಯ ಸಲಹೆಗಾರ ಹಾಗೂ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್‌.ಆರ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಪ್ರೌಢಾವಸ್ಥೆಯಲ್ಲಿದ್ದು, ಉನ್ನತ ಶಿಕ್ಷಣ ಕಲಿಕೆಗೆ ದಾಖಲಾಗಿದ್ದಾರೆ. ಮೊದಲು ಅವರು ತಮ್ಮ ಬಾಲ್ಯದ ಮನಸ್ಥಿತಿಯಿಂದ ಹೊರ ಬಂದು ತಮ್ಮ ಜ್ಞಾನ ಹಾಗೂ ಕೌಶಲ್ಯದ ಅಭಿವೃದ್ಧಿಗೆ ನಿರಂತರ ಅಧ್ಯಯನದಲ್ಲಿ ತೊಡಗಬೇಕು ಎಂದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಹೆಚ್.ಸಿ, ನಾಗರಾಜ್‌ ಸ್ವಾಗತಿಸಿ, ಸಂಸ್ಥೆಯಲ್ಲಿ ಕೌಶಲ್ಯದ ಅಭಿವೃದ್ಧಿಗೆ ಇರುವ ಅವಕಾಶಗಳ ಬಗ್ಗೆ ಸಭಿಕರ ಗಮನ ಸೆಳೆದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

8 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

8 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

11 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago